‘ಸೆ. 18ರಂದು ಇವರಿಗೆ ಕೊರೊನಾ ಸೋಂಕು ತಗುಲಿದ್ದು, ಮೈಸೂರಿನ ಕೋವಿಡ್ ಆಸ್ಪತ್ರೆಗೆ ಕಳುಹಿಸಲಾಗುವುದು ಎಂದು ಹೇಳಿ ಪಿರಿಯಾಪಟ್ಟಣ ತಾಲ್ಲೂಕು ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಆಂಬುಲೆನ್ಸ್ನಲ್ಲಿ ಕರೆದುಕೊಂಡು ಹೋದರು. 15 ದಿನಗಳ ನಂತರ ಕೋವಿಡ್ ಆಸ್ಪತ್ರೆಗೆ ಬಂದು ವಿಚಾರಿಸಿದಾಗ ಅಲ್ಲಿ ಪದ್ಮಮ್ಮ ಹೆಸರಿನ ರೋಗಿ ದಾಖಲಾಗಿಲ್ಲ ಎಂದು ಹೇಳಿದರು. ರಸ್ತೆ ಬದಿಯಲ್ಲಿ ಗುರುತು ಸಿಗದ ಮಹಿಳೆ ಮೃತಪಟ್ಟಿದ್ದು, ಸಂಬಂಧಿಕರು ಸಿಗದ ಕಾರಣ ಅಂತ್ಯಸಂಸ್ಕಾರ ನೆರವೇರಿಸಿರುವುದಾಗಿ ಮೇಟಗಳ್ಳಿ ಪೊಲೀಸರು ತಿಳಿಸಿದ್ದಾರೆ. ಈ ಮಹಿಳೆಯೇ ಪದ್ಮಮ್ಮ ಆಗಿದ್ದು, ಈ ಕುರಿತು ತನಿಖೆ ನಡೆಸಬೇಕು’ ಎಂದು ಅವರು ಆಗ್ರಹಿಸಿದರು.