<p>ಪಿರಿಯಾಪಟ್ಟಣ: ‘ಬುದ್ಧ, ಬಸವ, ಅಂಬೇಡ್ಕರ್ ಅವರಂತಹ ಮಹನೀಯರ ಜಯಂತಿಗಳನ್ನು ನಾವು ಸಂಭ್ರಮದಿಂದ ಆಚರಿಸಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ರಾಜು ತಿಳಿಸಿದರು.</p>.<p>ಪಟ್ಟಣದ ವಕೀಲರ ಭವನದಲ್ಲಿ ವಕೀಲರ ಸಂಘದಿಂದ ಸೋಮವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹನೀಯರ ಸಂದೇಶ ಪಾಲಿಸಬೇಕು ಎಂದರು.</p>.<p>ಸಮಾನತೆ ಪ್ರತಿಪಾದಿಸಿ, ಸಂವಿಧಾನದಲ್ಲಿ ಅಳವಡಿಸುವ ಮೂಲಕ ಬದ್ಧತೆ ತೋರಿದ ಅಂಬೇಡ್ಕರ್ ಅವರು, ನಂತರ ರಚನೆಯಾದ ಎಲ್ಲಾ ಕಾನೂನುಗಳಲ್ಲಿ ಸಮಾಜಕ್ಕೆ ಬೇಕಾದ ಹಕ್ಕು, ಸೌಲಭ್ಯ, ಮೂಢನಂಬಿಕೆ ನಿಷೇಧ ಮತ್ತಿತರ ಅಂಶಗಳನ್ನು ಸೇರಿಸಿದ್ದರು ಎಂದು ಸ್ಮರಿಸಿದರು.</p>.<p>ಯಾವುದೇ ಸುಧಾರಣೆಯು ಒಮ್ಮೆಲೇ ಸಂಭವಿಸುವುದಿಲ್ಲ. ಕಾಲ ಕಾಲಕ್ಕೆ ಆಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನ ರಚಿಸಲಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಆರ್.ಯೋಗೀಶ್ ಮಾತನಾಡಿ, ಸಂವಿಧಾನದ ಶಕ್ತಿ ಏನು ಎಂಬುದನ್ನು ಅರಿಯಬೇಕಾದರೆ ಸಾಮಾನ್ಯ ರೈತನ ಮಗ, ಟೀ ಮಾರುತ್ತಿದ್ದವರು ಈ ದೇಶದ ಪ್ರಧಾನಿಯಾಗಿದ್ದಾರೆ. ಇದು ಸಂವಿಧಾನದಿಂದಲೇ ಸಾಧ್ಯ ಎಂದರು.</p>.<p>ಅಹಿಂಸಾ ಮಾರ್ಗ ಎಂದರೆ ತೊಂದರೆ ಕೊಡುವುದನ್ನು ತಡೆಯುವುದು. ಮಹನೀಯರ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ನ್ಯಾಯಾಧೀಶರಾದ ಜೆ.ಶ್ವೇತಾ ಮಾತನಾಡಿ, ಹೆಣ್ಣು ಮಕ್ಕಳು ಪ್ರತಿದಿನ ಅಂಬೇಡ್ಕರ್ ಅವರನ್ನು ನೆನೆಯಬೇಕಿದೆ. ಸಂವಿಧಾನದಲ್ಲಿ ಹೆಣ್ಣಿಗೆ ಹಲವು ಸಮಾನ ಹಕ್ಕುಗಳನ್ನು ನೀಡುವ ಜೊತೆಗೆ, ಕಾನೂನಿನ ಬಲ ನೀಡಲಾಗಿದೆ ಎಂದರು.</p>.<p>ವಕೀಲ ಮಹದೇವಯ್ಯ ಮಾತನಾಡಿ, ಅಂಬೇಡ್ಕರ್ ಬಾಲ್ಯದಲ್ಲಿ ಅನುಭವಿಸಿದ ಅವಮಾನಗಳನ್ನು ಸವಾಲಾಗಿ ಸ್ವೀಕರಿಸಿ 32 ಪದವಿ ಪಡೆದಿದ್ದರು. ದಮನಿತರ ವರ್ಗಕ್ಕೆ ಹೋರಾಟದ ಹಾದಿಯಿಂದ ಪಡೆದ ಅನುಭವವನ್ನು ಮೂಲವಾಗಿಟ್ಟುಕೊಂಡು ಉತ್ತಮ ಸಂವಿಧಾನವನ್ನು ದೇಶಕ್ಕೆ ನೀಡಿದ್ದಾರೆ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಧನಪಾಲ್, ಖಜಾಂಚಿ ಹರೀಶ್, ಉಪಾಧ್ಯಕ್ಷ ಚಂದ್ರೇಗೌಡ, ಎಪಿಪಿ ಶಿವಶಂಕರ್ ಗಾವಂಕರ್, ಲೋಕೇಶ್ ಮತ್ತು ಸುಭಾಷ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-38-497423975</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿರಿಯಾಪಟ್ಟಣ: ‘ಬುದ್ಧ, ಬಸವ, ಅಂಬೇಡ್ಕರ್ ಅವರಂತಹ ಮಹನೀಯರ ಜಯಂತಿಗಳನ್ನು ನಾವು ಸಂಭ್ರಮದಿಂದ ಆಚರಿಸಬೇಕು’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ರಾಜು ತಿಳಿಸಿದರು.</p>.<p>ಪಟ್ಟಣದ ವಕೀಲರ ಭವನದಲ್ಲಿ ವಕೀಲರ ಸಂಘದಿಂದ ಸೋಮವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹನೀಯರ ಸಂದೇಶ ಪಾಲಿಸಬೇಕು ಎಂದರು.</p>.<p>ಸಮಾನತೆ ಪ್ರತಿಪಾದಿಸಿ, ಸಂವಿಧಾನದಲ್ಲಿ ಅಳವಡಿಸುವ ಮೂಲಕ ಬದ್ಧತೆ ತೋರಿದ ಅಂಬೇಡ್ಕರ್ ಅವರು, ನಂತರ ರಚನೆಯಾದ ಎಲ್ಲಾ ಕಾನೂನುಗಳಲ್ಲಿ ಸಮಾಜಕ್ಕೆ ಬೇಕಾದ ಹಕ್ಕು, ಸೌಲಭ್ಯ, ಮೂಢನಂಬಿಕೆ ನಿಷೇಧ ಮತ್ತಿತರ ಅಂಶಗಳನ್ನು ಸೇರಿಸಿದ್ದರು ಎಂದು ಸ್ಮರಿಸಿದರು.</p>.<p>ಯಾವುದೇ ಸುಧಾರಣೆಯು ಒಮ್ಮೆಲೇ ಸಂಭವಿಸುವುದಿಲ್ಲ. ಕಾಲ ಕಾಲಕ್ಕೆ ಆಗಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಸಂವಿಧಾನ ರಚಿಸಲಾಗಿದೆ ಎಂದು ಅಭಿಪ್ರಾಯಪಟ್ಟರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ಆರ್.ಯೋಗೀಶ್ ಮಾತನಾಡಿ, ಸಂವಿಧಾನದ ಶಕ್ತಿ ಏನು ಎಂಬುದನ್ನು ಅರಿಯಬೇಕಾದರೆ ಸಾಮಾನ್ಯ ರೈತನ ಮಗ, ಟೀ ಮಾರುತ್ತಿದ್ದವರು ಈ ದೇಶದ ಪ್ರಧಾನಿಯಾಗಿದ್ದಾರೆ. ಇದು ಸಂವಿಧಾನದಿಂದಲೇ ಸಾಧ್ಯ ಎಂದರು.</p>.<p>ಅಹಿಂಸಾ ಮಾರ್ಗ ಎಂದರೆ ತೊಂದರೆ ಕೊಡುವುದನ್ನು ತಡೆಯುವುದು. ಮಹನೀಯರ ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ನ್ಯಾಯಾಧೀಶರಾದ ಜೆ.ಶ್ವೇತಾ ಮಾತನಾಡಿ, ಹೆಣ್ಣು ಮಕ್ಕಳು ಪ್ರತಿದಿನ ಅಂಬೇಡ್ಕರ್ ಅವರನ್ನು ನೆನೆಯಬೇಕಿದೆ. ಸಂವಿಧಾನದಲ್ಲಿ ಹೆಣ್ಣಿಗೆ ಹಲವು ಸಮಾನ ಹಕ್ಕುಗಳನ್ನು ನೀಡುವ ಜೊತೆಗೆ, ಕಾನೂನಿನ ಬಲ ನೀಡಲಾಗಿದೆ ಎಂದರು.</p>.<p>ವಕೀಲ ಮಹದೇವಯ್ಯ ಮಾತನಾಡಿ, ಅಂಬೇಡ್ಕರ್ ಬಾಲ್ಯದಲ್ಲಿ ಅನುಭವಿಸಿದ ಅವಮಾನಗಳನ್ನು ಸವಾಲಾಗಿ ಸ್ವೀಕರಿಸಿ 32 ಪದವಿ ಪಡೆದಿದ್ದರು. ದಮನಿತರ ವರ್ಗಕ್ಕೆ ಹೋರಾಟದ ಹಾದಿಯಿಂದ ಪಡೆದ ಅನುಭವವನ್ನು ಮೂಲವಾಗಿಟ್ಟುಕೊಂಡು ಉತ್ತಮ ಸಂವಿಧಾನವನ್ನು ದೇಶಕ್ಕೆ ನೀಡಿದ್ದಾರೆ ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಧನಪಾಲ್, ಖಜಾಂಚಿ ಹರೀಶ್, ಉಪಾಧ್ಯಕ್ಷ ಚಂದ್ರೇಗೌಡ, ಎಪಿಪಿ ಶಿವಶಂಕರ್ ಗಾವಂಕರ್, ಲೋಕೇಶ್ ಮತ್ತು ಸುಭಾಷ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-38-497423975</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>