<p>ಬೆಟ್ಟದಪುರ: ಹಸುವಿಗೆ ಹುಲ್ಲು ಹಾಕಲು ಮೆದೆಯಿಂದ ಹುಲ್ಲು ತೆಗೆಯುತ್ತಿದ್ದ ಬಾಲಕನಿಗೆ ಹಾವು ಕಚ್ಚಿ ಶನಿವಾರ ಮೃತಪಟ್ಟಿದ್ದಾನೆ.</p>.<p>ಕಂಪಲಾಪುರ ಗ್ರಾಮದ ಕೋಡಿ ಬಸವೇಶ್ವರ ದೇವಾಲಯ ಸಮೀಪದ ನಿವಾಸಿಗಳಾದ ಶಶಿಕಲಾ–ಮಂಜುನಾಥ್ ದಂಪತಿಯ ಪುತ್ರ ವೆಂಕಟೇಶ್ (14) ಮೃತ ಬಾಲಕ.</p>.<p>ತಾಯಿಯೊಂದಿಗೆ ಚಿಕ್ಕನೇರಳೆ ಸಮೀಪದ ಕೆಸುವಿನಕೆರೆ ಗ್ರಾಮದಲ್ಲಿರುವ ದೊಡ್ಡಮ್ಮನ ಮನೆ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಆತ, ಮದುವೆ ಬಳಿಕವೂ ಅಲ್ಲಿಯೇ ಉಳಿದುಕೊಂಡಿದ್ದ. ಹುಲ್ಲು ತೆಗೆದುಕೊಳ್ಳುವಾಗ ಬಲಗೈ ಬೆರಳಿಗೆ ಹಾವು ಕಚ್ಚಿದ್ದು, ಈ ವಿಚಾರವನ್ನು ಮನೆಯವರಿಗೆ ತಿಳಿಸದೇ ಅಂಗಡಿಯಿಂದ ಪ್ಲಾಸ್ಟರ್ ತಂದು ಬೆರಳಿಗೆ ಸುತ್ತಿಕೊಂಡು ಊಟ ಮಾಡಿದ್ದಾನೆ. ಕೆಲವೇ ಸಮಯದಲ್ಲಿ ಅಸ್ವಸ್ಥಗೊಂಡ ಆತನನ್ನು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಮೃತಪಟ್ಟಿದ್ದಾನೆ.</p>.<p>ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-51-1678176810</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಟ್ಟದಪುರ: ಹಸುವಿಗೆ ಹುಲ್ಲು ಹಾಕಲು ಮೆದೆಯಿಂದ ಹುಲ್ಲು ತೆಗೆಯುತ್ತಿದ್ದ ಬಾಲಕನಿಗೆ ಹಾವು ಕಚ್ಚಿ ಶನಿವಾರ ಮೃತಪಟ್ಟಿದ್ದಾನೆ.</p>.<p>ಕಂಪಲಾಪುರ ಗ್ರಾಮದ ಕೋಡಿ ಬಸವೇಶ್ವರ ದೇವಾಲಯ ಸಮೀಪದ ನಿವಾಸಿಗಳಾದ ಶಶಿಕಲಾ–ಮಂಜುನಾಥ್ ದಂಪತಿಯ ಪುತ್ರ ವೆಂಕಟೇಶ್ (14) ಮೃತ ಬಾಲಕ.</p>.<p>ತಾಯಿಯೊಂದಿಗೆ ಚಿಕ್ಕನೇರಳೆ ಸಮೀಪದ ಕೆಸುವಿನಕೆರೆ ಗ್ರಾಮದಲ್ಲಿರುವ ದೊಡ್ಡಮ್ಮನ ಮನೆ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಆತ, ಮದುವೆ ಬಳಿಕವೂ ಅಲ್ಲಿಯೇ ಉಳಿದುಕೊಂಡಿದ್ದ. ಹುಲ್ಲು ತೆಗೆದುಕೊಳ್ಳುವಾಗ ಬಲಗೈ ಬೆರಳಿಗೆ ಹಾವು ಕಚ್ಚಿದ್ದು, ಈ ವಿಚಾರವನ್ನು ಮನೆಯವರಿಗೆ ತಿಳಿಸದೇ ಅಂಗಡಿಯಿಂದ ಪ್ಲಾಸ್ಟರ್ ತಂದು ಬೆರಳಿಗೆ ಸುತ್ತಿಕೊಂಡು ಊಟ ಮಾಡಿದ್ದಾನೆ. ಕೆಲವೇ ಸಮಯದಲ್ಲಿ ಅಸ್ವಸ್ಥಗೊಂಡ ಆತನನ್ನು ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಮೃತಪಟ್ಟಿದ್ದಾನೆ.</p>.<p>ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-51-1678176810</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>