<p>ಪಿರಿಯಾಪಟ್ಟಣ: 21 ರಂದು ತಾಲ್ಲೂಕಿ ನಲ್ಲಿ ಅಂದಾಜು ₹ 419.78 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನೇತೃತ್ವದ ಕಾರ್ಯಕ್ರಮಕ್ಕೆ 12 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಸಚಿವ ಕೆ ವೆಂಕಟೇಶ್ ತಿಳಿಸಿದರು.</p>.<p>ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘₹9.19 ಕೋಟಿ ವೆಚ್ಚದಲ್ಲಿ ಪಟ್ಟಣದ ಶಕ್ತಿದೇವತೆ ಮಸಣಿಕಮ್ಮ ದೇಗುಲದ ಜೀರ್ಣೋದ್ಧಾರ, ₹ 50 ಕೋಟಿ ಬೆಟ್ಟದಪುರ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ದೇವಾಲಯಕ್ಕೆ ರಸ್ತೆ ನಿರ್ಮಾಣನು, ₹ 5 ಕೋಟಿ ವೆಚ್ಚದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಸಹಕಾರದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ನಿರ್ಮಾಣ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಲಿದೆ’ ಎಂದರು.</p>.<p>‘ಕುವೆಂಪು ಭವನ ನಿರ್ಮಾಣದ ಜಮೀನು ಇನ್ನೂ ನಿಮ್ಮ ಹೆಸರಿನಲ್ಲಿಯೇ ಇದ್ದು , ಜನಿಕ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದಾರೆ’ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಆರ್ಟಿಸಿಯಲ್ಲಿ ತಾಂತ್ರಿಕ ತೊಂದರೆಯಿಂದ ದಾನ ಪತ್ರ ಆಗಿರಲಿಲ್ಲ ಎಂದು ಸ್ಪಷ್ಟಪಡಿಸಿ, 3 ಗಂಟೆಗೆ ದಾನ ಪತ್ರ ಬರೆದು ಕೊಡುವೆ’ ಎಂದರು.</p>.<p>ದೇವಾಲಯದ ಅಭಿವೃದ್ಧಿಗೆ ಸಾರ್ವಜನಿಕರ ದೇಣಿಗೆ ಸ್ವೀಕರಿಸಲಾಗುವುದು. ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸಲು ₹ 1 ಕೋಟಿ ಹಣ ಬಿಡುಗಡೆ, ವಾಲ್ಮೀಕಿ ಭವನ ಕಾಮಗಾರಿ ಪೂರ್ಣಗೊಳಿಸುವ ಹಂತಕ್ಕೆ ತಲುಪಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಟ್ಟಿರುವ ಎಕ್ಸ್ ರೇ ಯಂತ್ರದ ಬದಲಿಗೆ ₹16 ಲಕ್ಷ ನೀಡಿ ಹೊಸ ಯಂತ್ರ ಖರೀದಿಸಲಾಗುತ್ತಿದೆ. ಹೆಚ್ಚುವರಿ ಪ್ರಸೂತಿ ವೈದ್ಯರನ್ನು ನೇಮಕ ಮಾಡಲಾಗುವುದು ಎಂದರು.</p>.<p>ಕೆ. ಹೊಲದಪ್ಪ, ರಹಮತ್ ಜಾನ್ ಬಾಬು, ಡಿ. ಟಿ. ಸ್ವಾಮಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-38-698390082</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿರಿಯಾಪಟ್ಟಣ: 21 ರಂದು ತಾಲ್ಲೂಕಿ ನಲ್ಲಿ ಅಂದಾಜು ₹ 419.78 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನೇತೃತ್ವದ ಕಾರ್ಯಕ್ರಮಕ್ಕೆ 12 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ಸಚಿವ ಕೆ ವೆಂಕಟೇಶ್ ತಿಳಿಸಿದರು.</p>.<p>ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘₹9.19 ಕೋಟಿ ವೆಚ್ಚದಲ್ಲಿ ಪಟ್ಟಣದ ಶಕ್ತಿದೇವತೆ ಮಸಣಿಕಮ್ಮ ದೇಗುಲದ ಜೀರ್ಣೋದ್ಧಾರ, ₹ 50 ಕೋಟಿ ಬೆಟ್ಟದಪುರ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದ ದೇವಾಲಯಕ್ಕೆ ರಸ್ತೆ ನಿರ್ಮಾಣನು, ₹ 5 ಕೋಟಿ ವೆಚ್ಚದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಸಹಕಾರದೊಂದಿಗೆ ನಿರ್ಮಿಸುತ್ತಿರುವ ಕುವೆಂಪು ಭವನ ನಿರ್ಮಾಣ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಲಿದೆ’ ಎಂದರು.</p>.<p>‘ಕುವೆಂಪು ಭವನ ನಿರ್ಮಾಣದ ಜಮೀನು ಇನ್ನೂ ನಿಮ್ಮ ಹೆಸರಿನಲ್ಲಿಯೇ ಇದ್ದು , ಜನಿಕ ಆಕ್ಷೇಪ ವ್ಯಕ್ತ ಪಡಿಸುತ್ತಿದ್ದಾರೆ’ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಆರ್ಟಿಸಿಯಲ್ಲಿ ತಾಂತ್ರಿಕ ತೊಂದರೆಯಿಂದ ದಾನ ಪತ್ರ ಆಗಿರಲಿಲ್ಲ ಎಂದು ಸ್ಪಷ್ಟಪಡಿಸಿ, 3 ಗಂಟೆಗೆ ದಾನ ಪತ್ರ ಬರೆದು ಕೊಡುವೆ’ ಎಂದರು.</p>.<p>ದೇವಾಲಯದ ಅಭಿವೃದ್ಧಿಗೆ ಸಾರ್ವಜನಿಕರ ದೇಣಿಗೆ ಸ್ವೀಕರಿಸಲಾಗುವುದು. ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸಲು ₹ 1 ಕೋಟಿ ಹಣ ಬಿಡುಗಡೆ, ವಾಲ್ಮೀಕಿ ಭವನ ಕಾಮಗಾರಿ ಪೂರ್ಣಗೊಳಿಸುವ ಹಂತಕ್ಕೆ ತಲುಪಿದೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಟ್ಟಿರುವ ಎಕ್ಸ್ ರೇ ಯಂತ್ರದ ಬದಲಿಗೆ ₹16 ಲಕ್ಷ ನೀಡಿ ಹೊಸ ಯಂತ್ರ ಖರೀದಿಸಲಾಗುತ್ತಿದೆ. ಹೆಚ್ಚುವರಿ ಪ್ರಸೂತಿ ವೈದ್ಯರನ್ನು ನೇಮಕ ಮಾಡಲಾಗುವುದು ಎಂದರು.</p>.<p>ಕೆ. ಹೊಲದಪ್ಪ, ರಹಮತ್ ಜಾನ್ ಬಾಬು, ಡಿ. ಟಿ. ಸ್ವಾಮಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260419-38-698390082</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>