<p>ಪಿರಿಯಾಪಟ್ಟಣ: ‘ಇರುವುದೊಂದೆ ಭೂಮಿ ಅದನ್ನು ರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ, ಭೂಮಿಯನ್ನು ಉಳಿಸಿದರೆ ನಮ್ಮ ಭವಿಷ್ಯವನ್ನು ಉಳಿಸಿದಂತೆ’ ಎಂದು ಸಿವಿಲ್ ನ್ಯಾಯಾಧೀಶ ಎಂ.ರಾಜು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಅರಣ್ಯ ಇಲಾಖೆ, ವಕೀಲರ ಸಂಘ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ವಿಶ್ವ ಭೂ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ನಾವು ನವೀಕರಿಸಬಹುದಾದ ಇಂಧನನ್ನು ಬಳಸಿದರೆ ಭೂಮಿಯನ್ನು ರಕ್ಷಿಸಬಹುದು. ಪ್ರಾಣಿ, ಪಕ್ಷಿ, ಅರಣ್ಯ ಮತ್ತು ನೀರನ್ನು ನಾವು ಕಾಪಾಡಬೇಕು, ಹೆಚ್ಚು ಮರಗಳನ್ನು ನೆಟ್ಟರೆ ಭೂಮಿ ಹಸಿರಾಗುತ್ತದೆ, ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸಬೇಕು’ ಎಂದರು.</p>.<p>ಹೆಚ್ಚುವರಿ ನ್ಯಾಯಾಧೀಶರಾದ ಜೆ.ಶ್ವೇತಾ ಮಾತನಾಡಿ, ‘ಮಣ್ಣಿನ ರಕ್ಷಣೆ ಮಾಡಬೇಕಾದರೆ ನಾವು ಮರ ಗಿಡಗಳನ್ನು ನೆಡಬೇಕು, ಮರಗಳ ಕಡಿತವನ್ನು ತಪ್ಪಿಸಬೇಕು. ಪರಿಸರಸ್ನೇಹಿ ಉತ್ಪನ್ನಗಳನ್ನು ಬಳಸಬೇಕು’ ಎಂದರು.</p>.<p>ವಲಯ ಅರಣ್ಯಾಧಿಕಾರಿ ಪದ್ಮಶ್ರೀ ನಂಜಪ್ಪ ಮಾತನಾಡಿ, ‘ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ಬಳಕೆ ನಮ್ಮ ಮುಂದಿನ ಪೀಳಿಗೆಯ ಬದುಕನ್ನೇ ಅಪಾಯಕ್ಕೆ ದೂಡುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ವಕೀಲರ ಸಂಘದ ಕಾರ್ಯದರ್ಶಿ ಕೆ.ಶಂಕರ್, ಉಪಾಧ್ಯಕ್ಷ ಚಂದ್ರೇಗೌಡ, ಖಜಾಂಚಿ ಹರೀಶ್, ವಕೀಲ ಪಾಲಾಕ್ಷ, ಪಾರ್ವತಿ, ಸಂತೋಷ್, ವಿಲಾಸ್, ಆನಂದ್, ಶರಣಪ್ಪ, ರವಿ, ನಟರಾಜ್, ವೀರೇಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-38-1976113800</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿರಿಯಾಪಟ್ಟಣ: ‘ಇರುವುದೊಂದೆ ಭೂಮಿ ಅದನ್ನು ರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ, ಭೂಮಿಯನ್ನು ಉಳಿಸಿದರೆ ನಮ್ಮ ಭವಿಷ್ಯವನ್ನು ಉಳಿಸಿದಂತೆ’ ಎಂದು ಸಿವಿಲ್ ನ್ಯಾಯಾಧೀಶ ಎಂ.ರಾಜು ತಿಳಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಅರಣ್ಯ ಇಲಾಖೆ, ವಕೀಲರ ಸಂಘ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಡೆದ ವಿಶ್ವ ಭೂ ದಿನಾಚರಣೆಯಲ್ಲಿ ಮಾತನಾಡಿದರು.</p>.<p>‘ನಾವು ನವೀಕರಿಸಬಹುದಾದ ಇಂಧನನ್ನು ಬಳಸಿದರೆ ಭೂಮಿಯನ್ನು ರಕ್ಷಿಸಬಹುದು. ಪ್ರಾಣಿ, ಪಕ್ಷಿ, ಅರಣ್ಯ ಮತ್ತು ನೀರನ್ನು ನಾವು ಕಾಪಾಡಬೇಕು, ಹೆಚ್ಚು ಮರಗಳನ್ನು ನೆಟ್ಟರೆ ಭೂಮಿ ಹಸಿರಾಗುತ್ತದೆ, ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸಬೇಕು’ ಎಂದರು.</p>.<p>ಹೆಚ್ಚುವರಿ ನ್ಯಾಯಾಧೀಶರಾದ ಜೆ.ಶ್ವೇತಾ ಮಾತನಾಡಿ, ‘ಮಣ್ಣಿನ ರಕ್ಷಣೆ ಮಾಡಬೇಕಾದರೆ ನಾವು ಮರ ಗಿಡಗಳನ್ನು ನೆಡಬೇಕು, ಮರಗಳ ಕಡಿತವನ್ನು ತಪ್ಪಿಸಬೇಕು. ಪರಿಸರಸ್ನೇಹಿ ಉತ್ಪನ್ನಗಳನ್ನು ಬಳಸಬೇಕು’ ಎಂದರು.</p>.<p>ವಲಯ ಅರಣ್ಯಾಧಿಕಾರಿ ಪದ್ಮಶ್ರೀ ನಂಜಪ್ಪ ಮಾತನಾಡಿ, ‘ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ಬಳಕೆ ನಮ್ಮ ಮುಂದಿನ ಪೀಳಿಗೆಯ ಬದುಕನ್ನೇ ಅಪಾಯಕ್ಕೆ ದೂಡುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ವಕೀಲರ ಸಂಘದ ಕಾರ್ಯದರ್ಶಿ ಕೆ.ಶಂಕರ್, ಉಪಾಧ್ಯಕ್ಷ ಚಂದ್ರೇಗೌಡ, ಖಜಾಂಚಿ ಹರೀಶ್, ವಕೀಲ ಪಾಲಾಕ್ಷ, ಪಾರ್ವತಿ, ಸಂತೋಷ್, ವಿಲಾಸ್, ಆನಂದ್, ಶರಣಪ್ಪ, ರವಿ, ನಟರಾಜ್, ವೀರೇಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-38-1976113800</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>