<p><strong>ಪಿರಿಯಾಪಟ್ಟಣ</strong>: ಎರಡು ದಿನಗಳಿಂದ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಚುರುಕು ಪಡೆದಿದೆ.</p>.<p>ಭೂಮಿಯನ್ನು ಉಳುಮೆ ಮಾಡಿ ಹದ ಮಾಡಿಟ್ಟುಕೊಂಡಿದ್ದ ರೈತರು ಮಳೆಯಿಂದಾಗಿ ತಂಬಾಕು ಸಸಿಗಳ ನಾಟಿ ಮಾಡುತ್ತಿದ್ದಾರೆ. ಮಳೆ ಬೀಳಬಹುದೆಂಬ ನಿರೀಕ್ಷೆಯಿಂದ ಈಗಾಗಲೇ ಕೆಲವರು ತಂಬಾಕು ನಾಟಿ ಮಾಡಿದ್ದರು. ಸಕಾಲದಲ್ಲಿ ಬಿದ್ದ ಮಳೆಯಿಂದಾಗಿ ಉತ್ತಮ ಬೆಳವಣಿಗೆ ಕಾಣುವಂತಾಗಿದೆ.</p>.<p>‘ಈ ಬಾರಿ ಬಿಸಿಲಿನ ತೀವ್ರತೆಗೆ ಹಲವು ಕಡೆ ಕೆರೆ, ಕೊಳವೆಬಾವಿಗಳಲ್ಲಿ ನೀರು ಬರಿದಾಗಿತ್ತು. ಇದರಿಂದ ತೆಂಗು, ಅಡಿಕೆ, ಬಾಳೆ ಬೆಳೆಗಳು ಒಣಗುವ ಸ್ಥಿತಿ ನಿರ್ಮಾಣವಾಗಿತ್ತು. ಮಳೆಯಿಂದ 15 ದಿನಗಳು ತೊಂದರೆ ಇಲ್ಲ’ ಎನ್ನುತ್ತಾರೆ ಕೃಷಿಕ ಮಲ್ಲಿನಾಥಪುರ ಗಣೇಶ್.</p>.<p>ಶುಂಠಿ ಬೆಳೆಗೆ ಈ ಬಾರಿ ಉತ್ತಮ ದರ ದೊರಕಿರುವುದರಿಂದ ಶುಂಠಿ ನಾಟಿ ಮತ್ತು ಈಗಾಗಲೇ ನಾಟಿ ಮಾಡಿರುವ ಶುಂಠಿಗೆ ಉತ್ತಮ ಕೃಷಿ ಕೆಲಸ ಮಾಡಲು ಸಾಧ್ಯವಾಗುತ್ತಿದೆ. ಕೆಲವು ಭಾಗಗಳಲ್ಲಿ ಮುಸುಕಿನ ಜೋಳದ ಬಿತ್ತನೆ ಕಾರ್ಯ ಸಹ ಚುರುಕುಗೊಂಡಿದೆ.</p>.<p>ತಂಬಾಕು ಮಂಡಳಿ ಹರಾಜು ಮಾರುಕಟ್ಟೆಯಲ್ಲಿ ತಂಬಾಕಿಗೆ ಕಡಿಮೆ ಕೋಟಾ ನಿಗದಿಪಡಿಸಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಆದರೂ ಈ ಬಾರಿ ಹೆಚ್ಚಿನ ಪ್ರದೇಶದಲ್ಲಿ ನಾಟಿ ಕಾರ್ಯ ನಡೆಸುತ್ತಿರುವುದು ಬೆಲೆ ಕುಸಿತದ ಆತಂಕ ಕಾಡತೊಡಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-38-2063932346</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ</strong>: ಎರಡು ದಿನಗಳಿಂದ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆ ಚುರುಕು ಪಡೆದಿದೆ.</p>.<p>ಭೂಮಿಯನ್ನು ಉಳುಮೆ ಮಾಡಿ ಹದ ಮಾಡಿಟ್ಟುಕೊಂಡಿದ್ದ ರೈತರು ಮಳೆಯಿಂದಾಗಿ ತಂಬಾಕು ಸಸಿಗಳ ನಾಟಿ ಮಾಡುತ್ತಿದ್ದಾರೆ. ಮಳೆ ಬೀಳಬಹುದೆಂಬ ನಿರೀಕ್ಷೆಯಿಂದ ಈಗಾಗಲೇ ಕೆಲವರು ತಂಬಾಕು ನಾಟಿ ಮಾಡಿದ್ದರು. ಸಕಾಲದಲ್ಲಿ ಬಿದ್ದ ಮಳೆಯಿಂದಾಗಿ ಉತ್ತಮ ಬೆಳವಣಿಗೆ ಕಾಣುವಂತಾಗಿದೆ.</p>.<p>‘ಈ ಬಾರಿ ಬಿಸಿಲಿನ ತೀವ್ರತೆಗೆ ಹಲವು ಕಡೆ ಕೆರೆ, ಕೊಳವೆಬಾವಿಗಳಲ್ಲಿ ನೀರು ಬರಿದಾಗಿತ್ತು. ಇದರಿಂದ ತೆಂಗು, ಅಡಿಕೆ, ಬಾಳೆ ಬೆಳೆಗಳು ಒಣಗುವ ಸ್ಥಿತಿ ನಿರ್ಮಾಣವಾಗಿತ್ತು. ಮಳೆಯಿಂದ 15 ದಿನಗಳು ತೊಂದರೆ ಇಲ್ಲ’ ಎನ್ನುತ್ತಾರೆ ಕೃಷಿಕ ಮಲ್ಲಿನಾಥಪುರ ಗಣೇಶ್.</p>.<p>ಶುಂಠಿ ಬೆಳೆಗೆ ಈ ಬಾರಿ ಉತ್ತಮ ದರ ದೊರಕಿರುವುದರಿಂದ ಶುಂಠಿ ನಾಟಿ ಮತ್ತು ಈಗಾಗಲೇ ನಾಟಿ ಮಾಡಿರುವ ಶುಂಠಿಗೆ ಉತ್ತಮ ಕೃಷಿ ಕೆಲಸ ಮಾಡಲು ಸಾಧ್ಯವಾಗುತ್ತಿದೆ. ಕೆಲವು ಭಾಗಗಳಲ್ಲಿ ಮುಸುಕಿನ ಜೋಳದ ಬಿತ್ತನೆ ಕಾರ್ಯ ಸಹ ಚುರುಕುಗೊಂಡಿದೆ.</p>.<p>ತಂಬಾಕು ಮಂಡಳಿ ಹರಾಜು ಮಾರುಕಟ್ಟೆಯಲ್ಲಿ ತಂಬಾಕಿಗೆ ಕಡಿಮೆ ಕೋಟಾ ನಿಗದಿಪಡಿಸಿರುವುದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಆದರೂ ಈ ಬಾರಿ ಹೆಚ್ಚಿನ ಪ್ರದೇಶದಲ್ಲಿ ನಾಟಿ ಕಾರ್ಯ ನಡೆಸುತ್ತಿರುವುದು ಬೆಲೆ ಕುಸಿತದ ಆತಂಕ ಕಾಡತೊಡಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-38-2063932346</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>