<p>ಪಿರಿಯಾಪಟ್ಟಣ: ‘ಜನಸಾಮಾನ್ಯರ ನೋವು ನಲಿವುಗಳಿಗೆ ಸ್ಪಂದಿಸುವ ಗುಣವನ್ನು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೊಂದಿದ್ದು, ಅವರಿಗೆ ಕೇಂದ್ರ ಸಚಿವ ಸ್ಥಾನ ದೊರಕಬೇಕು’ ಎಂದು ಮಾಜಿ ಶಾಸಕ ಎಚ್.ಸಿ.ಬಸವರಾಜ್ ಹೇಳಿದರು.</p>.<p>ಸಂಸದರ ಜನ್ಮದಿನ ಪ್ರಯುಕ್ತ ಮಂಗಳವಾರ ತಾಲ್ಲೂಕು ಬಿಜೆಪಿ ಘಟಕದಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳರೋಗಿಗಳಿಗೆ ಮಂಗಳವಾರ ಹಣ್ಣು ಮತ್ತು ಬ್ರೆಡ್ ವಿತರಿಸಿ ಮಾತನಾಡಿದರು.</p>.<p>‘ಸರಳ ವ್ಯಕ್ತಿತ್ವವನ್ನು ಹೊಂದಿರುವ ಯದುವೀರ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದರು.</p>.<p>ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ.ರಾಜೇಂದ್ರ ಮಾತನಾಡಿ, ‘ಸಂಸದರ ಸಾಮಾಜಿಕ ಕಳಕಳಿಯಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ’ ಎಂದರು.</p>.<p>ಬಿಜೆಪಿ ಮುಖಂಡರಾದ ಆರ್.ಟಿ.ಸತೀಶ್, ಟಿ.ರಮೇಶ್, ಲೋಕಪಾಲಯ್ಯ, ರವಿ, ಮೋಹನ್ ಲಾಲ್, ಪ್ರಹ್ಲಾದ್, ನಿತ್ಯಾನಂದ, ಪ್ರಸಾದ್ ಕುಟ್ಟಿ, ರಾಜೇ ಅರಸ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-38-815817994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಿರಿಯಾಪಟ್ಟಣ: ‘ಜನಸಾಮಾನ್ಯರ ನೋವು ನಲಿವುಗಳಿಗೆ ಸ್ಪಂದಿಸುವ ಗುಣವನ್ನು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೊಂದಿದ್ದು, ಅವರಿಗೆ ಕೇಂದ್ರ ಸಚಿವ ಸ್ಥಾನ ದೊರಕಬೇಕು’ ಎಂದು ಮಾಜಿ ಶಾಸಕ ಎಚ್.ಸಿ.ಬಸವರಾಜ್ ಹೇಳಿದರು.</p>.<p>ಸಂಸದರ ಜನ್ಮದಿನ ಪ್ರಯುಕ್ತ ಮಂಗಳವಾರ ತಾಲ್ಲೂಕು ಬಿಜೆಪಿ ಘಟಕದಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುವ ಒಳರೋಗಿಗಳಿಗೆ ಮಂಗಳವಾರ ಹಣ್ಣು ಮತ್ತು ಬ್ರೆಡ್ ವಿತರಿಸಿ ಮಾತನಾಡಿದರು.</p>.<p>‘ಸರಳ ವ್ಯಕ್ತಿತ್ವವನ್ನು ಹೊಂದಿರುವ ಯದುವೀರ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದರು.</p>.<p>ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ವಿ.ರಾಜೇಂದ್ರ ಮಾತನಾಡಿ, ‘ಸಂಸದರ ಸಾಮಾಜಿಕ ಕಳಕಳಿಯಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ’ ಎಂದರು.</p>.<p>ಬಿಜೆಪಿ ಮುಖಂಡರಾದ ಆರ್.ಟಿ.ಸತೀಶ್, ಟಿ.ರಮೇಶ್, ಲೋಕಪಾಲಯ್ಯ, ರವಿ, ಮೋಹನ್ ಲಾಲ್, ಪ್ರಹ್ಲಾದ್, ನಿತ್ಯಾನಂದ, ಪ್ರಸಾದ್ ಕುಟ್ಟಿ, ರಾಜೇ ಅರಸ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-38-815817994</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>