‘ರಣಹದ್ದುಗಳ ಸಂತತಿಯು ಶೇ 96ರಷ್ಟು ಕುಸಿದಿದೆ’ ಎಂದು ಅಧ್ಯಯನವೊಂದು ಹೇಳಿದೆ. ರಾಜ್ಯದ ಬಂಡಿಪುರ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ, ನೀಲಗಿರಿ ಜೀವವೈವಿಧ್ಯ ಮೀಸಲು ಪ್ರದೇಶ, ಮದುಮಲೈ ಹುಲಿ ಸಂರಕ್ಷಿತ ಪ್ರದೇಶ, ಕೇರಳದ ವಯನಾಡ್, ಮಹಾರಾಷ್ಟ್ರದ ದಕ್ಷಿಣ ಭಾಗ ಹಾಗೂ ಆಂಧ್ರದ ಶ್ರೀಶೈಲಂ ಹುಲಿ ಮೀಸಲು ಪ್ರದೇಶಗಳು ಹಿಂದೆ ರಣಹದ್ದುಗಳ ಸಂತಾನೋತ್ಪತ್ತಿ ಕೇಂದ್ರಗಳಾಗಿದ್ದವು.