ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್, ರೌಡಿಗಳು ಸಾರ್ವಜನಿಕರಿಗೆ ತೊಂದರೆ ನೀಡುವುದು, ಹಫ್ತಾ ವಸೂಲಿ ಮಾಡುವುದು, ಬಲವಂತವಾಗಿ ರಿಯಲ್ ಎಸ್ಟೇಟ್ ದಂಧೆ ನಡೆಸುವುದು, ಭೂ ಕಬಳಿಕೆ ಮಾಡುವುದು, ಹಲ್ಲೆ ಮತ್ತು ಭಯ ಪಡಿಸುವುದು, ಮಹಿಳೆಯರನ್ನು ಚುಡಾಯಿಸುವುದು, ಬ್ಲಾಕ್ ಮೇಲ್ ಮಾಡಿದರೆ ತಕ್ಷಣ ರೌಡಿ ಪ್ರತಿಬಂಧಕ ದಳವನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಕೋರಿದ್ದಾರೆ.