<p><strong>ಹುಣಸೂರು</strong>: ‘ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಹೊಂದುವುದರಿಂದ ಅಸಾಧ್ಯ ಎಂಬುದನ್ನು ಸುಲಭವಾಗಿ ಸಾಧಿಸಲು ಸಹಕಾರಿ ಆಗಲಿದೆ’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ನಗರದ ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಸಾಂಸ್ಕೃತಿಕ,ಕ್ರೀಡೆ, ಎನ್.ಎಸ್.ಎಸ್., ರೆಡ್ ಕ್ರಾಸ್ ಘಟಕ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಸಂಸ್ಕಾರ, ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು, ಪಠ್ಯದೊಂದಿಗೆ ಪಠ್ಯೇತರವಾಗಿ ಸಂಸ್ಕಾರ ಕಲಿಕೆ ಅಗತ್ಯವಿದೆ. ಜೀವನದಲ್ಲಿ ಮೌಲ್ಯ ಅಳವಡಿಸಿಕೊಂಡು ಸಮಾಜದಲ್ಲಿ ಎಲ್ಲರೊಂದಿಗೆ ಸಾಮರಸ್ಯತೆಯೊಂದಿಗೆ ಬದುಕುವ ಮನಸ್ಥಿತಿಯನ್ನು ಹೊಂದಬೇಕು’ ಎಂದರು.</p>.<p>‘ಕಾಲೇಜು ಅಭಿವೃದ್ಧಿ ಸಮಿತಿ ನೀಡಿದ 10 ಬೇಡಿಕೆಗಳಲ್ಲಿ ಕ್ಯಾಂಟಿನ್ ಆಧುನಿಕರಣಕ್ಕೆ ₹ 15 ಲಕ್ಷ, ವಾಹನ ನಿಲ್ದಾಣಕ್ಕೆ ಮತ್ತು ಸಭಾಂಗಣದ ಆಸನ ಖರೀದಿಗೆ ಅನುಮತಿ ನೀಡಿದರು. ಒಳ ಕ್ರೀಡಾಂಗಣ ಪೂರ್ಣಗೊಳಿಸಲು ₹ 50 ಲಕ್ಷ ನೀಡಿದ್ದು ಹೆಚ್ಚುವರಿ ₹ 20 ಲಕ್ಷ ನೀಡುವ ಭರವಸೆ ನೀಡಿದರು. ವಿದ್ಯಾರ್ಥಿ ವಸತಿ ನಿಲಯ ಆರಂಭಿಸುವ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕ ಗುರುಸಿದ್ದಯ್ಯ ಮಾತನಾಡಿ, ವಿದ್ಯಾರ್ಥಿಗಳು ನಿಮ್ಮಲ್ಲಿನ ಬೌದ್ಧಿಕ ಸಾಮರ್ಥ್ಯ ಅರಿಯದಿದ್ದರೆ ಯಶಸ್ಸು ಅಸಾಧ್ಯ, ಯಶಸ್ಸಿಗೆ 5 ಸೂತ್ರವನ್ನು ಅಳವಡಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಕಟ್ಟುನಿಟ್ಟಿನಿಂದ ಪಾಲಿಸಿದಲ್ಲಿ ಭವಿಷ್ಯ ಸುಖಕರವಾಗಿರಲಿದೆ’ ಎಂದರು.</p>.<p>ಪ್ರಾಂಶುಪಾಲ ಬಿ.ಸಿ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಮಲ್ಲಿಕ್ ಪಾಷ, ಧರ್ಮಾಪುರ ನಾರಾಯಣ್, ನಗರಸಭಾ ಸದಸ್ಯೆ ಸಮೀನಾ ಇಮ್ರಾನ್, ಹರವೆ ಶ್ರೀಧರ್, ಟಿಎಪಿಸಿಎಂಎಸ್ ನಿರ್ದೇಶಕ ಗೋವಿಂದರಾಜ್ ಇದ್ದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಕುಮಾರ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ‘ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಹೊಂದುವುದರಿಂದ ಅಸಾಧ್ಯ ಎಂಬುದನ್ನು ಸುಲಭವಾಗಿ ಸಾಧಿಸಲು ಸಹಕಾರಿ ಆಗಲಿದೆ’ ಎಂದು ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.</p>.<p>ನಗರದ ದೇವರಾಜ ಅರಸು ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಸಾಂಸ್ಕೃತಿಕ,ಕ್ರೀಡೆ, ಎನ್.ಎಸ್.ಎಸ್., ರೆಡ್ ಕ್ರಾಸ್ ಘಟಕ ಉದ್ಘಾಟಿಸಿ ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಸಂಸ್ಕಾರ, ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು, ಪಠ್ಯದೊಂದಿಗೆ ಪಠ್ಯೇತರವಾಗಿ ಸಂಸ್ಕಾರ ಕಲಿಕೆ ಅಗತ್ಯವಿದೆ. ಜೀವನದಲ್ಲಿ ಮೌಲ್ಯ ಅಳವಡಿಸಿಕೊಂಡು ಸಮಾಜದಲ್ಲಿ ಎಲ್ಲರೊಂದಿಗೆ ಸಾಮರಸ್ಯತೆಯೊಂದಿಗೆ ಬದುಕುವ ಮನಸ್ಥಿತಿಯನ್ನು ಹೊಂದಬೇಕು’ ಎಂದರು.</p>.<p>‘ಕಾಲೇಜು ಅಭಿವೃದ್ಧಿ ಸಮಿತಿ ನೀಡಿದ 10 ಬೇಡಿಕೆಗಳಲ್ಲಿ ಕ್ಯಾಂಟಿನ್ ಆಧುನಿಕರಣಕ್ಕೆ ₹ 15 ಲಕ್ಷ, ವಾಹನ ನಿಲ್ದಾಣಕ್ಕೆ ಮತ್ತು ಸಭಾಂಗಣದ ಆಸನ ಖರೀದಿಗೆ ಅನುಮತಿ ನೀಡಿದರು. ಒಳ ಕ್ರೀಡಾಂಗಣ ಪೂರ್ಣಗೊಳಿಸಲು ₹ 50 ಲಕ್ಷ ನೀಡಿದ್ದು ಹೆಚ್ಚುವರಿ ₹ 20 ಲಕ್ಷ ನೀಡುವ ಭರವಸೆ ನೀಡಿದರು. ವಿದ್ಯಾರ್ಥಿ ವಸತಿ ನಿಲಯ ಆರಂಭಿಸುವ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ನಿರ್ದೇಶಕ ಗುರುಸಿದ್ದಯ್ಯ ಮಾತನಾಡಿ, ವಿದ್ಯಾರ್ಥಿಗಳು ನಿಮ್ಮಲ್ಲಿನ ಬೌದ್ಧಿಕ ಸಾಮರ್ಥ್ಯ ಅರಿಯದಿದ್ದರೆ ಯಶಸ್ಸು ಅಸಾಧ್ಯ, ಯಶಸ್ಸಿಗೆ 5 ಸೂತ್ರವನ್ನು ಅಳವಡಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿ ಕಟ್ಟುನಿಟ್ಟಿನಿಂದ ಪಾಲಿಸಿದಲ್ಲಿ ಭವಿಷ್ಯ ಸುಖಕರವಾಗಿರಲಿದೆ’ ಎಂದರು.</p>.<p>ಪ್ರಾಂಶುಪಾಲ ಬಿ.ಸಿ.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷ ಮಲ್ಲಿಕ್ ಪಾಷ, ಧರ್ಮಾಪುರ ನಾರಾಯಣ್, ನಗರಸಭಾ ಸದಸ್ಯೆ ಸಮೀನಾ ಇಮ್ರಾನ್, ಹರವೆ ಶ್ರೀಧರ್, ಟಿಎಪಿಸಿಎಂಎಸ್ ನಿರ್ದೇಶಕ ಗೋವಿಂದರಾಜ್ ಇದ್ದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಕುಮಾರ್ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>