<p>ಮೈಸೂರು: ‘ಆಶ್ರಯ ಯೋಜನೆಗಳಲ್ಲಿ ಪೌರಕಾರ್ಮಿಕರಿಗೆ ಆದ್ಯತೆ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ತಿಳಿಸಿದರು. </p><p>ಇಲ್ಲಿನ ಕಲಾಮಂದಿರದಲ್ಲಿ ಗುರುವಾರ ನಡೆದ ‘ಪೌರಕಾರ್ಮಿಕರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ತವರಲ್ಲೇ ಪೌರಕಾರ್ಮಿಕರು ಹಲವು ಸಮಸ್ಯ ಎದುರಿಸುತ್ತಿರುವುದು ಕಂಡುಬಂದಿದೆ. ಇಲ್ಲಿನ ಅಧಿಕಾರಿಗಳು ಏನು ಮಾಡುತ್ತಿದ್ದಾರೆಯೋ ತಿಳಿಯದು’ ಎಂದರು.</p><p>‘ಪೌರಕಾರ್ಮಿಕರು ಸಂಘಟಿತರಾಗಿ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಮುಖ್ಯಮಂತ್ರಿಯವರು ಬಂದಾಗ ನೇರವಾಗಿ ಅವರ ಗಮನಕ್ಕೇ ತರಬೇಕು’ ಎಂದು ತಿಳಿಸಿದರು.</p><p>‘ಪೌರಕಾರ್ಮಿಕರು ಶೌಚಕ್ಕಾಗಿ ಯಾವುದೇ ಹೋಟೆಲ್ಗಳಿಗೆ ಹೋಗಿ ಅಲ್ಲಿನ ಶೌಚಾಲಯ ಬಳಸಬಹುದು. ಅದು ನಿಮ್ಮ ಹಕ್ಕು. ಬಳಸಬೇಡಿ ಎಂದು ಯಾವ ಹೋಟೆಲ್ನವರೂ ಹೇಳುವಂತಿಲ್ಲ. ನಿರಾಕರಿಸಿದವರ ವಿರುದ್ಧ ದೂರು ಸಲ್ಲಿಸಿದರೆ ಆಯೋಗದಿಂದ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಆಶ್ರಯ ಯೋಜನೆಗಳಲ್ಲಿ ಪೌರಕಾರ್ಮಿಕರಿಗೆ ಆದ್ಯತೆ ದೊರೆಯುವಂತೆ ಮಾಡಲು ಕ್ರಮ ಕೈಗೊಳ್ಳುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು ತಿಳಿಸಿದರು. </p><p>ಇಲ್ಲಿನ ಕಲಾಮಂದಿರದಲ್ಲಿ ಗುರುವಾರ ನಡೆದ ‘ಪೌರಕಾರ್ಮಿಕರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ ತವರಲ್ಲೇ ಪೌರಕಾರ್ಮಿಕರು ಹಲವು ಸಮಸ್ಯ ಎದುರಿಸುತ್ತಿರುವುದು ಕಂಡುಬಂದಿದೆ. ಇಲ್ಲಿನ ಅಧಿಕಾರಿಗಳು ಏನು ಮಾಡುತ್ತಿದ್ದಾರೆಯೋ ತಿಳಿಯದು’ ಎಂದರು.</p><p>‘ಪೌರಕಾರ್ಮಿಕರು ಸಂಘಟಿತರಾಗಿ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಮುಖ್ಯಮಂತ್ರಿಯವರು ಬಂದಾಗ ನೇರವಾಗಿ ಅವರ ಗಮನಕ್ಕೇ ತರಬೇಕು’ ಎಂದು ತಿಳಿಸಿದರು.</p><p>‘ಪೌರಕಾರ್ಮಿಕರು ಶೌಚಕ್ಕಾಗಿ ಯಾವುದೇ ಹೋಟೆಲ್ಗಳಿಗೆ ಹೋಗಿ ಅಲ್ಲಿನ ಶೌಚಾಲಯ ಬಳಸಬಹುದು. ಅದು ನಿಮ್ಮ ಹಕ್ಕು. ಬಳಸಬೇಡಿ ಎಂದು ಯಾವ ಹೋಟೆಲ್ನವರೂ ಹೇಳುವಂತಿಲ್ಲ. ನಿರಾಕರಿಸಿದವರ ವಿರುದ್ಧ ದೂರು ಸಲ್ಲಿಸಿದರೆ ಆಯೋಗದಿಂದ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>