ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭಾ ಕ್ಷೇತ್ರಗಳಲ್ಲಿ ‘ಪ್ರಜಾಧ್ವನಿ’ 15ರಿಂದ

Last Updated 8 ಫೆಬ್ರುವರಿ 2023, 15:40 IST
ಅಕ್ಷರ ಗಾತ್ರ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿರುವ ‘ಪ್ರಜಾಧ್ವನಿ’ ಬಸ್ ಯಾತ್ರೆಯು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಫೆ.15ರಿಂದ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಅಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್‌ ತಿಳಿಸಿದ್ದಾರೆ.

15ರಂದು ಬೆಳಿಗ್ಗೆ 11ಕ್ಕೆ ಹುಣಸೂರು, ಮಧ್ಯಾಹ್ನ 3ಕ್ಕೆ ಎಚ್.ಡಿ.ಕೋಟೆ, 16ರಂದು ಬೆಳಿಗ್ಗೆ 11.30ಕ್ಕೆ ಕೆ.ಆರ್. ನಗರ, ಮಧ್ಯಾಹ್ನ 3.30ಕ್ಕೆ ಪಿರಿಯಾಪಟ್ಟಣ, 20ರಂದು ಬೆಳಿಗ್ಗೆ 11ಕ್ಕೆ ತಿ.ನರಸೀಪುರ, ಮಧ್ಯಾಹ್ನ 2ಕ್ಕೆ ವರುಣಾ ಹಾಗೂ ಸಂಜೆ 5ಕ್ಕೆ ನಂಜನಗೂಡಿನಲ್ಲಿ ಸಮಾವೇಶ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT