ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಚಿತ್ರನಟ ನಾಗಭೂಷಣ ಎನ್.ಎಸ್. ಸ್ಪರ್ಧೆಗೆ ಚಾಲನೆ ನೀಡಿದರು. ಟಿಪಿಎಂಎಲ್ ಪ್ರಸರಣ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕ ಜಗನ್ನಾಥ್ ಜೋಯಿಸ್, ‘ಪ್ರಜಾವಾಣಿ’ ಬ್ಯೂರೊ ಮುಖ್ಯಸ್ಥ ಕೆ.ನರಸಿಂಹಮೂರ್ತಿ, ‘ಡೆಕ್ಕನ್ ಹೆರಾಲ್ಡ್’ ವಿಶೇಷ ವರದಿಗಾರ ಟಿ.ಆರ್.ಸತೀಶ್ಕುಮಾರ್, ಪ್ರಸರಣ ವಿಭಾಗದ ವ್ಯವಸ್ಥಾಪಕ ಎಸ್.ಪ್ರಕಾಶ್, ಜಾಹೀರಾತು ವಿಭಾಗದ ಸಹಾಯಕ ವ್ಯವಸ್ಥಾಪಕ ಸ್ಕಂದನ್ ರಾವ್ ಕೆ.ಎನ್. ಬಹುಮಾನ ವಿತರಿಸಿದರು. ನಗರಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜ್ ಪ್ರಮಾಣಪತ್ರಗಳನ್ನು ವಿತರಿಸಿದರು.