<p>ಮೈಸೂರು: ‘ಪ್ರಜಾವಾಣಿ’ಯು ನ.15ರಿಂದ 45 ದಿನ ಆಯೋಜಿಸಿರುವ ನ್ಯೂಸ್ ಕ್ವಿಜ್ ಸ್ಪರ್ಧೆಯ ಪೋಸ್ಟರ್ಗಳನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಬಿಡುಗಡೆಗೊಳಿಸಿದರು.</p>.<p>ಸೋಮವಾರದಿಂದ ಶನಿವಾರದವರೆಗೆ ಪ್ರತಿ ದಿನ ಎರಡು ಸರಳ ಪ್ರಶ್ನೆಗಳು ಹಾಗೂ ಭಾನುವಾರ ಐದು ವಿಶೇಷ ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳನ್ನು ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಬಂದಿರುವ ಸುದ್ದಿಗಳಿಂದಲೇ ಕೇಳಲಾಗುತ್ತದೆ.</p>.<p>‘ವಿದ್ಯಾರ್ಥಿಗಳು ಸೇರಿದಂತೆ ಜನರಲ್ಲಿ ಓದುವ ಹವ್ಯಾಸ ಹೆಚ್ಚಿಸಲಿಕ್ಕಾಗಿಯೇ ‘ಪ್ರಜಾವಾಣಿ’ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ಈ ಸ್ಪರ್ಧೆಯಲ್ಲಿ ಹೆಚ್ಚಿನ ಜನರು ಪಾಲ್ಗೊಂಡು ಇದರ ಪ್ರಯೋಜನ ಪಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೋಸ್ಟರ್ ಬಿಡುಗಡೆ ಮಾಡಿದ ಬಳಿಕ ತಿಳಿಸಿದರು.</p>.<p>‘ಪ್ರಜಾವಾಣಿಯ ಈ ಸ್ಪರ್ಧೆ ಜ್ಞಾನಾರ್ಜನೆಯ ಜೊತೆಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ’ ಎಂದು ಹೇಳಿದರು.</p>.<p>ನ್ಯೂಸ್ ಕ್ವಿಜ್ ಸ್ಪರ್ಧೆಗೆ ಶುಭವಾಗಲಿ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶುಭ ಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಪ್ರಜಾವಾಣಿ’ಯು ನ.15ರಿಂದ 45 ದಿನ ಆಯೋಜಿಸಿರುವ ನ್ಯೂಸ್ ಕ್ವಿಜ್ ಸ್ಪರ್ಧೆಯ ಪೋಸ್ಟರ್ಗಳನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಬಿಡುಗಡೆಗೊಳಿಸಿದರು.</p>.<p>ಸೋಮವಾರದಿಂದ ಶನಿವಾರದವರೆಗೆ ಪ್ರತಿ ದಿನ ಎರಡು ಸರಳ ಪ್ರಶ್ನೆಗಳು ಹಾಗೂ ಭಾನುವಾರ ಐದು ವಿಶೇಷ ಪ್ರಶ್ನೆಗಳನ್ನು ಕೇಳಲಾಗುವುದು. ಪ್ರಶ್ನೆಗಳನ್ನು ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಬಂದಿರುವ ಸುದ್ದಿಗಳಿಂದಲೇ ಕೇಳಲಾಗುತ್ತದೆ.</p>.<p>‘ವಿದ್ಯಾರ್ಥಿಗಳು ಸೇರಿದಂತೆ ಜನರಲ್ಲಿ ಓದುವ ಹವ್ಯಾಸ ಹೆಚ್ಚಿಸಲಿಕ್ಕಾಗಿಯೇ ‘ಪ್ರಜಾವಾಣಿ’ ವಿಭಿನ್ನ ಪ್ರಯೋಗಕ್ಕೆ ಮುಂದಾಗಿದೆ. ಈ ಸ್ಪರ್ಧೆಯಲ್ಲಿ ಹೆಚ್ಚಿನ ಜನರು ಪಾಲ್ಗೊಂಡು ಇದರ ಪ್ರಯೋಜನ ಪಡೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೋಸ್ಟರ್ ಬಿಡುಗಡೆ ಮಾಡಿದ ಬಳಿಕ ತಿಳಿಸಿದರು.</p>.<p>‘ಪ್ರಜಾವಾಣಿಯ ಈ ಸ್ಪರ್ಧೆ ಜ್ಞಾನಾರ್ಜನೆಯ ಜೊತೆಗೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ’ ಎಂದು ಹೇಳಿದರು.</p>.<p>ನ್ಯೂಸ್ ಕ್ವಿಜ್ ಸ್ಪರ್ಧೆಗೆ ಶುಭವಾಗಲಿ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಶುಭ ಹಾರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>