<p><strong>ಮೈಸೂರು:</strong> ಇಲ್ಲಿನ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮೈಮುಲ್) ಅಧ್ಯಕ್ಷ ಪಿ.ಎಂ. ಪ್ರಸನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<p>ಜುಲೈ 1ರಂದು ರಾಜೀನಾಮೆ ಸಲ್ಲಿಸಿದ್ದು, ಅಂಗೀಕಾರವಾಗಿಲ್ಲ. ಅಧಿಕಾರಾವಧಿ ಇನ್ನೂ ಒಂದೂವರೆ ವರ್ಷದವರೆಗೆ ಇತ್ತು. ‘ರಾಜೀನಾಮೆ ನೀಡಲು ಪಶುಸಂಗೋಪನಾ ಸಚಿವರು ಕೊಡುತ್ತಿರುವ ತೊಂದರೆ ಕಾರಣ’ ಎಂದು ದೂರಿದ್ದಾರೆ.</p>.<p>‘ವೆಂಕಟೇಶ್ ಸಚಿವರಾದಾಗಿನಿಂದಲೂ ಕಿರುಕುಳ ನೀಡಿ, ದಬ್ಬಾಳಿಕೆ ಮಾಡುತ್ತಲೇ ಇದ್ದಾರೆ. ಅವರಿಗೆ ಅಭಿವೃದ್ಧಿ ಮಾಡಬೇಕೆಂಬ ಉದ್ದೇಶವಿಲ್ಲ. ತೊಂದರೆ ಕೊಡುವುದನ್ನೇ ಆದ್ಯತೆಯಾಗಿಟ್ಟುಕೊಂಡಿದ್ದಾರೆ. ಇದರಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ. ನಾನು ಜೆಡಿಎಸ್ ಪಕ್ಷದವನೆಂದು ತೊಂದರೆ ನೀಡುತ್ತಿದ್ದಾರೆ’ ಎಂದು ದೂರಿದರು.</p>.<p>‘ಕೇವಲ ಆರು ತಿಂಗಳಲ್ಲಿ 26 ಬಾರಿ ನೋಟಿಸ್ ಕೊಡಿಸಿದ್ದಾರೆ. ಉತ್ತರಿಸಲೂ ಅವಕಾಶ ಕೊಡದೆ, ನೋಟಿಸ್ ಜಾರಿಗೊಳಿಸುತ್ತಿದ್ದಾರೆ. ನನ್ನನ್ನು ಸ್ಥಾನದಿಂದ ಕೆಳಗಿಳಿಸಬೇಕು ಎನ್ನುವುದೇ ಅವರ ಉದ್ದೇಶವಾಗಿತ್ತು. ಅವರ ವಿರುದ್ಧ ನನ್ನ ಹೋರಾಟ ಮುಂದುವರಿಸುತ್ತೇನೆ. ನನ್ನಿಂದ ರೈತರ ಸಂಸ್ಥೆಗೆ ತೊಂದರೆಯಾಗಬಾರದೆಂದು ರಾಜೀನಾಮೆ ಕೊಟ್ಟಿದ್ದೇನೆ’ ಎಂದರು.</p>.<p>‘ನನ್ನ ಗಮನಕ್ಕೆ ತಾರದೆಯೇ ಒಕ್ಕೂಟಕ್ಕೆ ಹೊಸದಾಗಿ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಲಾಗಿದೆ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಕೆಲಸ ಮಾಡಲು ಸಾಧ್ಯವಾಗುವುದೇ’ ಎಂದು ಕೇಳಿದರು.</p>.<p>‘ನಮ್ಮ ಅವಧಿಯಲ್ಲಿ ಹಾಲಿಗೆ ಒಳ್ಳೆಯ ಬೆಲೆ ನೀಡಿದ್ದೇವೆ. ಉತ್ತಮ ಯೋಜನೆಗಳನ್ನು ರೂಪಿಸಿದ್ದೇವೆ. ರೈತರಿಗೆ ಒಳ್ಳೊಳ್ಳೆ ಸೌಲಭ್ಯಗಳನ್ನು ಕಲ್ಪಿಸಿದ್ದೇವೆ. ಇದನ್ನು ಸಹಿಸಿಕೊಳ್ಳಲು ಪಶುಸಂಗೋಪನಾ ಸಚಿವರಿಗೆ ಆಗುತ್ತಿಲ್ಲ’ ಎಂದು ದೂರಿದರು.</p>.<p>‘ಸ್ವಗ್ರಾಮ ಕಗ್ಗುಂಡಿ ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಹೊಂದಿದ್ದೇನೆ. ಆದರೂ ವಾಸಸ್ಥಳ ದೃಢೀಕರಣಕ್ಕೆ ಸಂಬಂಧಿಸಿ ನೋಟಿಸ್ ಕೊಡಲಾಗಿದೆ’ ಎಂದು ಆರೋಪಿಸಿದರು.</p>.<p><strong>ಪುಣ್ಯದ ಕೆಲಸಕ್ಕೆ ನೋಟಿಸ್: ಸಚಿವ </strong></p><p> ‘ಅವರು ಮಾಡಿರುವ ಪುಣ್ಯದ ಕೆಲಸಗಳ ಕಾರಣಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ಅದನ್ನು ಸಂಬಂಧಿಸಿದ ಇಲಾಖೆಯೇ ಕೊಟ್ಟಿದೆ. ನೋಟಿಸ್ಗಳನ್ನು ನಾನು ಕೊಡಲಾಗುತ್ತದೆಯೇ? ಅವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಯಾರಾದರೂ ಸುಮ್ಮನೆ ನೋಟಿಸ್ ಜಾರಿಗೊಳಿಸುತ್ತಾರೆಯೇ?’ ಎಂದು ಸಚಿವ ವೆಂಕಟೇಶ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮೈಮುಲ್) ಅಧ್ಯಕ್ಷ ಪಿ.ಎಂ. ಪ್ರಸನ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<p>ಜುಲೈ 1ರಂದು ರಾಜೀನಾಮೆ ಸಲ್ಲಿಸಿದ್ದು, ಅಂಗೀಕಾರವಾಗಿಲ್ಲ. ಅಧಿಕಾರಾವಧಿ ಇನ್ನೂ ಒಂದೂವರೆ ವರ್ಷದವರೆಗೆ ಇತ್ತು. ‘ರಾಜೀನಾಮೆ ನೀಡಲು ಪಶುಸಂಗೋಪನಾ ಸಚಿವರು ಕೊಡುತ್ತಿರುವ ತೊಂದರೆ ಕಾರಣ’ ಎಂದು ದೂರಿದ್ದಾರೆ.</p>.<p>‘ವೆಂಕಟೇಶ್ ಸಚಿವರಾದಾಗಿನಿಂದಲೂ ಕಿರುಕುಳ ನೀಡಿ, ದಬ್ಬಾಳಿಕೆ ಮಾಡುತ್ತಲೇ ಇದ್ದಾರೆ. ಅವರಿಗೆ ಅಭಿವೃದ್ಧಿ ಮಾಡಬೇಕೆಂಬ ಉದ್ದೇಶವಿಲ್ಲ. ತೊಂದರೆ ಕೊಡುವುದನ್ನೇ ಆದ್ಯತೆಯಾಗಿಟ್ಟುಕೊಂಡಿದ್ದಾರೆ. ಇದರಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ. ನಾನು ಜೆಡಿಎಸ್ ಪಕ್ಷದವನೆಂದು ತೊಂದರೆ ನೀಡುತ್ತಿದ್ದಾರೆ’ ಎಂದು ದೂರಿದರು.</p>.<p>‘ಕೇವಲ ಆರು ತಿಂಗಳಲ್ಲಿ 26 ಬಾರಿ ನೋಟಿಸ್ ಕೊಡಿಸಿದ್ದಾರೆ. ಉತ್ತರಿಸಲೂ ಅವಕಾಶ ಕೊಡದೆ, ನೋಟಿಸ್ ಜಾರಿಗೊಳಿಸುತ್ತಿದ್ದಾರೆ. ನನ್ನನ್ನು ಸ್ಥಾನದಿಂದ ಕೆಳಗಿಳಿಸಬೇಕು ಎನ್ನುವುದೇ ಅವರ ಉದ್ದೇಶವಾಗಿತ್ತು. ಅವರ ವಿರುದ್ಧ ನನ್ನ ಹೋರಾಟ ಮುಂದುವರಿಸುತ್ತೇನೆ. ನನ್ನಿಂದ ರೈತರ ಸಂಸ್ಥೆಗೆ ತೊಂದರೆಯಾಗಬಾರದೆಂದು ರಾಜೀನಾಮೆ ಕೊಟ್ಟಿದ್ದೇನೆ’ ಎಂದರು.</p>.<p>‘ನನ್ನ ಗಮನಕ್ಕೆ ತಾರದೆಯೇ ಒಕ್ಕೂಟಕ್ಕೆ ಹೊಸದಾಗಿ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಲಾಗಿದೆ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಕೆಲಸ ಮಾಡಲು ಸಾಧ್ಯವಾಗುವುದೇ’ ಎಂದು ಕೇಳಿದರು.</p>.<p>‘ನಮ್ಮ ಅವಧಿಯಲ್ಲಿ ಹಾಲಿಗೆ ಒಳ್ಳೆಯ ಬೆಲೆ ನೀಡಿದ್ದೇವೆ. ಉತ್ತಮ ಯೋಜನೆಗಳನ್ನು ರೂಪಿಸಿದ್ದೇವೆ. ರೈತರಿಗೆ ಒಳ್ಳೊಳ್ಳೆ ಸೌಲಭ್ಯಗಳನ್ನು ಕಲ್ಪಿಸಿದ್ದೇವೆ. ಇದನ್ನು ಸಹಿಸಿಕೊಳ್ಳಲು ಪಶುಸಂಗೋಪನಾ ಸಚಿವರಿಗೆ ಆಗುತ್ತಿಲ್ಲ’ ಎಂದು ದೂರಿದರು.</p>.<p>‘ಸ್ವಗ್ರಾಮ ಕಗ್ಗುಂಡಿ ಹಾಲು ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಹೊಂದಿದ್ದೇನೆ. ಆದರೂ ವಾಸಸ್ಥಳ ದೃಢೀಕರಣಕ್ಕೆ ಸಂಬಂಧಿಸಿ ನೋಟಿಸ್ ಕೊಡಲಾಗಿದೆ’ ಎಂದು ಆರೋಪಿಸಿದರು.</p>.<p><strong>ಪುಣ್ಯದ ಕೆಲಸಕ್ಕೆ ನೋಟಿಸ್: ಸಚಿವ </strong></p><p> ‘ಅವರು ಮಾಡಿರುವ ಪುಣ್ಯದ ಕೆಲಸಗಳ ಕಾರಣಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ಅದನ್ನು ಸಂಬಂಧಿಸಿದ ಇಲಾಖೆಯೇ ಕೊಟ್ಟಿದೆ. ನೋಟಿಸ್ಗಳನ್ನು ನಾನು ಕೊಡಲಾಗುತ್ತದೆಯೇ? ಅವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಯಾರಾದರೂ ಸುಮ್ಮನೆ ನೋಟಿಸ್ ಜಾರಿಗೊಳಿಸುತ್ತಾರೆಯೇ?’ ಎಂದು ಸಚಿವ ವೆಂಕಟೇಶ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>