<p><strong>ಮೈಸೂರು</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಸರಾ ಉದ್ಘಾಟನೆಗೆ ಹಿಂದೂ ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಏಕೆ ಆಹ್ವಾನಿಸುತ್ತಾರೆ? ಮೈಸೂರು ಮಹಾರಾಜರ ಮೇಲಿನ ದ್ವೇಷವನ್ನು ಅವರು ಬಗೆ–ಬಗೆಯಾಗಿ ತೀರಿಸಿಕೊಳ್ಳುತ್ತಿದ್ದಾರೆ. ಮಹಾರಾಜರ ಪರಂಪರೆಯನ್ನು ಹಾಳು ಮಾಡುತ್ತಿದ್ದಾರೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಆರೋಪಿಸಿದರು.</p><p>ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಾನು ಮುಷ್ತಾಕ್ ಬಗ್ಗೆ ನಮಗೆ ಹೆಮ್ಮೆ ಇದೆ. ಅವರು ಮುಸ್ಲಿಂ ಎಂಬ ಕಾರಣಕ್ಕೆ ನಾನು ಅಪಸ್ವರ ಎತ್ತುತ್ತಿಲ್ಲ. ಅವರ ಸಾಹಿತ್ಯದ ಬಗ್ಗೆ ಗೌರವವಿದೆ. ಆದರೆ, ದಸರಾ ಜಾತ್ಯತೀತತೆಯ ಪ್ರತೀಕವಲ್ಲ. ಇದು ಧಾರ್ಮಿಕ ಆಚರಣೆ’ ಎಂದರು.</p><p>‘ದಸರೆಯಲ್ಲಿ ದುರ್ಗಾ ಪೂಜೆ, ನವರಾತ್ರಿ ಉತ್ಸವ ಇರುತ್ತದೆ. ಯದುವಂಶ ಆರಂಭಿಸಿದ ಧಾರ್ಮಿಕ ಹಬ್ಬವಿದು. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ಚಾಲನೆ ಕೊಡಲಾಗುತ್ತದೆ. ಬಾನುಗೆ ಚಾಮುಂಡಿ ಮೇಲೆ ನಂಬಿಕೆ ಇದೆಯೇ? ನಾನು ಚಾಮುಂಡಿ ಭಕ್ತೆ ಎಂದು ಹೇಳಿದ್ದಾರೆಯೇ?’ ಎಂದು ಕೇಳಿದರು.</p><p>‘ಧಾರ್ಮಿಕ ಸಂಕೇತವಾದ ದಸರಾ ಉದ್ಘಾಟನೆಗೆ ಬಾನು ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂಬುದು ನನ್ನ ಪ್ರಶ್ನೆ. ಅವರನ್ನು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿದರೆ ಯಾರ ತಕಾರರು ಕೂಡ ಇಲ್ಲ’ ಎಂದರು.</p><p>‘ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲ ಎನ್ನುತ್ತದೆ ಇಸ್ಲಾಂ. ಹಾಗಾದರೆ ಬಾನು ಹೇಗೆ ಚಾಮುಂಡಿಯನ್ನು ದೇವರೆಂದು ಒಪ್ಪಿಕೊಳ್ಳುತ್ತಾರೆ? ಅವರ ಧರ್ಮ ಅವರ ಮಾತನ್ನು ಒಪ್ಪುತ್ತದೆಯೇ? ‘ಕಾಂತಾರ’ ಚಲನಚಿತ್ರದ ನಟನೆಗಾಗಿ ರಿಷಬ್ ಶೆಟ್ಟಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು. ಅವರನ್ನು ದಸರಾ ಉದ್ಘಾಟನೆಗೆ ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ಆಹ್ವಾನಿಸಲು ಆಗುತ್ತಾ’ ಎಂದು ಪ್ರಶ್ನಿಸಿದರು.</p><p>‘ಬರಗೂರು ರಾಮಚಂದ್ರಪ್ಪ ದಸರಾ ಉದ್ಘಾಟನೆಗೆ ಬಂದು, ನಾನು ದೀಪ ಹಚ್ಚುವುದಿಲ್ಲ, ದೇವಸ್ಥಾನಕ್ಕೆ ಹೋಗುವುದಿಲ್ಲ ಎಂದಿದ್ದರು. ಇದು ದಸರಾ ಮಹೋತ್ಸವಕ್ಕೆ ಮಾಡಿದ ಅಪಮಾನವಲ್ಲವೇ?’ ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಸರಾ ಉದ್ಘಾಟನೆಗೆ ಹಿಂದೂ ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಏಕೆ ಆಹ್ವಾನಿಸುತ್ತಾರೆ? ಮೈಸೂರು ಮಹಾರಾಜರ ಮೇಲಿನ ದ್ವೇಷವನ್ನು ಅವರು ಬಗೆ–ಬಗೆಯಾಗಿ ತೀರಿಸಿಕೊಳ್ಳುತ್ತಿದ್ದಾರೆ. ಮಹಾರಾಜರ ಪರಂಪರೆಯನ್ನು ಹಾಳು ಮಾಡುತ್ತಿದ್ದಾರೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಆರೋಪಿಸಿದರು.</p><p>ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಾನು ಮುಷ್ತಾಕ್ ಬಗ್ಗೆ ನಮಗೆ ಹೆಮ್ಮೆ ಇದೆ. ಅವರು ಮುಸ್ಲಿಂ ಎಂಬ ಕಾರಣಕ್ಕೆ ನಾನು ಅಪಸ್ವರ ಎತ್ತುತ್ತಿಲ್ಲ. ಅವರ ಸಾಹಿತ್ಯದ ಬಗ್ಗೆ ಗೌರವವಿದೆ. ಆದರೆ, ದಸರಾ ಜಾತ್ಯತೀತತೆಯ ಪ್ರತೀಕವಲ್ಲ. ಇದು ಧಾರ್ಮಿಕ ಆಚರಣೆ’ ಎಂದರು.</p><p>‘ದಸರೆಯಲ್ಲಿ ದುರ್ಗಾ ಪೂಜೆ, ನವರಾತ್ರಿ ಉತ್ಸವ ಇರುತ್ತದೆ. ಯದುವಂಶ ಆರಂಭಿಸಿದ ಧಾರ್ಮಿಕ ಹಬ್ಬವಿದು. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ಚಾಲನೆ ಕೊಡಲಾಗುತ್ತದೆ. ಬಾನುಗೆ ಚಾಮುಂಡಿ ಮೇಲೆ ನಂಬಿಕೆ ಇದೆಯೇ? ನಾನು ಚಾಮುಂಡಿ ಭಕ್ತೆ ಎಂದು ಹೇಳಿದ್ದಾರೆಯೇ?’ ಎಂದು ಕೇಳಿದರು.</p><p>‘ಧಾರ್ಮಿಕ ಸಂಕೇತವಾದ ದಸರಾ ಉದ್ಘಾಟನೆಗೆ ಬಾನು ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂಬುದು ನನ್ನ ಪ್ರಶ್ನೆ. ಅವರನ್ನು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಿದರೆ ಯಾರ ತಕಾರರು ಕೂಡ ಇಲ್ಲ’ ಎಂದರು.</p><p>‘ಅಲ್ಲಾ ಬಿಟ್ಟರೆ ಬೇರೆ ಯಾರೂ ದೇವರಿಲ್ಲ ಎನ್ನುತ್ತದೆ ಇಸ್ಲಾಂ. ಹಾಗಾದರೆ ಬಾನು ಹೇಗೆ ಚಾಮುಂಡಿಯನ್ನು ದೇವರೆಂದು ಒಪ್ಪಿಕೊಳ್ಳುತ್ತಾರೆ? ಅವರ ಧರ್ಮ ಅವರ ಮಾತನ್ನು ಒಪ್ಪುತ್ತದೆಯೇ? ‘ಕಾಂತಾರ’ ಚಲನಚಿತ್ರದ ನಟನೆಗಾಗಿ ರಿಷಬ್ ಶೆಟ್ಟಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು. ಅವರನ್ನು ದಸರಾ ಉದ್ಘಾಟನೆಗೆ ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ಆಹ್ವಾನಿಸಲು ಆಗುತ್ತಾ’ ಎಂದು ಪ್ರಶ್ನಿಸಿದರು.</p><p>‘ಬರಗೂರು ರಾಮಚಂದ್ರಪ್ಪ ದಸರಾ ಉದ್ಘಾಟನೆಗೆ ಬಂದು, ನಾನು ದೀಪ ಹಚ್ಚುವುದಿಲ್ಲ, ದೇವಸ್ಥಾನಕ್ಕೆ ಹೋಗುವುದಿಲ್ಲ ಎಂದಿದ್ದರು. ಇದು ದಸರಾ ಮಹೋತ್ಸವಕ್ಕೆ ಮಾಡಿದ ಅಪಮಾನವಲ್ಲವೇ?’ ಎಂದು ಕೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>