<p><strong>ಮೈಸೂರು</strong>: ‘ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರೆಲ್ಲ ಪ್ರಶ್ನೆಗಳಿಗೆ ಮುಂದಿನ ವಾರದಲ್ಲೇ ಬಡ್ಡಿ ಸಮೇತ ಚುಕ್ತಾ ಮಾಡುವೆ’ ಎಂದು ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಹೇಳಿದರು. </p>.<p>ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅವರಿಬ್ಬರೂ ಪ್ರಶ್ನೆಗೆ ಉತ್ತರ ನೀಡದೇ ಪಠ್ಯದಾಚೆ ಮಾತನಾಡುತ್ತಾರೆ. ನಿಮ್ಮ ಖಾತೆ ಬಗ್ಗೆ ಸುದ್ದಿಗೋಷ್ಠಿ ಮಾಡಿ ಎಂದರೆ ಬೇರಿನ್ನೇನೊ ಮಾತನಾಡುತ್ತಾರೆ’ ಎಂದರು.</p>.<p>‘ಸಿಂಗದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲನೆಯಾಗಿದೆ. ಕೇಂದ್ರ ಸರ್ಕಾರವೇ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿದೆ. ಸೇತುವೆ ಡಿಪಿಆರ್ ಮಾಡಿಸಿರುವುದಾಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಆದರೆ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಅವರ ಶ್ರಮದಿಂದ ಯೋಜನೆ ಪೂರ್ಣಗೊಂಡಿದೆ’ ಎಂದರು.</p>.<p>‘ಫಿಲಂ ಸಿಟಿ, ಪ್ರವಾಸೋದ್ಯಮ ಸರ್ಕೀಟ್ ಏನೇನೂ ಸಾಧನೆ ಆಗಿಲ್ಲ. ಹೀಗಿರುವಾಗ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಹದ್ದುಬಸ್ತಿನಲ್ಲಿಡಲು ತಂತ್ರ ಮಾಡಿದ್ದೇ ಸಿದ್ದರಾಮಯ್ಯ ಅವರ ಸಾಧನೆಯಾಗಿದೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರೆಲ್ಲ ಪ್ರಶ್ನೆಗಳಿಗೆ ಮುಂದಿನ ವಾರದಲ್ಲೇ ಬಡ್ಡಿ ಸಮೇತ ಚುಕ್ತಾ ಮಾಡುವೆ’ ಎಂದು ಬಿಜೆಪಿ ಮುಖಂಡ ಪ್ರತಾಪ್ ಸಿಂಹ ಹೇಳಿದರು. </p>.<p>ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅವರಿಬ್ಬರೂ ಪ್ರಶ್ನೆಗೆ ಉತ್ತರ ನೀಡದೇ ಪಠ್ಯದಾಚೆ ಮಾತನಾಡುತ್ತಾರೆ. ನಿಮ್ಮ ಖಾತೆ ಬಗ್ಗೆ ಸುದ್ದಿಗೋಷ್ಠಿ ಮಾಡಿ ಎಂದರೆ ಬೇರಿನ್ನೇನೊ ಮಾತನಾಡುತ್ತಾರೆ’ ಎಂದರು.</p>.<p>‘ಸಿಂಗದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲನೆಯಾಗಿದೆ. ಕೇಂದ್ರ ಸರ್ಕಾರವೇ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿದೆ. ಸೇತುವೆ ಡಿಪಿಆರ್ ಮಾಡಿಸಿರುವುದಾಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಆದರೆ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಅವರ ಶ್ರಮದಿಂದ ಯೋಜನೆ ಪೂರ್ಣಗೊಂಡಿದೆ’ ಎಂದರು.</p>.<p>‘ಫಿಲಂ ಸಿಟಿ, ಪ್ರವಾಸೋದ್ಯಮ ಸರ್ಕೀಟ್ ಏನೇನೂ ಸಾಧನೆ ಆಗಿಲ್ಲ. ಹೀಗಿರುವಾಗ ಸಾಧನಾ ಸಮಾವೇಶ ಮಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರನ್ನು ಹದ್ದುಬಸ್ತಿನಲ್ಲಿಡಲು ತಂತ್ರ ಮಾಡಿದ್ದೇ ಸಿದ್ದರಾಮಯ್ಯ ಅವರ ಸಾಧನೆಯಾಗಿದೆ’ ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>