<p><strong>ಮೈಸೂರು:</strong> ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಒಂದು ಸಮುದಾಯಕ್ಕೆ ಮಾತ್ರವೇ ನೆಮ್ಮದಿ ಸಿಕ್ಕಿದೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಟೀಕಿಸಿದರು.</p><p>ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಣೇಶ ಮೂರ್ತಿ ವಿಸರ್ಜನೆ ಹಾಗೂ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರುವವರಿಗೆ ಮಾತ್ರವೇ ನೆಮ್ಮದಿ ಸಿಕ್ಕಿದೆ’ ಎಂದು ದೂರಿದರು.</p><p>‘ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮದುವೆ ಮಂಟಪ, ಶವಯಾತ್ರೆ ಮೇಲೂ ಕಲ್ಲು ಬೀಳುತ್ತದೆ. ಸಿದ್ದರಾಮಯ್ಯ ಸಿದ್ದರಾಮನಹುಂಡಿಯಲ್ಲಿ ಹುಟ್ಟಿದ್ದಾರೋ ಅಥವಾ ಯಾವುದೋ ಮೊಹಲ್ಲಾದಲ್ಲಾ ಗೊತ್ತಾಗುತ್ತಿಲ್ಲ. ಅವರು ಶಿವಾಜಿನಗರದವರಾ, ಸಿದ್ದರಾಮನಹುಂಡಿಯವರಾ ತಿಳಿಯುತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದರು.</p><p>‘ಮುಸ್ಲಿಮರ ಓಲೈಕೆ ಮಾಡುವುದೇ ಆಡಳಿತ ಎಂದುಕೊಂಡಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಒಂದು ಸಮುದಾಯಕ್ಕೆ ಮಾತ್ರವೇ ನೆಮ್ಮದಿ ಸಿಕ್ಕಿದೆ’ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಟೀಕಿಸಿದರು.</p><p>ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆದ ಘಟನೆಗೆ ಸಂಬಂಧಿಸಿದಂತೆ ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗಣೇಶ ಮೂರ್ತಿ ವಿಸರ್ಜನೆ ಹಾಗೂ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಮಸೀದಿಯಿಂದ ಕಲ್ಲು ತೂರುವವರಿಗೆ ಮಾತ್ರವೇ ನೆಮ್ಮದಿ ಸಿಕ್ಕಿದೆ’ ಎಂದು ದೂರಿದರು.</p><p>‘ಹಿಂದೂಗಳು ಎಚ್ಚೆತ್ತುಕೊಳ್ಳದಿದ್ದರೆ ಮದುವೆ ಮಂಟಪ, ಶವಯಾತ್ರೆ ಮೇಲೂ ಕಲ್ಲು ಬೀಳುತ್ತದೆ. ಸಿದ್ದರಾಮಯ್ಯ ಸಿದ್ದರಾಮನಹುಂಡಿಯಲ್ಲಿ ಹುಟ್ಟಿದ್ದಾರೋ ಅಥವಾ ಯಾವುದೋ ಮೊಹಲ್ಲಾದಲ್ಲಾ ಗೊತ್ತಾಗುತ್ತಿಲ್ಲ. ಅವರು ಶಿವಾಜಿನಗರದವರಾ, ಸಿದ್ದರಾಮನಹುಂಡಿಯವರಾ ತಿಳಿಯುತ್ತಿಲ್ಲ’ ಎಂದು ವಾಗ್ದಾಳಿ ನಡೆಸಿದರು.</p><p>‘ಮುಸ್ಲಿಮರ ಓಲೈಕೆ ಮಾಡುವುದೇ ಆಡಳಿತ ಎಂದುಕೊಂಡಿದ್ದಾರೆ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>