ಸಾಮಾಜಿಕ ಜಾಲತಾಣ ‘ಎಕ್ಸ್’ ಮತ್ತು ಫೇಸ್ಬುಕ್ನಲ್ಲಿ ಸೋಮವಾರ ಬೆಳಿಗ್ಗೆ ಪೋಸ್ಟ್ ಹಾಕಿದ್ದ ಅವರು, ‘ಉಡುಪಿಯ ಶಿಕ್ಷಣ ಸಂಸ್ಥೆಯೊಂದರಲ್ಲಿ ಸಮವಸ್ತ್ರ ಸಂಹಿತೆಯನ್ನು ಮುರಿದು ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿಯ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್ಎ ಟಿಕೆಟ್ಟೂ ಸಿಗಲಿಲ್ಲ, ಎಂಎಲ್ಸಿ ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಚಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಆಲಿಯಾ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ’ ಎಂದು ಹೇಳಿದ್ದರು.