<p><strong>ಮೈಸೂರು</strong>: ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು, ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ ಬುಡಕಟ್ಟು ಜನರಿಗೆ ವಿತರಿಸಬಾರದು ಎಂದು ಸಂಸದ ಪ್ರತಾಪಸಿಂಹ ತಾಕೀತು ಮಾಡಿದರು.</p>.<p>ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.</p>.<p>‘ಕುತ್ತಿಗೆಯಲ್ಲಿ ಶಿಲುಬೆ ಹಾಕಿಕೊಂಡು ಓಡಾಡುವವರನ್ನು ಗುರುತಿಸಬೇಕು. ಅವರಿಗೆ ಸೌಲಭ್ಯ ವಿತರಿಸುತ್ತಿದ್ದರೆ ಕೂಡಲೇ ನಿಲ್ಲಿಸಬೇಕು. ಮೀಸಲಾತಿ ಸೌಲಭ್ಯ ನೀಡಬಾರದು. ಈ ಕುರಿತು ಗಂಭೀರವಾಗಿಗಮನ ಹರಿಸಬೇಕು’ ಎಂದು ತಾಕೀತು ಮಾಡಿದರು.</p>.<p>‘ಸರ್ಕಾರ ನೀಡುವ ಎಲ್ಲ ಸವಲತ್ತುಗಳು ಎಲ್ಲ ಹಾಡಿಗಳ ಜನರಿಗೆ ಸಿಕ್ಕಿದ್ದರೆ ಜನರೇಕೆ ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದುತ್ತಿದ್ದರು? ಎಲ್ಲವನ್ನೂ ಏಸುಸ್ವಾಮಿ ಕೊಟ್ಟ ಎಂದು ಹೇಳಿಕೊಂಡು ಏಕೆ ಓಡಾಡುತ್ತಿದ್ದರು?’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p><strong>ಸವರ್ಣೀಯರ ಬೀದಿಗಳ ಕಡೆಗೂ ಗಮನ ಕೊಡಿ:</strong>‘ನರೇಗಾ ಸೇರಿದಂತೆ ಇತರ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ವಾಸವಿರುವ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ, ಸವರ್ಣೀಯರು ಇರುವ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮುಂದಿನ ದಿನಗಳಲ್ಲಿ ಅವರ ಕಾಲೊನಿಗಳಿಗೂ ಆದ್ಯತೆ ನೀಡಿ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಆದಿವಾಸಿಗಳಿಗೆ ನೀಡುವ ಸವಲತ್ತುಗಳನ್ನು, ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದಿದ ಬುಡಕಟ್ಟು ಜನರಿಗೆ ವಿತರಿಸಬಾರದು ಎಂದು ಸಂಸದ ಪ್ರತಾಪಸಿಂಹ ತಾಕೀತು ಮಾಡಿದರು.</p>.<p>ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.</p>.<p>‘ಕುತ್ತಿಗೆಯಲ್ಲಿ ಶಿಲುಬೆ ಹಾಕಿಕೊಂಡು ಓಡಾಡುವವರನ್ನು ಗುರುತಿಸಬೇಕು. ಅವರಿಗೆ ಸೌಲಭ್ಯ ವಿತರಿಸುತ್ತಿದ್ದರೆ ಕೂಡಲೇ ನಿಲ್ಲಿಸಬೇಕು. ಮೀಸಲಾತಿ ಸೌಲಭ್ಯ ನೀಡಬಾರದು. ಈ ಕುರಿತು ಗಂಭೀರವಾಗಿಗಮನ ಹರಿಸಬೇಕು’ ಎಂದು ತಾಕೀತು ಮಾಡಿದರು.</p>.<p>‘ಸರ್ಕಾರ ನೀಡುವ ಎಲ್ಲ ಸವಲತ್ತುಗಳು ಎಲ್ಲ ಹಾಡಿಗಳ ಜನರಿಗೆ ಸಿಕ್ಕಿದ್ದರೆ ಜನರೇಕೆ ಕ್ರೈಸ್ತ ಧರ್ಮಕ್ಕೆ ಮತಾಂತರ ಹೊಂದುತ್ತಿದ್ದರು? ಎಲ್ಲವನ್ನೂ ಏಸುಸ್ವಾಮಿ ಕೊಟ್ಟ ಎಂದು ಹೇಳಿಕೊಂಡು ಏಕೆ ಓಡಾಡುತ್ತಿದ್ದರು?’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.</p>.<p><strong>ಸವರ್ಣೀಯರ ಬೀದಿಗಳ ಕಡೆಗೂ ಗಮನ ಕೊಡಿ:</strong>‘ನರೇಗಾ ಸೇರಿದಂತೆ ಇತರ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ವಾಸವಿರುವ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಆದರೆ, ಸವರ್ಣೀಯರು ಇರುವ ಕಾಲೊನಿಗಳಲ್ಲಿ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಮುಂದಿನ ದಿನಗಳಲ್ಲಿ ಅವರ ಕಾಲೊನಿಗಳಿಗೂ ಆದ್ಯತೆ ನೀಡಿ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>