<p><strong>ಮೈಸೂರು</strong>: ‘ಧರ್ಮ ರಕ್ಷಿಸಬೇಕಾದವರು ಅನ್ಯ ಮಾರ್ಗ ಹಿಡಿದಿದ್ದಾರೆ. ನುಡಿದಂತೆ ನಡೆಯುವುದು ಕಷ್ಟಸಾಧ್ಯವಾಗಿದೆ. ಇವುಗಳ ನಡುವೆ ಆಶಾಭಾವನೆ ಇಟ್ಟುಕೊಂಡು ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ’ ಎಂದು ನವಿಲೂರಿನ ಕಡಲಕಟ್ಟೆ ಮಠದ ಚನ್ನಬಸವ ಸ್ವಾಮೀಜಿ ಹೇಳಿದರು.</p>.<p>ಚಂದ್ರು ಸೇವಾ ಬಳಗವು ಇಲ್ಲಿನ ಖಿಲ್ಲೆ ಮೊಹಲ್ಲಾದ ಹೊಸಮಠ ನಟರಾಜ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಚಂದ್ರು ವರ್ಷದ ಸ್ಮರಣೆ ಕಾರ್ಯಕ್ರಮದಲ್ಲಿ ನಗರ್ಲೆ ಶಿವಕುಮಾರ ಅವರ ‘ಪ್ರತಿಬಿಂಬ’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಮನುಷ್ಯ ಈಚೆಗೆ ದೈಹಿಕ ಶ್ರಮಕ್ಕಿಂತಲೂ ಮಾನಸಿಕ ಒತ್ತಡಗಳಿಗೆ ಬಲಿಯಾಗುತ್ತಿದ್ದಾನೆ. ನ್ಯಾಯ, ನೀತಿ, ಧರ್ಮ ಯಾರಿಗೂ ಬೇಡವಾಗಿದೆ. ಅದನ್ನು ಪಾಲಿಸುವವರ ಸಂಖ್ಯೆ ವಿರಳವಾಗುತ್ತಿರುವುದು ವಿಷಾದನೀಯ. ಜೀವನ ಮೌಲ್ಯದ ಬಗ್ಗೆ ತಿಳಿಹೇಳುವ ಹಾಗೂ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ನಡೆಯಬೇಕು’ ಎಂದರು.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಬಸವರಾಜ್ ಹಿನಕಲ್ ಮಾತನಾಡಿ, ‘ವೀರಶೈವ ಲಿಂಗಾಯತ ಧರ್ಮವನ್ನು ವಿಶ್ವಧರ್ಮವಾಗಿಸುವುದು ಸಮುದಾಯದವರ ಆದ್ಯ ಕರ್ತವ್ಯವಾಗಿದೆ. ಈ ಧರ್ಮವು ಸುದೀರ್ಘ ಹಾಗೂ ಉಜ್ವಲ ಸಾಂಸ್ಕೃತಿಕ ಪರಂಪರೆ ಹೊಂದಿದೆ. ಮಾನವ ಪ್ರೇಮ, ಸಹಕಾರ, ಶಾಂತಿ, ಸವಾನತೆ, ಭಾವೈಕ್ಯದ ಉದಾತ್ತ ಮೌಲ್ಯಗಳನ್ನು ಸಾರುವ ಧರ್ಮವೇ ಲಿಂಗವಂತರ ಧರ್ಮವಾಗಿದೆ’ ಎಂದು ಹೇಳಿದರು.</p>.<p>ನಟರಾಜ ಪ್ರತಿಷ್ಠಾನ ವಿಶೇಷಾಧಿಕಾರಿ ಎಸ್. ಶಿವರಾಜಪ್ಪ ಮಾತನಾಡಿ, ‘ನಗರ್ಲೆ ಶಿವಕುಮಾರ್ ಕಲೆ, ಸಾಹಿತ್ಯ, ಸಂಸ್ಕೃತಿಯ ಆರಾಧಕರು. ‘ಪ್ರತಿಬಿಂಬ’ ಕೃತಿಯಲ್ಲಿ ಮೂರು ಭಾಗಗಳಿದ್ದು, ಮೊದಲ ಭಾಗದಲ್ಲಿ 24 ಲೇಖನಗಳಿವೆ. 2ನೇ ಭಾಗದಲ್ಲಿ 7 ಮೌಲಿಕ ಕೃತಿಗಳ ಪರಿಚಯವಿದೆ. 3ನೇ ಭಾಗದಲ್ಲಿ 17 ಕವನಗಳಿವೆ’ ಎಂದು ಪರಿಚಯಿಸಿದರು. </p>.<p>ದೇವಲಾಪುರದ ಗುರುಮಲ್ಲೇಶ್ವರದ ದಾಸೋಹ ಮಠದ ಜಡೆ ಸ್ವಾಮೀಜಿ, ಬಸಳ್ಳಿಹುಂಡಿ ಗುರು ಮಲ್ಲೇಶ್ವರ ದಾಸೋಹ ಮಠದ ಬಸವರಾಜ ಸ್ವಾಮಿ, ಸೈಬರ್ ಅಪರಾಧ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಪಿ. ಸುನೀಲ್, ಹೊಸಮಠದ ಚಿದಾನಂದ ಸ್ವಾಮೀಜಿ, ಸಾಹಿತಿ ನಗರ್ಲೆ ಶಿವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಧರ್ಮ ರಕ್ಷಿಸಬೇಕಾದವರು ಅನ್ಯ ಮಾರ್ಗ ಹಿಡಿದಿದ್ದಾರೆ. ನುಡಿದಂತೆ ನಡೆಯುವುದು ಕಷ್ಟಸಾಧ್ಯವಾಗಿದೆ. ಇವುಗಳ ನಡುವೆ ಆಶಾಭಾವನೆ ಇಟ್ಟುಕೊಂಡು ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ’ ಎಂದು ನವಿಲೂರಿನ ಕಡಲಕಟ್ಟೆ ಮಠದ ಚನ್ನಬಸವ ಸ್ವಾಮೀಜಿ ಹೇಳಿದರು.</p>.<p>ಚಂದ್ರು ಸೇವಾ ಬಳಗವು ಇಲ್ಲಿನ ಖಿಲ್ಲೆ ಮೊಹಲ್ಲಾದ ಹೊಸಮಠ ನಟರಾಜ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಚಂದ್ರು ವರ್ಷದ ಸ್ಮರಣೆ ಕಾರ್ಯಕ್ರಮದಲ್ಲಿ ನಗರ್ಲೆ ಶಿವಕುಮಾರ ಅವರ ‘ಪ್ರತಿಬಿಂಬ’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.</p>.<p>‘ಮನುಷ್ಯ ಈಚೆಗೆ ದೈಹಿಕ ಶ್ರಮಕ್ಕಿಂತಲೂ ಮಾನಸಿಕ ಒತ್ತಡಗಳಿಗೆ ಬಲಿಯಾಗುತ್ತಿದ್ದಾನೆ. ನ್ಯಾಯ, ನೀತಿ, ಧರ್ಮ ಯಾರಿಗೂ ಬೇಡವಾಗಿದೆ. ಅದನ್ನು ಪಾಲಿಸುವವರ ಸಂಖ್ಯೆ ವಿರಳವಾಗುತ್ತಿರುವುದು ವಿಷಾದನೀಯ. ಜೀವನ ಮೌಲ್ಯದ ಬಗ್ಗೆ ತಿಳಿಹೇಳುವ ಹಾಗೂ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ನಡೆಯಬೇಕು’ ಎಂದರು.</p>.<p>ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ವಿ.ಬಸವರಾಜ್ ಹಿನಕಲ್ ಮಾತನಾಡಿ, ‘ವೀರಶೈವ ಲಿಂಗಾಯತ ಧರ್ಮವನ್ನು ವಿಶ್ವಧರ್ಮವಾಗಿಸುವುದು ಸಮುದಾಯದವರ ಆದ್ಯ ಕರ್ತವ್ಯವಾಗಿದೆ. ಈ ಧರ್ಮವು ಸುದೀರ್ಘ ಹಾಗೂ ಉಜ್ವಲ ಸಾಂಸ್ಕೃತಿಕ ಪರಂಪರೆ ಹೊಂದಿದೆ. ಮಾನವ ಪ್ರೇಮ, ಸಹಕಾರ, ಶಾಂತಿ, ಸವಾನತೆ, ಭಾವೈಕ್ಯದ ಉದಾತ್ತ ಮೌಲ್ಯಗಳನ್ನು ಸಾರುವ ಧರ್ಮವೇ ಲಿಂಗವಂತರ ಧರ್ಮವಾಗಿದೆ’ ಎಂದು ಹೇಳಿದರು.</p>.<p>ನಟರಾಜ ಪ್ರತಿಷ್ಠಾನ ವಿಶೇಷಾಧಿಕಾರಿ ಎಸ್. ಶಿವರಾಜಪ್ಪ ಮಾತನಾಡಿ, ‘ನಗರ್ಲೆ ಶಿವಕುಮಾರ್ ಕಲೆ, ಸಾಹಿತ್ಯ, ಸಂಸ್ಕೃತಿಯ ಆರಾಧಕರು. ‘ಪ್ರತಿಬಿಂಬ’ ಕೃತಿಯಲ್ಲಿ ಮೂರು ಭಾಗಗಳಿದ್ದು, ಮೊದಲ ಭಾಗದಲ್ಲಿ 24 ಲೇಖನಗಳಿವೆ. 2ನೇ ಭಾಗದಲ್ಲಿ 7 ಮೌಲಿಕ ಕೃತಿಗಳ ಪರಿಚಯವಿದೆ. 3ನೇ ಭಾಗದಲ್ಲಿ 17 ಕವನಗಳಿವೆ’ ಎಂದು ಪರಿಚಯಿಸಿದರು. </p>.<p>ದೇವಲಾಪುರದ ಗುರುಮಲ್ಲೇಶ್ವರದ ದಾಸೋಹ ಮಠದ ಜಡೆ ಸ್ವಾಮೀಜಿ, ಬಸಳ್ಳಿಹುಂಡಿ ಗುರು ಮಲ್ಲೇಶ್ವರ ದಾಸೋಹ ಮಠದ ಬಸವರಾಜ ಸ್ವಾಮಿ, ಸೈಬರ್ ಅಪರಾಧ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಪಿ. ಸುನೀಲ್, ಹೊಸಮಠದ ಚಿದಾನಂದ ಸ್ವಾಮೀಜಿ, ಸಾಹಿತಿ ನಗರ್ಲೆ ಶಿವಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>