<p><strong>ಮೈಸೂರು: </strong>ಪರಸ್ತ್ರೀ ವ್ಯಾಮೋಹದಿಂದ ಗರ್ಭಿಣಿಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿದ್ದಾನೆ ಎಂದು ವ್ಯಕ್ತಿಯೊಬ್ಬನ ಮೇಲೆ ನಗರದ ಅಶೋಕಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ಬಳಿಯ ಶಾಗ್ಯಾ ಗ್ರಾಮದ ಕೀರ್ತನಾ (20) ಎಂಬಾಕೆಯೇ ಗಂಡನಿಂದ ಕೊಲೆಯಾಗಿದ್ದಾರೆ ಎನ್ನಲಾದ ಮಹಿಳೆ.</p>.<p>‘ಕೀರ್ತನಾ ಮೈಸೂರಿನ ಜಯನಗರದ ಚಿನ್ನಗಿರಿ ಕೊಪ್ಪಲಿನ ನಿವಾಸಿ ರಾಘವೇಂದ್ರ ಎಂಬಾತನನ್ನು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ ರಾಘವೇಂದ್ರನಿಗೆ ಇದೇ ಪ್ರದೇಶದ ಸುಂದ್ರಮ್ಮ ಎಂಬಾಕೆಯೊಂದಿಗೆ ಅಕ್ರಮ ಸಂಬಂಧವಿತ್ತು. ಇದರಿಂದ ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ.</p>.<p>ಸುಂದ್ರಮ್ಮನ ಕುಮ್ಮಕ್ಕಿನಿಂದ ಭಾನುವಾರ ರಾತ್ರಿ ಹೆಂಡತಿಯನ್ನು ಹೊಡೆದು ಸಾಯಿಸಿ, ವೇಲಿನಿಂದ ಮನೆಯಲ್ಲಿ ನೇಣು ಬಿಗಿದಿದ್ದಾನೆ. ನಂತರ ಅಕ್ಕಪಕ್ಕದ ಮನೆಯವರಿಗೆ ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸುದ್ದಿ ಹಬ್ಬಿಸಿದ್ದಾನೆ ಎಂದು ಕೀರ್ತನಾ ತಂದೆ ಅಶೋಕ್ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನನ್ವಯ ವಿಚಾರಣೆ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="Briefhead">ಫೇಸ್ಬುಕ್ನಲ್ಲಿ ನಕಲಿ ಖಾತೆ</p>.<p>ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಗುರುದತ್ತ ಹೆಗಡೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆಯಲಾಗಿದೆ.</p>.<p>‘ದುಷ್ಕರ್ಮಿಗಳು ನಕಲಿ ಖಾತೆ ತೆರೆದಿದ್ದು, ಹಣದ ಸಹಾಯ ಕೋರಿದ್ದಾರೆ. ಈ ಬಗ್ಗೆ ಸೈಬರ್ ಪೊಲೀಸರಿಗೂ ಮಾಹಿತಿ ನೀಡಿರುವುದಾಗಿ’ ಗುರುದತ್ತ ಹೆಗಡೆ ತಿಳಿಸಿದ್ದಾರೆ.</p>.<p class="Briefhead">ರಸ್ತೆ ಅಪಘಾತ: ವಕೀಲ ಸಾವು</p>.<p>ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿಗೆ ಮಂಗಳವಾರ ಬೆಳಗಿನ ಜಾವದಲ್ಲಿ ಸ್ನೇಹಿತನೊಟ್ಟಿಗೆ ಬೈಕ್ನಲ್ಲಿ ತೆರಳುತ್ತಿದ್ದ ವಕೀಲರೊಬ್ಬರು, ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಮೇತ ಕೆಳಗೆ ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.</p>.<p>ಕೆ.ಆರ್.ನಗರ ತಾಲ್ಲೂಕಿನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದ ವಿನೋದ್ ರಾಜ್ (43) ಮೃತಪಟ್ಟವರು.</p>.<p>ಸ್ನೇಹಿತ ಮಧುಸೂದನ್ ಜೊತೆ ವಿನೋದ್ರಾಜ್ ಆಯರಹಳ್ಳಿಗೆ ಬರುತ್ತಿದ್ದರು. ಮಧುಸೂದನ್ ದ್ವಿಚಕ್ರ ವಾಹನ ಓಡಿಸುತ್ತಿದ್ದರು. ಬೈಕ್ ನಿಯಂತ್ರಣ ತಪ್ಪಿದ್ದರಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ. ವಿನೋದ್ರಾಜ್ ಡಾಂಬರು ರಸ್ತೆಯ ಮೇಲೆ ಬಿದ್ದಿದ್ದರಿಂದ ತೀವ್ರ ಪೆಟ್ಟು ಬಿದ್ದಿದೆ.</p>.<p>ಮಧುಸೂದನ್ ಸಹ ಅಪಘಾತದಲ್ಲಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಳಿಕೆರೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಪರಸ್ತ್ರೀ ವ್ಯಾಮೋಹದಿಂದ ಗರ್ಭಿಣಿಯಾಗಿದ್ದ ಪತ್ನಿಯನ್ನೇ ಕೊಲೆ ಮಾಡಿದ್ದಾನೆ ಎಂದು ವ್ಯಕ್ತಿಯೊಬ್ಬನ ಮೇಲೆ ನಗರದ ಅಶೋಕಪುರಂ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ಬಳಿಯ ಶಾಗ್ಯಾ ಗ್ರಾಮದ ಕೀರ್ತನಾ (20) ಎಂಬಾಕೆಯೇ ಗಂಡನಿಂದ ಕೊಲೆಯಾಗಿದ್ದಾರೆ ಎನ್ನಲಾದ ಮಹಿಳೆ.</p>.<p>‘ಕೀರ್ತನಾ ಮೈಸೂರಿನ ಜಯನಗರದ ಚಿನ್ನಗಿರಿ ಕೊಪ್ಪಲಿನ ನಿವಾಸಿ ರಾಘವೇಂದ್ರ ಎಂಬಾತನನ್ನು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ ರಾಘವೇಂದ್ರನಿಗೆ ಇದೇ ಪ್ರದೇಶದ ಸುಂದ್ರಮ್ಮ ಎಂಬಾಕೆಯೊಂದಿಗೆ ಅಕ್ರಮ ಸಂಬಂಧವಿತ್ತು. ಇದರಿಂದ ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದ.</p>.<p>ಸುಂದ್ರಮ್ಮನ ಕುಮ್ಮಕ್ಕಿನಿಂದ ಭಾನುವಾರ ರಾತ್ರಿ ಹೆಂಡತಿಯನ್ನು ಹೊಡೆದು ಸಾಯಿಸಿ, ವೇಲಿನಿಂದ ಮನೆಯಲ್ಲಿ ನೇಣು ಬಿಗಿದಿದ್ದಾನೆ. ನಂತರ ಅಕ್ಕಪಕ್ಕದ ಮನೆಯವರಿಗೆ ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸುದ್ದಿ ಹಬ್ಬಿಸಿದ್ದಾನೆ ಎಂದು ಕೀರ್ತನಾ ತಂದೆ ಅಶೋಕ್ಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನನ್ವಯ ವಿಚಾರಣೆ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="Briefhead">ಫೇಸ್ಬುಕ್ನಲ್ಲಿ ನಕಲಿ ಖಾತೆ</p>.<p>ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಗುರುದತ್ತ ಹೆಗಡೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆಯಲಾಗಿದೆ.</p>.<p>‘ದುಷ್ಕರ್ಮಿಗಳು ನಕಲಿ ಖಾತೆ ತೆರೆದಿದ್ದು, ಹಣದ ಸಹಾಯ ಕೋರಿದ್ದಾರೆ. ಈ ಬಗ್ಗೆ ಸೈಬರ್ ಪೊಲೀಸರಿಗೂ ಮಾಹಿತಿ ನೀಡಿರುವುದಾಗಿ’ ಗುರುದತ್ತ ಹೆಗಡೆ ತಿಳಿಸಿದ್ದಾರೆ.</p>.<p class="Briefhead">ರಸ್ತೆ ಅಪಘಾತ: ವಕೀಲ ಸಾವು</p>.<p>ಹುಣಸೂರು: ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಆಯರಹಳ್ಳಿಗೆ ಮಂಗಳವಾರ ಬೆಳಗಿನ ಜಾವದಲ್ಲಿ ಸ್ನೇಹಿತನೊಟ್ಟಿಗೆ ಬೈಕ್ನಲ್ಲಿ ತೆರಳುತ್ತಿದ್ದ ವಕೀಲರೊಬ್ಬರು, ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸಮೇತ ಕೆಳಗೆ ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ.</p>.<p>ಕೆ.ಆರ್.ನಗರ ತಾಲ್ಲೂಕಿನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದ ವಿನೋದ್ ರಾಜ್ (43) ಮೃತಪಟ್ಟವರು.</p>.<p>ಸ್ನೇಹಿತ ಮಧುಸೂದನ್ ಜೊತೆ ವಿನೋದ್ರಾಜ್ ಆಯರಹಳ್ಳಿಗೆ ಬರುತ್ತಿದ್ದರು. ಮಧುಸೂದನ್ ದ್ವಿಚಕ್ರ ವಾಹನ ಓಡಿಸುತ್ತಿದ್ದರು. ಬೈಕ್ ನಿಯಂತ್ರಣ ತಪ್ಪಿದ್ದರಿಂದ ಇಬ್ಬರು ಕೆಳಗೆ ಬಿದ್ದಿದ್ದಾರೆ. ವಿನೋದ್ರಾಜ್ ಡಾಂಬರು ರಸ್ತೆಯ ಮೇಲೆ ಬಿದ್ದಿದ್ದರಿಂದ ತೀವ್ರ ಪೆಟ್ಟು ಬಿದ್ದಿದೆ.</p>.<p>ಮಧುಸೂದನ್ ಸಹ ಅಪಘಾತದಲ್ಲಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಳಿಕೆರೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>