<p><strong>ಮೈಸೂರು</strong>: ‘ಆಸ್ತಿ ತೆರಿಗೆ ಪಾವತಿಸಲು ನೀಡಲಾಗಿರುವ ರಿಯಾಯಿತಿ ಅವಧಿಯನ್ನು ನಗರ ಪಾಲಿಕೆ ಅಧಿಕಾರಿಗಳು ವಿಸ್ತರಿಸಬೇಕು’ ಎಂದು ಮಾಜಿ ಮೇಯರ್ ಬಿ.ಎಲ್. ಭೈರಪ್ಪ ಕೋರಿದರು.</p>.<p>‘ಅಧಿಕಾರಿಗಳು ಚುನಾವಣಾ ಕರ್ತವ್ಯಕ್ಕೆ ನಿಯುಕ್ತಿಗೊಂಡಿದ್ದರಿಂದ ಮತ್ತು ಸರ್ವರ್ ಸಮಸ್ಯೆಯಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಆದಾಯ ಸಂಗ್ರಹವಾಗಿಲ್ಲ. ಇದರಿಂದ ಅನೇಕರು ಪಾಲಿಕೆ ನೀಡಿದ್ದ ರಿಯಾಯಿತಿ ಸೌಲಭ್ಯ ಪಡೆಯಲು ಸಾಧ್ಯವಾಗಿಲ್ಲ. ಆದ್ದರಿಂದ ಈ ಅವಧಿಯನ್ನು ಮತ್ತೆ ಒಂದೂವರೆ ತಿಂಗಳು ವಿಸ್ತರಿಸಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಒತ್ತಾಯಿಸಿದರು.</p>.<p>‘ಹಲವರು ರಿಯಾಯಿತಿ ಸೌಲಭ್ಯ ಪಡೆಯಲು ಪಾಲಿಕೆ ಕಚೇರಿಗಳ ಬಳಿ ಗಂಟೆಗಟ್ಟಲೆ ಕಾದು ನಿಂತಿದ್ದರು. ಆದರೆ, ಲೋಕಸಭೆ ಚುನಾವಣೆ ಕಾರಣ ಅಧಿಕಾರಿಗಳು ಅನ್ಯಕಾರ್ಯಕ್ಕೆ ನಿಯೋಜನೆಗೊಂಡಿದ್ದರಿಂದಾಗಿ ಹಾಗೂ ಸತತ 15 ದಿನ ಪಾಲಿಕೆ ವೆಬ್ಸೈಟ್ ಸರ್ವರ್ ಸಮಸ್ಯೆ ಎದುರಿಸಿದ್ದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ’ ಎಂದು ತಿಳಿಸಿದರು.</p>.<p>‘ಈ ನಿಟ್ಟಿನಲ್ಲಿ ಆಡಳಿತಾಧಿಕಾರಿ ಆಗಿರುವ ಪ್ರಾದೇಶಿಕ ಆಯುಕ್ತರು ಗಮನಹರಿಸಬೇಕು. ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳಕ್ಕೆ ಇರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕೋರಿದರು.</p>.<p>ಮುಖಂಡರಾದ ವಾಸು, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಆಸ್ತಿ ತೆರಿಗೆ ಪಾವತಿಸಲು ನೀಡಲಾಗಿರುವ ರಿಯಾಯಿತಿ ಅವಧಿಯನ್ನು ನಗರ ಪಾಲಿಕೆ ಅಧಿಕಾರಿಗಳು ವಿಸ್ತರಿಸಬೇಕು’ ಎಂದು ಮಾಜಿ ಮೇಯರ್ ಬಿ.ಎಲ್. ಭೈರಪ್ಪ ಕೋರಿದರು.</p>.<p>‘ಅಧಿಕಾರಿಗಳು ಚುನಾವಣಾ ಕರ್ತವ್ಯಕ್ಕೆ ನಿಯುಕ್ತಿಗೊಂಡಿದ್ದರಿಂದ ಮತ್ತು ಸರ್ವರ್ ಸಮಸ್ಯೆಯಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ಆದಾಯ ಸಂಗ್ರಹವಾಗಿಲ್ಲ. ಇದರಿಂದ ಅನೇಕರು ಪಾಲಿಕೆ ನೀಡಿದ್ದ ರಿಯಾಯಿತಿ ಸೌಲಭ್ಯ ಪಡೆಯಲು ಸಾಧ್ಯವಾಗಿಲ್ಲ. ಆದ್ದರಿಂದ ಈ ಅವಧಿಯನ್ನು ಮತ್ತೆ ಒಂದೂವರೆ ತಿಂಗಳು ವಿಸ್ತರಿಸಬೇಕು’ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಒತ್ತಾಯಿಸಿದರು.</p>.<p>‘ಹಲವರು ರಿಯಾಯಿತಿ ಸೌಲಭ್ಯ ಪಡೆಯಲು ಪಾಲಿಕೆ ಕಚೇರಿಗಳ ಬಳಿ ಗಂಟೆಗಟ್ಟಲೆ ಕಾದು ನಿಂತಿದ್ದರು. ಆದರೆ, ಲೋಕಸಭೆ ಚುನಾವಣೆ ಕಾರಣ ಅಧಿಕಾರಿಗಳು ಅನ್ಯಕಾರ್ಯಕ್ಕೆ ನಿಯೋಜನೆಗೊಂಡಿದ್ದರಿಂದಾಗಿ ಹಾಗೂ ಸತತ 15 ದಿನ ಪಾಲಿಕೆ ವೆಬ್ಸೈಟ್ ಸರ್ವರ್ ಸಮಸ್ಯೆ ಎದುರಿಸಿದ್ದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ’ ಎಂದು ತಿಳಿಸಿದರು.</p>.<p>‘ಈ ನಿಟ್ಟಿನಲ್ಲಿ ಆಡಳಿತಾಧಿಕಾರಿ ಆಗಿರುವ ಪ್ರಾದೇಶಿಕ ಆಯುಕ್ತರು ಗಮನಹರಿಸಬೇಕು. ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಳಕ್ಕೆ ಇರುವ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಕೋರಿದರು.</p>.<p>ಮುಖಂಡರಾದ ವಾಸು, ವೆಂಕಟೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>