<p><strong>ನಾಗಮಂಗಲ</strong>: ನಮ್ಮ ಸುತ್ತಮುತ್ತಲ ಪರಿಸರದ ಸ್ವಚ್ಛತೆ ಕಾಪಾಡಿಕೊಂಡು ಮುಂಜಾಗ್ರತೆಯಿಂದ ಇರುವುದೇ ರೋಗ ನಿಯಂತ್ರಣಕ್ಕೆ ಮದ್ದು ಎಂದು ಚೀಣ್ಯ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಉಮಾಶಂಕರ್ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಹೊಣಕೆರೆ ಹೋಬಳಿಯ ಚೀಣ್ಯ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಮತ್ತು ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶಪಡಿಸುವ ಮತ್ತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗ್ರಾಮದಲ್ಲಿ ನೀರನ್ನು ಸಂಗ್ರಹಿಸುವ ತೊಟ್ಟಿಗಳು ಸೇರಿದಂತೆ ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾಗಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡದಂತೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಎಚ್ಚರವಹಿಸಬೇಕು ಎಂದರು.</p>.<p>ಶಿಕ್ಷಕ ಪಿ.ತೇಜಸ್ವಿನಿ ಮಾತನಾಡಿ, ‘ಡೆಂಗಿ, ಚಿಕುನ್ ಗುನ್ಯಾ ಕಾಣಿಸಿಕೊಂಡಾಗ ಆತಂಕಪಡುವ ಅಗತ್ಯವಿಲ್ಲ. ತಕ್ಷಣವೇ ವೈದ್ಯರ ಬಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ದೃಢಪಟ್ಟರೆ ಸೂಕ್ತ ಚಿಕಿತ್ಸೆ ಪಡೆದು ಔಷಧ ತೆಗೆದುಕೊಳ್ಳುವ ಮೂಲಕ ರೋಗವನ್ನು ಗುಣಪಡಿಸಿಕೊಳ್ಳಬಹುದು’ ಎಂದು ಹೇಳಿದರು.</p>.<p>‘ರೋಗವು ಸೊಳ್ಳೆಗಳ ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದರಿಂದ ಜನರು ಸ್ವಚ್ಛತೆ ಕಾಪಾಡಿಕೊಂಡು ಸೊಳ್ಳೆಗಳು ಸಂತಾನೋತ್ಪತ್ತಿ ಮಾಡದಂತೆ ಎಚ್ಚರ ವಹಿಸಬೇಕು. ಜೊತೆಗೆ ಆರೋಗ್ಯದ ಕುರಿತು ಮುಂಜಾಗೃತೆ ವಹಿಸುವುದು ಅತ್ಯಂತ ಮುಖ್ಯ’ ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳು ಗ್ರಾಮಕ್ಕೆ ತೆರಳಿ ಜಾಗೃತಿ ಜಾಥಾ ನಡೆಸಿ ಡೆಂಗಿ ಮತ್ತು ಚಿಕೂನ್ ಗುನ್ಯಾ ಕುರಿತು ಜಾಗೃತಿ ಮೂಡಿಸಿದರು. ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಘೋಷಣೆ ಕೂಗಿದರು.</p>.<p>ಶಿಕ್ಷಕರಾದ ಬಸವೇಗೌಡ, ಬಸವರಾಜು, ಶ್ರೀಧರ್, ಪ್ರಕಾಶ್, ಶೃತಿ, ರಿಹಾನಾ, ಶಾಜಿಯಾ, ರುದ್ರೇಶ್ ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ನಮ್ಮ ಸುತ್ತಮುತ್ತಲ ಪರಿಸರದ ಸ್ವಚ್ಛತೆ ಕಾಪಾಡಿಕೊಂಡು ಮುಂಜಾಗ್ರತೆಯಿಂದ ಇರುವುದೇ ರೋಗ ನಿಯಂತ್ರಣಕ್ಕೆ ಮದ್ದು ಎಂದು ಚೀಣ್ಯ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಉಮಾಶಂಕರ್ ಕಿವಿಮಾತು ಹೇಳಿದರು.</p>.<p>ತಾಲ್ಲೂಕಿನ ಹೊಣಕೆರೆ ಹೋಬಳಿಯ ಚೀಣ್ಯ ಪದವಿಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗ ಮತ್ತು ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಸೊಳ್ಳೆಗಳ ಉತ್ಪತ್ತಿ ತಾಣಗಳ ನಾಶಪಡಿಸುವ ಮತ್ತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಗ್ರಾಮದಲ್ಲಿ ನೀರನ್ನು ಸಂಗ್ರಹಿಸುವ ತೊಟ್ಟಿಗಳು ಸೇರಿದಂತೆ ಇತರೆ ವಸ್ತುಗಳಲ್ಲಿ ನೀರು ಸಂಗ್ರಹವಾಗಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡದಂತೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಎಚ್ಚರವಹಿಸಬೇಕು ಎಂದರು.</p>.<p>ಶಿಕ್ಷಕ ಪಿ.ತೇಜಸ್ವಿನಿ ಮಾತನಾಡಿ, ‘ಡೆಂಗಿ, ಚಿಕುನ್ ಗುನ್ಯಾ ಕಾಣಿಸಿಕೊಂಡಾಗ ಆತಂಕಪಡುವ ಅಗತ್ಯವಿಲ್ಲ. ತಕ್ಷಣವೇ ವೈದ್ಯರ ಬಳಿಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ರೋಗ ದೃಢಪಟ್ಟರೆ ಸೂಕ್ತ ಚಿಕಿತ್ಸೆ ಪಡೆದು ಔಷಧ ತೆಗೆದುಕೊಳ್ಳುವ ಮೂಲಕ ರೋಗವನ್ನು ಗುಣಪಡಿಸಿಕೊಳ್ಳಬಹುದು’ ಎಂದು ಹೇಳಿದರು.</p>.<p>‘ರೋಗವು ಸೊಳ್ಳೆಗಳ ಮೂಲಕ ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದರಿಂದ ಜನರು ಸ್ವಚ್ಛತೆ ಕಾಪಾಡಿಕೊಂಡು ಸೊಳ್ಳೆಗಳು ಸಂತಾನೋತ್ಪತ್ತಿ ಮಾಡದಂತೆ ಎಚ್ಚರ ವಹಿಸಬೇಕು. ಜೊತೆಗೆ ಆರೋಗ್ಯದ ಕುರಿತು ಮುಂಜಾಗೃತೆ ವಹಿಸುವುದು ಅತ್ಯಂತ ಮುಖ್ಯ’ ಎಂದು ಸಲಹೆ ನೀಡಿದರು.</p>.<p>ವಿದ್ಯಾರ್ಥಿಗಳು ಗ್ರಾಮಕ್ಕೆ ತೆರಳಿ ಜಾಗೃತಿ ಜಾಥಾ ನಡೆಸಿ ಡೆಂಗಿ ಮತ್ತು ಚಿಕೂನ್ ಗುನ್ಯಾ ಕುರಿತು ಜಾಗೃತಿ ಮೂಡಿಸಿದರು. ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಘೋಷಣೆ ಕೂಗಿದರು.</p>.<p>ಶಿಕ್ಷಕರಾದ ಬಸವೇಗೌಡ, ಬಸವರಾಜು, ಶ್ರೀಧರ್, ಪ್ರಕಾಶ್, ಶೃತಿ, ರಿಹಾನಾ, ಶಾಜಿಯಾ, ರುದ್ರೇಶ್ ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>