‘ನಮ್ಮ ಸಂಸ್ಕೃತಿ ಮತ್ತು ಜನರ ಸಂಸ್ಕಾರದ ಉಳಿವಿಗೆ ದೇವಸ್ಥಾನದ ಅರ್ಚಕ ವೃತ್ತಿಯನ್ನು ಪುರುಷರಿಗೆ ಮಾತ್ರವೇ ಮೀಸಲಿಡಬೇಕು. ಮಹಿಳೆಯರನ್ನು ಅರ್ಚಕರನ್ನಾಗಿ ನೇಮಿಸುವ ನಿರ್ಧಾರಗಳೂ ಸೂಕ್ತವಲ್ಲ’ ಎಂದರು.
‘ಮಠಗಳು ಒಂದು ಸಮುದಾಯ ಮತ್ತು ಜಾತಿಯ ಪ್ರತಿನಿಧಿಯಾಗುತ್ತವೆ. ಆದರೆ, ದೇವಾಲಯಗಳು ಇಡೀ ಸಮಾಜದ ಪ್ರತಿನಿಧಿಯಾಗುತ್ತವೆ. ಅದು ಜಾತ್ಯತೀತವಾಗಿರಬೇಕು. ಸಂಪ್ರದಾಯ– ಸಂಪ್ರದಾಯಗಳ ನಡುವೆ ಜಗಳ ಮಾಡಬಾರದು. ಪ್ರತಿ ದೇವಾಲಯವೂ ಇರುವುದು ಮಾನವನ ಉದ್ಧಾರಕ್ಕಾಗಿಯೇ. ನಾನು ಕನ್ನಡದಲ್ಲಿ ಮಂತ್ರ ಹೇಳುತ್ತೇನೆ ಎಂದು ಕೆಲ ಸಂಪ್ರದಾಯಸ್ಥರಿಗೆ ಸಿಟ್ಟಿದೆ. ನಾವು ಹೇಳುವ ಮಂತ್ರ ಎಲ್ಲರಿಗೂ ಅರ್ಥವಾದರೆ ಮಾತ್ರ ಒಳಗೊಳ್ಳುವಿಕೆ ಸಾಧ್ಯ. ದೇವಸ್ಥಾನವು ಧರ್ಮದರ್ಶಿಗಳ ಪ್ರತಿಷ್ಠೆಗೆ ವೇದಿಕೆಯಾಗಬಾರದು’ ಎಂದು ನುಡಿದರು.
ಸಮಿತಿಯ ಸಂಯೋಜಕ ಮನೋಹರ ಮಠದ ಮಾತನಾಡಿ, ‘ರಾಜ್ಯದಲ್ಲಿ 33,563 ಮುಜರಾಯಿ ದೇವಸ್ಥಾನ ಹಾಗೂ 2.5 ಲಕ್ಷ ಖಾಸಗಿ ದೇವಸ್ಥಾನಗಳಿವೆ. ಈ ಎಲ್ಲವೂ ಸಮಾಜದ ಸುರಕ್ಷೆ, ಸಂಸ್ಕಾರ, ಧಾರ್ಮಿಕ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು ಸಮಿತಿಯ ಉದ್ದೇಶ. ಇವುಗಳ ಕಾರ್ಯಾಚರಣೆಯಲ್ಲಿ ಸರ್ಕಾರದ ಹಸ್ತಕ್ಷೇಪ ಇರಬಾರದು’ ಎಂದು ಒತ್ತಾಯಿಸಿದರು.