ಮೈಸೂರು:ಮೈಸೂರಿನಲ್ಲಿ ಕೊರೊನಾ ಸೋಂಕು ಹಾಗೂ ಸಾವಿನ ಪ್ರಮಾಣ ಅಧಿಕವಾಗಿರುವುದರಿಂದ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಇದಕ್ಕೆ ಬದ್ಧವಾಗಿದೆಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಬುಧವಾರ ಇಲ್ಲಿ ತಿಳಿಸಿದರು.
ದೇಶದ 17 ರಾಜ್ಯಗಳ 60 ಜಿಲ್ಲೆಗಳಲ್ಲಿ ಕೋವಿಡ್ ಆರ್ಭಟ ಜೋರಾಗಿದೆ. ಅದರಲ್ಲಿ ರಾಜ್ಯದ ಬೆಂಗಳೂರು, ಮೈಸೂರು ಕೂಡ ಸೇರಿವೆ. ಈ ಭಾಗದಲ್ಲಿಹೆಚ್ಚಿನ ನಿಗಾ ವಹಿಸುವಂತೆ ಕೂಡ ಸಲಹೆ ನೀಡಿದ್ದಾರೆ ಎಂದರು.
‘ದಸರೆ ಕಾರ್ಯಕ್ರಮಗಳಲ್ಲಿಬಹಳಷ್ಟು ಜನ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇಂಥ ಸಂದರ್ಭದಲ್ಲಿ ಏನು ಮಾಡಬೇಕು, ಜನರ ಸುರಕ್ಷತೆಗೆ ಯಾವ ರೀತಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ವಿಡಿಯೊ ಕಾನ್ಫರೆನ್ಸ್ನಲ್ಲಿ ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ’ ಎಂದು ವಿವರಿಸಿದರು.