<p><strong>ಮೈಸೂರು</strong>: ‘ತಂತ್ರಜ್ಞಾನ ಯುಗದಲ್ಲಿ ಅವಕಾಶದ ಜೊತೆಯಲ್ಲಿಯೇ ಸಮಸ್ಯೆಗಳೂ ಸೃಷ್ಟಿಯಾಗಿವೆ. ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳುವ ಬದಲು ಪರಿಹಾರ ಕಂಡುಕೊಳ್ಳಲು ಚಿಂತನೆ ನಡೆಸಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು. </p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಕೆಎಸ್ಒಯು ಹಾಗೂ ಮೈಸೂರು ವಿ.ವಿ ಸಮಾಜಕಾರ್ಯ ಅಧ್ಯಯನ ವಿಭಾಗಗಳು ಗುರುವಾರ ಆಯೋಜಿಸಿದ್ದ ‘ಸಮಾಜ ಕಾರ್ಯದಲ್ಲಿ ಹೊಸನೋಟಗಳು’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>‘ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಹೊಸ ಸಾಧ್ಯತೆಗಳತ್ತ ದೃಷ್ಟಿ ನೆಟ್ಟರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು’ ಎಂದರು.</p>.<p>‘ಯಾವುದೇ ಸಾಧನೆ ತೋರಬೇಕಾದರೆ ನಿರಂತರ ಶ್ರಮ ಅವಶ್ಯ. ಯಾವಾಗಲೋ ಒಮ್ಮೆ ಪ್ರಯತ್ನ ನಡೆಸಿದರೆ ಯಶಸ್ಸು ದೊರಕದು. ಆತ್ಮವಿಶ್ವಾಸ, ನಂಬಿಕೆ ಹಾಗೂ ಸತತ ಪರಿಶ್ರಮದ ಅಗತ್ಯವಿದೆ’ ಎಂದು ಹೇಳಿದರು.</p>.<p>ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಅಂತರರಾಷ್ಟ್ರೀಯ ಸಮಾಜ ಕಾರ್ಯ ಒಕ್ಕೂಟದ ಖಜಾಂಚಿ ಎಂ.ವಿ.ಶ್ರೀಗಣೇಶ್, ಟಿಐಎಸ್ಎಸ್ನ ಪ್ರೊ ಮನೀಶ್ ಕುಮಾರ್ ಝಾ, ನಿಮ್ಹಾನ್ಸ್ನ ಪ್ರೊ.ಐ.ಎ.ಶರೀಫ್, ಪ್ರೊ. ವೈ.ಎಸ್. ಸಿದ್ದೇಗೌಡ, ಪ್ರೊ.ಕೆ.ಬಿ.ಪ್ರವೀಣ, ಪ್ರೊ.ಬಿ.ರಮೇಶ್, ಪ್ರೊ.ಕೆ.ಜಿ.ಪರಶುರಾಮ, ಪ್ರೊ.ಆರ್.ಶಿವಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ತಂತ್ರಜ್ಞಾನ ಯುಗದಲ್ಲಿ ಅವಕಾಶದ ಜೊತೆಯಲ್ಲಿಯೇ ಸಮಸ್ಯೆಗಳೂ ಸೃಷ್ಟಿಯಾಗಿವೆ. ವಿದ್ಯಾರ್ಥಿಗಳು ಸಮಸ್ಯೆ ಹೇಳಿಕೊಳ್ಳುವ ಬದಲು ಪರಿಹಾರ ಕಂಡುಕೊಳ್ಳಲು ಚಿಂತನೆ ನಡೆಸಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹೇಳಿದರು. </p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಕೆಎಸ್ಒಯು ಹಾಗೂ ಮೈಸೂರು ವಿ.ವಿ ಸಮಾಜಕಾರ್ಯ ಅಧ್ಯಯನ ವಿಭಾಗಗಳು ಗುರುವಾರ ಆಯೋಜಿಸಿದ್ದ ‘ಸಮಾಜ ಕಾರ್ಯದಲ್ಲಿ ಹೊಸನೋಟಗಳು’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.</p>.<p>‘ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಸಮಸ್ಯೆಗಳಿಗೆ ಪರಿಹಾರ ಹುಡುಕುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಹೊಸ ಸಾಧ್ಯತೆಗಳತ್ತ ದೃಷ್ಟಿ ನೆಟ್ಟರೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು’ ಎಂದರು.</p>.<p>‘ಯಾವುದೇ ಸಾಧನೆ ತೋರಬೇಕಾದರೆ ನಿರಂತರ ಶ್ರಮ ಅವಶ್ಯ. ಯಾವಾಗಲೋ ಒಮ್ಮೆ ಪ್ರಯತ್ನ ನಡೆಸಿದರೆ ಯಶಸ್ಸು ದೊರಕದು. ಆತ್ಮವಿಶ್ವಾಸ, ನಂಬಿಕೆ ಹಾಗೂ ಸತತ ಪರಿಶ್ರಮದ ಅಗತ್ಯವಿದೆ’ ಎಂದು ಹೇಳಿದರು.</p>.<p>ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಅಂತರರಾಷ್ಟ್ರೀಯ ಸಮಾಜ ಕಾರ್ಯ ಒಕ್ಕೂಟದ ಖಜಾಂಚಿ ಎಂ.ವಿ.ಶ್ರೀಗಣೇಶ್, ಟಿಐಎಸ್ಎಸ್ನ ಪ್ರೊ ಮನೀಶ್ ಕುಮಾರ್ ಝಾ, ನಿಮ್ಹಾನ್ಸ್ನ ಪ್ರೊ.ಐ.ಎ.ಶರೀಫ್, ಪ್ರೊ. ವೈ.ಎಸ್. ಸಿದ್ದೇಗೌಡ, ಪ್ರೊ.ಕೆ.ಬಿ.ಪ್ರವೀಣ, ಪ್ರೊ.ಬಿ.ರಮೇಶ್, ಪ್ರೊ.ಕೆ.ಜಿ.ಪರಶುರಾಮ, ಪ್ರೊ.ಆರ್.ಶಿವಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>