‘ದೇವಾಲಯವನ್ನು ಬಣ್ಣಬಣ್ಣದ ವಿದ್ಯುತ್ ಬಲ್ಬ್ಗಳಿಂದ ಅಲಂಕರಿಸಲಾಗಿದೆ. ತಳಿರು ತೋರಣಗಳಿಂದ ಸಿಂಗಾರಗೊಂಡು ಮಂಟಪಗಳು ಕಂಗೊಳಿಸುತ್ತಿವೆ, ಅರವಟ್ಟಿಗೆ ಮತ್ತು ಮೆಟ್ಟಿಲುಗಳನ್ನು ಸ್ವಚ್ಛಗೊಳಿಸಿ ಸುಣ್ಣ ಬಳಿಯಲಾಗಿದೆ. ದಾಸೋಹ ಭವನ ಸಜ್ಜುಗೊಂಡಿದ್ದು, ಭಕ್ತರಿಗೆ ಪ್ರತಿದಿನ ಪ್ರಸಾದ ವಿತರಿಸಲಾಗುತ್ತಿದೆ. ದೊಡ್ಡ ರಥವು ಸಿದ್ಧಗೊಂಡಿದ್ದು, ಭಕ್ತರ ಪೂಜೆಗೆ ಅಣಿಗೊಳಿಸಲಾಗಿದೆ’ ಎಂದು ಇಒ ವೈ.ಎನ್.ಮೋಹನ್ ಕುಮಾರ್ ಹೇಳಿದರು.