<p><strong>ಮೈಸೂರು:</strong> ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದ ಭಾಗವಾಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯಿಂದ ಮಾರ್ಚ್ 7ರಂದು ಜಿಲ್ಲಾ ಮಟ್ಟದ ‘ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ’ವನ್ನು ಇಲ್ಲಿನ ನಜರ್ಬಾದ್ನ ವೈದ್ಯರ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸಿ. ಸುವರ್ಣಾ ಅಧ್ಯಕ್ಷತೆ ವಹಿಸಿದ್ದರು. ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿದ್ದರು. ಸೊಳ್ಳೆಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳಿಸಿಕೊಟ್ಟರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ ಅಧಿಕಾರಿ ಹಾಗೂ ಸಿಬ್ಬಂದಿ ತೀರ್ಪುಗಾರರಾಗಿ ಭಾಗವಹಿಸಿದ್ದರು.</p>.<p>ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಸ್ಪರ್ಧಿಸಿದ್ದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಗಳಿಸಿದ್ದ 5ರಿಂದ 7ನೇ ತರಗತಿಯ ಮೂವರು ಮತ್ತು 8ರಿಂದ 10ನೇ ತರಗತಿಯ ಮೂವರು ಮಕ್ಕಳು ಭಾಗವಹಿಸಿದ್ದರು.</p>.<p>ಪ್ರಾಥಮಿಕ ಶಾಲಾ ಮಕ್ಕಳು: ಪ್ರಥಮ ಬಹುಮಾನ– ನಂಜನಗೂಡು ಅಶೋಕಪುರಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂದಿನಿ, ದ್ವಿತೀಯ ಬಹುಮಾನ– ಅರಸನಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಗೀತಾ, ತೃತೀಯ ಬಹುಮಾನ– ಹೂಟಗಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೀತಂಕುಮಾರ್ ಮತ್ತು ಬಾಲಾಜಿ.</p>.<p>ಫ್ರೌಢಶಾಲಾ ಮಕ್ಕಳು: ಪ್ರಥಮ ಬಹುಮಾನ– ಹುಣಸೂರಿನ ಮನುಗನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಸಿಂಚನಾ ಸಿ., ದ್ವಿತೀಯ ಬಹುಮಾನ– ಎಚ್.ಡಿ. ಕೋಟೆಯ ಮಾದಾಪುರದ ಸರ್ಕಾರಿ ಪ್ರೌಢ ಶಾಲೆಯ ಸುಷ್ಮಿತಾ ಹಾಗೂ ತೃತೀಯ ಬಹುಮಾನ –ಕೆ.ಆರ್.ನಗರದ ಆದರ್ಶ ವಿದ್ಯಾಲಯದ ಭಾವನಾ ಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದ ಭಾಗವಾಗಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯಿಂದ ಮಾರ್ಚ್ 7ರಂದು ಜಿಲ್ಲಾ ಮಟ್ಟದ ‘ಸೊಳ್ಳೆ ನಿಯಂತ್ರಣ ವಿಧಾನಗಳ ಮಾದರಿ ಪ್ರದರ್ಶನ’ವನ್ನು ಇಲ್ಲಿನ ನಜರ್ಬಾದ್ನ ವೈದ್ಯರ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿತ್ತು.</p>.<p>ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸಿ. ಸುವರ್ಣಾ ಅಧ್ಯಕ್ಷತೆ ವಹಿಸಿದ್ದರು. ಡಿಎಚ್ಒ ಡಾ.ಪಿ.ಸಿ. ಕುಮಾರಸ್ವಾಮಿ ಮುಖ್ಯ ಅತಿಥಿಯಾಗಿದ್ದರು. ಸೊಳ್ಳೆಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಿಳಿಸಿಕೊಟ್ಟರು.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ ಅಧಿಕಾರಿ ಹಾಗೂ ಸಿಬ್ಬಂದಿ ತೀರ್ಪುಗಾರರಾಗಿ ಭಾಗವಹಿಸಿದ್ದರು.</p>.<p>ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದಲ್ಲಿ ಸ್ಪರ್ಧಿಸಿದ್ದ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಗಳಿಸಿದ್ದ 5ರಿಂದ 7ನೇ ತರಗತಿಯ ಮೂವರು ಮತ್ತು 8ರಿಂದ 10ನೇ ತರಗತಿಯ ಮೂವರು ಮಕ್ಕಳು ಭಾಗವಹಿಸಿದ್ದರು.</p>.<p>ಪ್ರಾಥಮಿಕ ಶಾಲಾ ಮಕ್ಕಳು: ಪ್ರಥಮ ಬಹುಮಾನ– ನಂಜನಗೂಡು ಅಶೋಕಪುರಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂದಿನಿ, ದ್ವಿತೀಯ ಬಹುಮಾನ– ಅರಸನಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಗೀತಾ, ತೃತೀಯ ಬಹುಮಾನ– ಹೂಟಗಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೀತಂಕುಮಾರ್ ಮತ್ತು ಬಾಲಾಜಿ.</p>.<p>ಫ್ರೌಢಶಾಲಾ ಮಕ್ಕಳು: ಪ್ರಥಮ ಬಹುಮಾನ– ಹುಣಸೂರಿನ ಮನುಗನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಸಿಂಚನಾ ಸಿ., ದ್ವಿತೀಯ ಬಹುಮಾನ– ಎಚ್.ಡಿ. ಕೋಟೆಯ ಮಾದಾಪುರದ ಸರ್ಕಾರಿ ಪ್ರೌಢ ಶಾಲೆಯ ಸುಷ್ಮಿತಾ ಹಾಗೂ ತೃತೀಯ ಬಹುಮಾನ –ಕೆ.ಆರ್.ನಗರದ ಆದರ್ಶ ವಿದ್ಯಾಲಯದ ಭಾವನಾ ಡಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>