<p><strong>ಮೈಸೂರು: ‘</strong>ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ವಿಶ್ವದ ದೃಷ್ಟಿಕೋನ ಬದಲಾಗಿದ್ದು, ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಸೂಕ್ಷ್ಮ ಗ್ರಹಿಕೆಗಳನ್ನು ರೂಢಿಸಿಕೊಳ್ಳಬೇಕು’ ಎಂದು ಜೆ.ಕೆ. ಟೈರ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್ನ ಉಪಾಧ್ಯಕ್ಷ ಈಶ್ವರ ರಾವ್ ಸಲಹೆ ನೀಡಿದರು.</p>.<p>ಇಲ್ಲಿನ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಖಾತ್ರಿ ಕೋಶದಿಂದ ಪದವಿ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಇಂಟರ್ನ್ಶಿಪ್ ಮತ್ತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹತ್ತಾದ ಗುರಿಯನ್ನು ಇಟ್ಟುಕೊಂಡು ಅದನ್ನು ತಲುಪಲು ಸದಾ ಪ್ರಯತ್ನಿಸಬೇಕು. ಮಧ್ಯಮ ವರ್ಗದಿಂದ ಬಂದವರು ದೊಡ್ಡ ಕನಸುಗಳನ್ನು ಕಾಣಬೇಕು. ಕನಸುಗಳನ್ನು ಈಡೇರಿಸಿಕೊಳ್ಳಲು ಶ್ರಮ ವಹಿಸಬೇಕು. ಆ ಮೂಲಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಥಾನವನ್ನು ಕಂಡುಕೊಳ್ಳಬೇಕು’ ಎಂದರು.</p>.<p>ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ.ಡಿ.ಆನಂದ್ ಮಾತನಾಡಿ, ‘ಇದುವರೆಗೆ ಇಂಟರ್ನ್ಶಿಪ್ ಎಂಬುದು ಕೆಲವೇ ಅಧ್ಯಯನ ಶಿಸ್ತುಗಳಿಗೆ ಮಾತ್ರ ಸೀಮಿತವಾಗಿತ್ತು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಇದನ್ನು ಎಲ್ಲಾ ಅಧ್ಯಯನ ಶಿಸ್ತುಗಳಿಗೂ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ನಡೆಸುತ್ತಿರುವುದು ಮಾದರಿಯಾಗಿದೆ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮಾತನಾಡಿ, ‘ಉದ್ಯೋಗ ಇಲ್ಲದವರನ್ನು ಯಾರೂ ಗುರುತಿಸುವುದಿಲ್ಲ. ಉತ್ತಮ ಉದ್ಯೋಗ ಬೇಕಾದರೆ ಉತ್ತಮ ಶಿಕ್ಷಣ ಪಡೆಯಬೇಕು. ಅದಕ್ಕಾಗಿ ಸಜ್ಜುಗೊಳಿಸಲು ಇಂಟರ್ನ್ಶಿಪ್ನಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ವಿಜ್ಞಾನಿ ಎಂ. ಧರ್ಮಪ್ರಸಾದ್ ಮಾತನಾಡಿದರು.</p>.<p>ಪ್ರಾಂಶುಪಾಲೆ ಎಸ್. ಪ್ರತಿಭಾ, ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಯೋಜಕ ಎನ್. ರಾಜೇಂದ್ರ ಪ್ರಸಾದ್, ಸಹಾಯಕ ಪ್ರಾಧ್ಯಾಪಕಿ ಎಂ. ರಮ್ಯಶ್ರೀ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ವಿಶ್ವದ ದೃಷ್ಟಿಕೋನ ಬದಲಾಗಿದ್ದು, ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಸೂಕ್ಷ್ಮ ಗ್ರಹಿಕೆಗಳನ್ನು ರೂಢಿಸಿಕೊಳ್ಳಬೇಕು’ ಎಂದು ಜೆ.ಕೆ. ಟೈರ್ ಅಂಡ್ ಇಂಡಸ್ಟ್ರೀಸ್ ಲಿಮಿಟೆಡ್ನ ಉಪಾಧ್ಯಕ್ಷ ಈಶ್ವರ ರಾವ್ ಸಲಹೆ ನೀಡಿದರು.</p>.<p>ಇಲ್ಲಿನ ಊಟಿ ರಸ್ತೆಯ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಖಾತ್ರಿ ಕೋಶದಿಂದ ಪದವಿ ವಿದ್ಯಾರ್ಥಿಗಳಿಗಾಗಿ ಶನಿವಾರ ಆಯೋಜಿಸಿದ್ದ ಇಂಟರ್ನ್ಶಿಪ್ ಮತ್ತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹತ್ತಾದ ಗುರಿಯನ್ನು ಇಟ್ಟುಕೊಂಡು ಅದನ್ನು ತಲುಪಲು ಸದಾ ಪ್ರಯತ್ನಿಸಬೇಕು. ಮಧ್ಯಮ ವರ್ಗದಿಂದ ಬಂದವರು ದೊಡ್ಡ ಕನಸುಗಳನ್ನು ಕಾಣಬೇಕು. ಕನಸುಗಳನ್ನು ಈಡೇರಿಸಿಕೊಳ್ಳಲು ಶ್ರಮ ವಹಿಸಬೇಕು. ಆ ಮೂಲಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಥಾನವನ್ನು ಕಂಡುಕೊಳ್ಳಬೇಕು’ ಎಂದರು.</p>.<p>ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ.ಡಿ.ಆನಂದ್ ಮಾತನಾಡಿ, ‘ಇದುವರೆಗೆ ಇಂಟರ್ನ್ಶಿಪ್ ಎಂಬುದು ಕೆಲವೇ ಅಧ್ಯಯನ ಶಿಸ್ತುಗಳಿಗೆ ಮಾತ್ರ ಸೀಮಿತವಾಗಿತ್ತು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಇದನ್ನು ಎಲ್ಲಾ ಅಧ್ಯಯನ ಶಿಸ್ತುಗಳಿಗೂ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ನಡೆಸುತ್ತಿರುವುದು ಮಾದರಿಯಾಗಿದೆ’ ಎಂದು ಹೇಳಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ ಮಾತನಾಡಿ, ‘ಉದ್ಯೋಗ ಇಲ್ಲದವರನ್ನು ಯಾರೂ ಗುರುತಿಸುವುದಿಲ್ಲ. ಉತ್ತಮ ಉದ್ಯೋಗ ಬೇಕಾದರೆ ಉತ್ತಮ ಶಿಕ್ಷಣ ಪಡೆಯಬೇಕು. ಅದಕ್ಕಾಗಿ ಸಜ್ಜುಗೊಳಿಸಲು ಇಂಟರ್ನ್ಶಿಪ್ನಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ವಿಜ್ಞಾನಿ ಎಂ. ಧರ್ಮಪ್ರಸಾದ್ ಮಾತನಾಡಿದರು.</p>.<p>ಪ್ರಾಂಶುಪಾಲೆ ಎಸ್. ಪ್ರತಿಭಾ, ಆಂತರಿಕ ಗುಣಮಟ್ಟ ಖಾತ್ರಿ ಕೋಶದ ಸಂಯೋಜಕ ಎನ್. ರಾಜೇಂದ್ರ ಪ್ರಸಾದ್, ಸಹಾಯಕ ಪ್ರಾಧ್ಯಾಪಕಿ ಎಂ. ರಮ್ಯಶ್ರೀ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>