ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಪ್ರೊ.ಡಿ.ಆನಂದ್ ಮಾತನಾಡಿ, ‘ಇದುವರೆಗೆ ಇಂಟರ್ನ್ಶಿಪ್ ಎಂಬುದು ಕೆಲವೇ ಅಧ್ಯಯನ ಶಿಸ್ತುಗಳಿಗೆ ಮಾತ್ರ ಸೀಮಿತವಾಗಿತ್ತು. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಇದನ್ನು ಎಲ್ಲಾ ಅಧ್ಯಯನ ಶಿಸ್ತುಗಳಿಗೂ ಅಳವಡಿಸಲಾಗಿದೆ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ನಡೆಸುತ್ತಿರುವುದು ಮಾದರಿಯಾಗಿದೆ’ ಎಂದು ಹೇಳಿದರು.