<p><strong>ಮೈಸೂರು:</strong> ‘ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು (ಇ.ಡಿ) ರಾಜಕೀಯ ಮಾಡಿದೆ ಎಂಬುದು ಸುಪ್ರೀಂ ಕೋರ್ಟ್ ತೀರ್ಪಿನಿಂದ ಸಾಬೀತಾಗಿದೆ’ ಎಂದು ಚಾಮರಾಜನಗರ ಸಂಸದ ಸುನೀಲ್ ಬೋಸ್ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಇ.ಡಿಯು ರಾಜಕೀಯ ಮಾಡುತ್ತಿದ್ದು, ಇದು ಸರಿಯಲ್ಲ ಎಂಬುದಾಗಿ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳ ಆಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಸರಿಯಲ್ಲ. ವಿರೋಧಪಕ್ಷಗಳನ್ನು ಹೆದರಿಸಿ ಚುನಾವಣೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ. ಸುಪ್ರೀಂ ಕೋರ್ಟ್ ನೀಡಿರುವ ಈ ಎಚ್ಚರಿಕೆಯು, ರಾಜಕೀಯ ಪ್ರೇರಿತವಾಗಿ ವರ್ತಿಸುವ ತನಿಖಾ ಸಂಸ್ಥೆಗಳಿಗೆ ಅಗತ್ಯ ಪಾಠವಾಗಿದೆ’ ಎಂದಿದ್ದಾರೆ.</p>.<p>‘ಪ್ರಜಾಪ್ರಭುತ್ವದ ಸೌಂದರ್ಯವಾದ ಜನಾಭಿಪ್ರಾಯವನ್ನು ಭ್ರಷ್ಟಗೊಳಿಸುವ ಬಿಜೆಪಿಯವರ ಹೀನಾಯ ಪ್ರಯತ್ನಗಳು ಇಲ್ಲಿಗೇ ಕೊನೆಯಾಗಬೇಕು. ಇಲ್ಲವಾದರೆ ಮುಂದೆ ಜನರೇ ತಕ್ಕ ಪಾಠ ಕಲಿಸುವ ದಿನಗಳು ದೂರವಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಜಾರಿ ನಿರ್ದೇಶನಾಲಯವು (ಇ.ಡಿ) ರಾಜಕೀಯ ಮಾಡಿದೆ ಎಂಬುದು ಸುಪ್ರೀಂ ಕೋರ್ಟ್ ತೀರ್ಪಿನಿಂದ ಸಾಬೀತಾಗಿದೆ’ ಎಂದು ಚಾಮರಾಜನಗರ ಸಂಸದ ಸುನೀಲ್ ಬೋಸ್ ಹೇಳಿದ್ದಾರೆ.</p>.<p>ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಇ.ಡಿಯು ರಾಜಕೀಯ ಮಾಡುತ್ತಿದ್ದು, ಇದು ಸರಿಯಲ್ಲ ಎಂಬುದಾಗಿ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆ ತನಿಖಾ ಸಂಸ್ಥೆ ಏಕೆ ರಾಜಕೀಯ ದಾಳ ಆಗುತ್ತಿದೆ ಎಂದು ನೇರವಾಗಿ ಪ್ರಶ್ನೆ ಮಾಡಿದೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರವು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಸರಿಯಲ್ಲ. ವಿರೋಧಪಕ್ಷಗಳನ್ನು ಹೆದರಿಸಿ ಚುನಾವಣೆ ಮಾಡುತ್ತಿರುವುದು ನಿಜಕ್ಕೂ ಖಂಡನೀಯ. ಸುಪ್ರೀಂ ಕೋರ್ಟ್ ನೀಡಿರುವ ಈ ಎಚ್ಚರಿಕೆಯು, ರಾಜಕೀಯ ಪ್ರೇರಿತವಾಗಿ ವರ್ತಿಸುವ ತನಿಖಾ ಸಂಸ್ಥೆಗಳಿಗೆ ಅಗತ್ಯ ಪಾಠವಾಗಿದೆ’ ಎಂದಿದ್ದಾರೆ.</p>.<p>‘ಪ್ರಜಾಪ್ರಭುತ್ವದ ಸೌಂದರ್ಯವಾದ ಜನಾಭಿಪ್ರಾಯವನ್ನು ಭ್ರಷ್ಟಗೊಳಿಸುವ ಬಿಜೆಪಿಯವರ ಹೀನಾಯ ಪ್ರಯತ್ನಗಳು ಇಲ್ಲಿಗೇ ಕೊನೆಯಾಗಬೇಕು. ಇಲ್ಲವಾದರೆ ಮುಂದೆ ಜನರೇ ತಕ್ಕ ಪಾಠ ಕಲಿಸುವ ದಿನಗಳು ದೂರವಿಲ್ಲ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>