ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಿಕ್ಷಾಟನೆ: 3 ತಾಯಂದಿರು, 4 ಮಕ್ಕಳ ರಕ್ಷಣೆ

Published 14 ಡಿಸೆಂಬರ್ 2023, 13:16 IST
Last Updated 14 ಡಿಸೆಂಬರ್ 2023, 13:16 IST
ಅಕ್ಷರ ಗಾತ್ರ

ಮೈಸೂರು: ನಗರ ವ್ಯಾಪ್ತಿಯ ಟ್ರಾಫಿಕ್ ಸಿಗ್ನಲ್, ಪ್ರಮುಖ ವೃತ್ತ ಮತ್ತು ಮುಖ್ಯ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದ ಮೂವರು ತಾಯಂದಿರು ಮತ್ತು ನಾಲ್ವರು ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಾಜ ಕಲ್ಯಾಣ ಇಲಾಖೆ, ಚೈಲ್ಡ್ ಲೈನ್, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಯೋಗದಲ್ಲಿ ರಕ್ಷಿಸಲಾಯಿತು.

ಕೆ.ಆರ್.ವೃತ್ತ, ನಗರ ಬಸ್ ನಿಲ್ದಾಣ, ದೇವರಾಜ ಅರಸು ರಸ್ತೆ, ಪ್ರಭಾ ಟಾಕೀಸ್, ಗಾಂಧಿವೃತ್ತ, ರಾಮಸ್ವಾಮಿ ಸರ್ಕಲ್, ದಾಸಪ್ಪ ಸರ್ಕಲ್, ಆರ್ಯುವೇದಿಕ್ ಸರ್ಕಲ್, ಗ್ರಾಮಾಂತರ ಬಸ್ ನಿಲ್ದಾಣ, ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ, ಎಲೆತೋಟ, ನಂಜನಗೂಡು ವರ್ತುಲ ರಸ್ತೆ, ಮಣಿಪಾಲ್ ಆಸ್ಪತ್ರೆ, ಕೆ.ಆರ್.ಎಸ್ ವರ್ತುಲ ರಸ್ತೆ, ರೈಲ್ವೆ ನಿಲ್ದಾಣ ಮುಂಭಾಗ ಕಾರ್ಯಾಚರಣೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT