<p><strong>ಮೈಸೂರು: </strong>ಚಿತ್ರನಗರಿಯನ್ನು ಮೈಸೂರಿನಲ್ಲೇ ಸ್ಥಾಪಿಸಬೇಕು ಎಂದು ಒತ್ತಾಯಿಸಿ ವಿಷ್ಣುವರ್ಧನ್ ಅಭಿಮಾನಿಗಳ ಬಳಗ ಹಾಗೂ ಪಾತಿ ಫೌಂಡೇಷನ್ ವತಿಯಿಂದ ನಗರದಲ್ಲಿ ಗುರುವಾರ ಪತ್ರ ಚಳವಳಿ ನಡೆಯಿತು.</p>.<p>ಜಗನ್ಮೋಹನ ಅರಮನೆಯ ಮುಂಭಾಗ ಇರುವ ಅಂಚೆ ಪೆಟ್ಟಿಗೆ ಮುಂದೆ ಸೇರಿದ ಕಾರ್ಯಕರ್ತರು, ಚಿತ್ರನಗರಿ ಮೈಸೂರಿನಲ್ಲಿ ನಿರ್ಮಾಣ ಆಗಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪಾತಿ ಫೌಂಡೇಷನ್ನ ಎಂ.ಡಿ.ಪಾರ್ಥಸಾರಥಿ, ‘ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನಲ್ಲೇ ಚಿತ್ರನಗರಿ ಸ್ಥಾಪಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗಿನ ಸರ್ಕಾರ ಅದನ್ನು ಬೇರೆಡೆಗೆ ಸ್ಥಳಾಂತರಿಸುತ್ತಿರುವುದು ಸರಿಯಲ್ಲ’ ಎಂದು ಕಿಡಿಕಾರಿದರು.</p>.<p>ಮೈಸೂರಿನ ಆಸುಪಾಸಿನಲ್ಲಿ 250ಕ್ಕೂ ಹೆಚ್ಚು ಪ್ರವಾಸಿ ಸ್ಥಳಗಳಿವೆ. ಇಲ್ಲಿಯೇ ಚಿತ್ರನಗರಿ ಸ್ಥಾಪನೆಯಾದರೆ ಚಲನಚಿತ್ರ ರಂಗಕ್ಕೆ ಅನುಕೂಲವಾಗುತ್ತದೆ. ಜತೆಗೆ, ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್, ಅಶ್ವತ್ಥ್, ದರ್ಶನ್, ಯಶ್ ಸೇರಿದಂತೆ ಅನೇಕ ಕಲಾವಿದರು ಮೈಸೂರಿನವರೇ ಆಗಿದ್ದಾರೆ. ಇದರಿಂದ ಅವರಿಗೂ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.</p>.<p>ಚಿತ್ರನಗರಿ ಇಲ್ಲಿಯೇ ಸ್ಥಾಪನೆಯಾಗುವುದರಿಂದ ಸ್ಥಳೀಯರಿಗೆ ಉದ್ಯೋಗವಕಾಶಗಳು ದೊರೆಯುತ್ತವೆ. ಪ್ರವಾಸೋದ್ಯಮ ಗರಿಗೆದರುತ್ತದೆ. ವ್ಯಾಪಾರ ವಹಿವಾಟು ಹೆಚ್ಚುತ್ತದೆ. ಜಿಲ್ಲೆಯ ಆರ್ಥಿಕ ಪ್ರಗತಿಯಾಗುತ್ತದೆ ಎಂದು ತಿಳಿಸಿದರು.</p>.<p>ಮೈಸೂರು ಜಿಲ್ಲಾ ಅಧಿಕೃತ ಪತ್ರಿಕಾ ಪ್ರತಿನಿಧಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎ.ರವಿ, ಮುಖಂಡರಾದ ವಿಕ್ರಂ ಅಯ್ಯಂಗಾರ್, ಜೆ.ರಘುಕಿರಣ್, ಕಡಕೊಳ ಜಗದೀಶ್, ಚಕ್ರಪಾಣಿ, ಸುಚೀಂದ್ರ, ಗಣೇಶ್ ಪ್ರಸಾದ್, ಮಂಜುನಾಥ್, ಧರ್ಮೇಂದ್ರ, ಮಹದೇವು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಚಿತ್ರನಗರಿಯನ್ನು ಮೈಸೂರಿನಲ್ಲೇ ಸ್ಥಾಪಿಸಬೇಕು ಎಂದು ಒತ್ತಾಯಿಸಿ ವಿಷ್ಣುವರ್ಧನ್ ಅಭಿಮಾನಿಗಳ ಬಳಗ ಹಾಗೂ ಪಾತಿ ಫೌಂಡೇಷನ್ ವತಿಯಿಂದ ನಗರದಲ್ಲಿ ಗುರುವಾರ ಪತ್ರ ಚಳವಳಿ ನಡೆಯಿತು.</p>.<p>ಜಗನ್ಮೋಹನ ಅರಮನೆಯ ಮುಂಭಾಗ ಇರುವ ಅಂಚೆ ಪೆಟ್ಟಿಗೆ ಮುಂದೆ ಸೇರಿದ ಕಾರ್ಯಕರ್ತರು, ಚಿತ್ರನಗರಿ ಮೈಸೂರಿನಲ್ಲಿ ನಿರ್ಮಾಣ ಆಗಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪಾತಿ ಫೌಂಡೇಷನ್ನ ಎಂ.ಡಿ.ಪಾರ್ಥಸಾರಥಿ, ‘ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನಲ್ಲೇ ಚಿತ್ರನಗರಿ ಸ್ಥಾಪಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಈಗಿನ ಸರ್ಕಾರ ಅದನ್ನು ಬೇರೆಡೆಗೆ ಸ್ಥಳಾಂತರಿಸುತ್ತಿರುವುದು ಸರಿಯಲ್ಲ’ ಎಂದು ಕಿಡಿಕಾರಿದರು.</p>.<p>ಮೈಸೂರಿನ ಆಸುಪಾಸಿನಲ್ಲಿ 250ಕ್ಕೂ ಹೆಚ್ಚು ಪ್ರವಾಸಿ ಸ್ಥಳಗಳಿವೆ. ಇಲ್ಲಿಯೇ ಚಿತ್ರನಗರಿ ಸ್ಥಾಪನೆಯಾದರೆ ಚಲನಚಿತ್ರ ರಂಗಕ್ಕೆ ಅನುಕೂಲವಾಗುತ್ತದೆ. ಜತೆಗೆ, ಪುಟ್ಟಣ್ಣ ಕಣಗಾಲ್, ವಿಷ್ಣುವರ್ಧನ್, ಅಶ್ವತ್ಥ್, ದರ್ಶನ್, ಯಶ್ ಸೇರಿದಂತೆ ಅನೇಕ ಕಲಾವಿದರು ಮೈಸೂರಿನವರೇ ಆಗಿದ್ದಾರೆ. ಇದರಿಂದ ಅವರಿಗೂ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.</p>.<p>ಚಿತ್ರನಗರಿ ಇಲ್ಲಿಯೇ ಸ್ಥಾಪನೆಯಾಗುವುದರಿಂದ ಸ್ಥಳೀಯರಿಗೆ ಉದ್ಯೋಗವಕಾಶಗಳು ದೊರೆಯುತ್ತವೆ. ಪ್ರವಾಸೋದ್ಯಮ ಗರಿಗೆದರುತ್ತದೆ. ವ್ಯಾಪಾರ ವಹಿವಾಟು ಹೆಚ್ಚುತ್ತದೆ. ಜಿಲ್ಲೆಯ ಆರ್ಥಿಕ ಪ್ರಗತಿಯಾಗುತ್ತದೆ ಎಂದು ತಿಳಿಸಿದರು.</p>.<p>ಮೈಸೂರು ಜಿಲ್ಲಾ ಅಧಿಕೃತ ಪತ್ರಿಕಾ ಪ್ರತಿನಿಧಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಎ.ರವಿ, ಮುಖಂಡರಾದ ವಿಕ್ರಂ ಅಯ್ಯಂಗಾರ್, ಜೆ.ರಘುಕಿರಣ್, ಕಡಕೊಳ ಜಗದೀಶ್, ಚಕ್ರಪಾಣಿ, ಸುಚೀಂದ್ರ, ಗಣೇಶ್ ಪ್ರಸಾದ್, ಮಂಜುನಾಥ್, ಧರ್ಮೇಂದ್ರ, ಮಹದೇವು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>