<p><strong>ಮೈಸೂರು:</strong> ಬೆಳವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಬಾರದು ಎಂದು ಒತ್ತಾಯಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟಿಸಿದರು.</p>.<p>ದಿವಾಕರ್ ಮಾತನಾಡಿ, ‘ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40,000ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿದೆ ಎಂದು ದೂರಿದರು.</p>.<p>ಮೈಸೂರಿನಲ್ಲಿಯೂ 1, 666 ಸರ್ಕಾರಿ ಶಾಲೆಗಳು ಈ ಯೋಜನೆಯ ಅಡಿ ಮುಚ್ಚಿ ಹೋಗುತ್ತವೆ. ಇಲ್ಲಿ 200ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಿಕ್ಷಣ ಪಡೆಯುತ್ತಿರುವವರೆಲ್ಲರೂ ಸುತ್ತಲಿನ ಗಾರ್ಮೆಂಟ್ಸ್ ಕಾರ್ಮಿಕರ ಮತ್ತು ಬಡ ಕೂಲಿ ಕಾರ್ಮಿಕರ ಮಕ್ಕಳು. ಈ ಶಾಲೆ ವಿಲೀನಗೊಂಡರೆ ವಿದ್ಯಾರ್ಥಿಗಳು 3 ಕಿ.ಮೀ ತೆರಳಬೇಕಾದ ತೊಂದರೆಗೆ ಸಿಲುಕಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ರಾಜ್ಯ ಉಪಾಧ್ಯಕ್ಷ ಅಭಯ ದಿವಾಕರ್, ಜಿಲ್ಲಾ ಪದಾಧಿಕಾರಿಗಳಾದ ಚಂದನಾ, ಚಂದ್ರಿಕಾ, ಹೇಮಲತಾ, ಅಂಜಲಿ, ಅಭಿಷೇಕ್, ಗ್ರಾಮಸ್ಥರಾದ ಶಾಂತಿ, ಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬೆಳವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಚ್ಚಬಾರದು ಎಂದು ಒತ್ತಾಯಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟಿಸಿದರು.</p>.<p>ದಿವಾಕರ್ ಮಾತನಾಡಿ, ‘ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆ ಮಾಡುತ್ತೇವೆ ಎಂದು ಹೇಳಿ 40,000ಕ್ಕಿಂತ ಹೆಚ್ಚು ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿದೆ ಎಂದು ದೂರಿದರು.</p>.<p>ಮೈಸೂರಿನಲ್ಲಿಯೂ 1, 666 ಸರ್ಕಾರಿ ಶಾಲೆಗಳು ಈ ಯೋಜನೆಯ ಅಡಿ ಮುಚ್ಚಿ ಹೋಗುತ್ತವೆ. ಇಲ್ಲಿ 200ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಿಕ್ಷಣ ಪಡೆಯುತ್ತಿರುವವರೆಲ್ಲರೂ ಸುತ್ತಲಿನ ಗಾರ್ಮೆಂಟ್ಸ್ ಕಾರ್ಮಿಕರ ಮತ್ತು ಬಡ ಕೂಲಿ ಕಾರ್ಮಿಕರ ಮಕ್ಕಳು. ಈ ಶಾಲೆ ವಿಲೀನಗೊಂಡರೆ ವಿದ್ಯಾರ್ಥಿಗಳು 3 ಕಿ.ಮೀ ತೆರಳಬೇಕಾದ ತೊಂದರೆಗೆ ಸಿಲುಕಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದ ಕೊಪ್ಪ, ರಾಜ್ಯ ಉಪಾಧ್ಯಕ್ಷ ಅಭಯ ದಿವಾಕರ್, ಜಿಲ್ಲಾ ಪದಾಧಿಕಾರಿಗಳಾದ ಚಂದನಾ, ಚಂದ್ರಿಕಾ, ಹೇಮಲತಾ, ಅಂಜಲಿ, ಅಭಿಷೇಕ್, ಗ್ರಾಮಸ್ಥರಾದ ಶಾಂತಿ, ಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>