<p><strong>ಮೈಸೂರು:</strong> ಎಚ್.ಡಿ.ಕೋಟೆ ತಾಲ್ಲೂಕು ಹೊಮ್ಮರಗಳ್ಳಿಯಲ್ಲಿ 16 ವರ್ಷದಿಂದ ಅನಧಿಕೃತವಾಗಿ ಬಾರ್ ಆ್ಯಂಡ್ ರೆಸ್ಟೊರೆಂಟ್ ನಡೆಯುತ್ತಿದ್ದು, ಕೂಡಲೇ ತೆರವುಗೊಳಿಸಿ ಕಾನೂನುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪ್ರಗತಿಪರ ಸಮಾಜ ವೇದಿಕೆ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ‘ಗ್ರಾಮಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮವಹಿಸಿಲ್ಲ. ಮದ್ಯದಂಗಡಿಯ ನಿವೇಶನ ಕೆ.ಪುಟ್ಟಸ್ವಾಮಿ ಎಂಬುವರ ಹೆಸರಿನಲ್ಲಿದ್ದು, ಬೇರೆ ವ್ಯಕ್ತಿಗಳು ನಕಲಿ ದಾಖಲೆ ಸೃಷ್ಟಿಸಿ ಪರವಾನಗಿ ಪಡೆದಿದ್ದಾರೆ’ ಎಂದರು.</p>.<p>‘2022ರ ಅ.29ರಂದು ಜಿ.ಪಂ ಸಿಇಒ ಅವರಿಗೆ ಅರ್ಜಿ ಸಲ್ಲಿಸಲಾಗಿತ್ತು. ಉಪಕಾರ್ಯದರ್ಶಿ ಪರಿಶೀಲಿಸಿ ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಬಾರ್ ಅನಧಿಕೃತವೆಂದು ವರದಿ ನೀಡಿದ್ದಾರೆ. ಹೀಗಿದ್ದರೂ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಕೂಡಲೇ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.</p>.<p>ವಿವಿಧ ಸಂಘಟನೆಗಳ ಮುಖಂಡರಾದ ಜಿ.ಎಂ.ಅಂದಾನಿ, ದ್ಯಾವಪ್ಪ ನಾಯಕ, ನಾಗೇಶ್, ಯೋಗೇಶ್ ಉಪ್ಪಾರ್, ರವಿನಂದನ್, ಪ್ರಕಾಶ್, ಲೋಕೇಶ್ಕುಮಾರ್, ಸತ್ಯನಾರಾಯಣ ಇದ್ದರು.</p>.<p><strong>ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಆರೋಪ</strong></p>.<p>ನಕಲಿ ದಾಖಲಾತಿ ಸೃಷ್ಟಿಸಿ ಸಾಲ ಪಡೆದಿರುವವರ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮವಹಿಸುತ್ತಿಲ್ಲ ಎಂದು ಆರೋಪಿಸಿ ಬೀರಮ್ಮ ಹಾಗೂ ಕುಟುಂಬದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಮೀಪ ಪ್ರತಿಭಟನೆ ನಡೆಸಿದರು.</p>.<p>‘ಟಿ.ಕೆ.ಬಡಾವಣೆಯಲ್ಲಿ 110x40 ಅಡಿ ವಿಸ್ತೀರ್ಣದ ನಿವೇಶನವಿದ್ದು, ತಂದೆಗೆ ಸೇರಿದ ಆಸ್ತಿಯಾಗಿದೆ. ಕುರುಬರಹಳ್ಳಿಯ ತಮ್ಮಣ್ಣ ಸೇರಿದಂತೆ ಐವರು ನಕಲಿ ದಾಖಲೆ ಸೃಷ್ಟಿಸಿ ಸಹಕಾರ ಬ್ಯಾಂಕ್ನಿಂದ ₹ 40 ಲಕ್ಷ ಸಾಲ ಪಡೆದಿದ್ದಾರೆ. ವಂಚನೆಯಲ್ಲಿ ಬ್ಯಾಂಕ್ ಅಧಿಕಾರಿಗಳೂ ಇದ್ದಾರೆ’ ಎಂದು ಕುರುಬರಹಳ್ಳಿ ನಿವಾಸಿ ಬೀರಮ್ಮ ಆರೋಪಿಸಿದರು.</p>.<p>‘ಎರಡು ದೂರು ಸಲ್ಲಿಸಿದ್ದರೂ ಪೊಲೀಸರು ಯಾವುದೇ ಕ್ರಮವಹಿಸಿಲ್ಲ. ಆಸ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣವೂ ಇಲ್ಲ. ಸುಳ್ಳು ಹೇಳಿಕೆ ಆಧರಿಸಿ ತೊಂದರೆ ನೀಡುತ್ತಿದ್ದಾರೆ‘ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಎಚ್.ಡಿ.ಕೋಟೆ ತಾಲ್ಲೂಕು ಹೊಮ್ಮರಗಳ್ಳಿಯಲ್ಲಿ 16 ವರ್ಷದಿಂದ ಅನಧಿಕೃತವಾಗಿ ಬಾರ್ ಆ್ಯಂಡ್ ರೆಸ್ಟೊರೆಂಟ್ ನಡೆಯುತ್ತಿದ್ದು, ಕೂಡಲೇ ತೆರವುಗೊಳಿಸಿ ಕಾನೂನುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪ್ರಗತಿಪರ ಸಮಾಜ ವೇದಿಕೆ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಹಾಗೂ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್ ಮಾತನಾಡಿ, ‘ಗ್ರಾಮಪಂಚಾಯಿತಿ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮವಹಿಸಿಲ್ಲ. ಮದ್ಯದಂಗಡಿಯ ನಿವೇಶನ ಕೆ.ಪುಟ್ಟಸ್ವಾಮಿ ಎಂಬುವರ ಹೆಸರಿನಲ್ಲಿದ್ದು, ಬೇರೆ ವ್ಯಕ್ತಿಗಳು ನಕಲಿ ದಾಖಲೆ ಸೃಷ್ಟಿಸಿ ಪರವಾನಗಿ ಪಡೆದಿದ್ದಾರೆ’ ಎಂದರು.</p>.<p>‘2022ರ ಅ.29ರಂದು ಜಿ.ಪಂ ಸಿಇಒ ಅವರಿಗೆ ಅರ್ಜಿ ಸಲ್ಲಿಸಲಾಗಿತ್ತು. ಉಪಕಾರ್ಯದರ್ಶಿ ಪರಿಶೀಲಿಸಿ ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದು, ಬಾರ್ ಅನಧಿಕೃತವೆಂದು ವರದಿ ನೀಡಿದ್ದಾರೆ. ಹೀಗಿದ್ದರೂ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಕೂಡಲೇ ಕ್ರಮವಹಿಸಬೇಕು’ ಎಂದು ಆಗ್ರಹಿಸಿದರು.</p>.<p>ವಿವಿಧ ಸಂಘಟನೆಗಳ ಮುಖಂಡರಾದ ಜಿ.ಎಂ.ಅಂದಾನಿ, ದ್ಯಾವಪ್ಪ ನಾಯಕ, ನಾಗೇಶ್, ಯೋಗೇಶ್ ಉಪ್ಪಾರ್, ರವಿನಂದನ್, ಪ್ರಕಾಶ್, ಲೋಕೇಶ್ಕುಮಾರ್, ಸತ್ಯನಾರಾಯಣ ಇದ್ದರು.</p>.<p><strong>ನಕಲಿ ದಾಖಲೆ ಸೃಷ್ಟಿಸಿ ವಂಚನೆ: ಆರೋಪ</strong></p>.<p>ನಕಲಿ ದಾಖಲಾತಿ ಸೃಷ್ಟಿಸಿ ಸಾಲ ಪಡೆದಿರುವವರ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮವಹಿಸುತ್ತಿಲ್ಲ ಎಂದು ಆರೋಪಿಸಿ ಬೀರಮ್ಮ ಹಾಗೂ ಕುಟುಂಬದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಮೀಪ ಪ್ರತಿಭಟನೆ ನಡೆಸಿದರು.</p>.<p>‘ಟಿ.ಕೆ.ಬಡಾವಣೆಯಲ್ಲಿ 110x40 ಅಡಿ ವಿಸ್ತೀರ್ಣದ ನಿವೇಶನವಿದ್ದು, ತಂದೆಗೆ ಸೇರಿದ ಆಸ್ತಿಯಾಗಿದೆ. ಕುರುಬರಹಳ್ಳಿಯ ತಮ್ಮಣ್ಣ ಸೇರಿದಂತೆ ಐವರು ನಕಲಿ ದಾಖಲೆ ಸೃಷ್ಟಿಸಿ ಸಹಕಾರ ಬ್ಯಾಂಕ್ನಿಂದ ₹ 40 ಲಕ್ಷ ಸಾಲ ಪಡೆದಿದ್ದಾರೆ. ವಂಚನೆಯಲ್ಲಿ ಬ್ಯಾಂಕ್ ಅಧಿಕಾರಿಗಳೂ ಇದ್ದಾರೆ’ ಎಂದು ಕುರುಬರಹಳ್ಳಿ ನಿವಾಸಿ ಬೀರಮ್ಮ ಆರೋಪಿಸಿದರು.</p>.<p>‘ಎರಡು ದೂರು ಸಲ್ಲಿಸಿದ್ದರೂ ಪೊಲೀಸರು ಯಾವುದೇ ಕ್ರಮವಹಿಸಿಲ್ಲ. ಆಸ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವುದೇ ಪ್ರಕರಣವೂ ಇಲ್ಲ. ಸುಳ್ಳು ಹೇಳಿಕೆ ಆಧರಿಸಿ ತೊಂದರೆ ನೀಡುತ್ತಿದ್ದಾರೆ‘ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>