<p><strong>ಮೈಸೂರು</strong>: ಬಾಕಿ ಉಳಿದಿರುವ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಕೆ.ಆರ್.ಆಸ್ಪತ್ರೆಯ ಸ್ಥಾನಿಕ ವೈದ್ಯರು, ಕಿರಿಯ ವೈದ್ಯರು, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು, ಇಂಟರ್ನಿಗಳು ಶುಕ್ರವಾರ ಬೃಹತ್ ಪ್ರತಿಭಟನ ಜಾಥಾ ನಡೆಸಿದರು.</p>.<p>ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಗುರುವಾರದರಿಂದ ಪ್ರತಿಭಟನೆಗಳು ಆರಂಭವಾಗಿದ್ದು, ಇದರ ಪ್ರಯುಕ್ತ ವೈದ್ಯರು ಜಾಥಾ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಕೆ.ಆರ್.ಆಸ್ಪತ್ರೆಯಿಂದ ಇರ್ವಿನ್ ರಸ್ತೆ, ಜೆಎಲ್ಬಿ ರಸ್ತೆ, ವಿನೋಬಾ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿದ ಸುಮಾರು 200 ಮಂದಿ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>‘ಕೋವಿಡ್ ಕಾಲದಲ್ಲೂ ಅವಿರತ ಸೇವೆ ಸಲ್ಲಿಸಿದ್ದೇವೆ. ಆದರೆ, ಕಳೆದೆರಡು ತಿಂಗಳುಗಳಿಂದ ಸಂಬಳ ಪಾವತಿಸಿಲ್ಲ, ಭತ್ಯೆ ನೀಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೋವಿಡ್ ವೇಳೆ ಕರ್ತವ್ಯ ನಿರ್ವಹಿಸಿದ ಕಿರಿಯ ವೈದ್ಯರಿಗೆ ಕೋವಿಡ್ ಕರ್ತವ್ಯ ನಿರ್ವಹಣೆ ಭತ್ಯೆಯನ್ನು ಸರ್ಕಾರ ಘೋಷಿಸಿದಂತೆ ಭತ್ಯೆ ನೀಡಬೇಕು. ಬಾಕಿ ಉಳಿಸಿಕೊಂಡಿರುವ ಶಿಷ್ಯವೇತನವನ್ನೂ ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು.</p>.<p>ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ವಿಜಯಕುಮಾರ್, ಉಪಾಧ್ಯಕ್ಷರಾದ ಡಾ.ಕೆ.ಕೆ.ಅಬ್ದುಲ್ಲಾ, ಡಾ.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಡಾ.ವಿಶಾಲ್ ಹುಬ್ಬಳ್ಳಿ, ಡಾ.ಸಂದೀಪ್ ಗಂಗಾ, ಡಾ.ಎ.ಪೂರ್ಣಿಮಾ, ಡಾ.ಶಿವಾನಂದ, ಡಾ.ಕಿಶೋರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಬಾಕಿ ಉಳಿದಿರುವ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಕೆ.ಆರ್.ಆಸ್ಪತ್ರೆಯ ಸ್ಥಾನಿಕ ವೈದ್ಯರು, ಕಿರಿಯ ವೈದ್ಯರು, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು, ಇಂಟರ್ನಿಗಳು ಶುಕ್ರವಾರ ಬೃಹತ್ ಪ್ರತಿಭಟನ ಜಾಥಾ ನಡೆಸಿದರು.</p>.<p>ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಗುರುವಾರದರಿಂದ ಪ್ರತಿಭಟನೆಗಳು ಆರಂಭವಾಗಿದ್ದು, ಇದರ ಪ್ರಯುಕ್ತ ವೈದ್ಯರು ಜಾಥಾ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.</p>.<p>ಕೆ.ಆರ್.ಆಸ್ಪತ್ರೆಯಿಂದ ಇರ್ವಿನ್ ರಸ್ತೆ, ಜೆಎಲ್ಬಿ ರಸ್ತೆ, ವಿನೋಬಾ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿದ ಸುಮಾರು 200 ಮಂದಿ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p>.<p>‘ಕೋವಿಡ್ ಕಾಲದಲ್ಲೂ ಅವಿರತ ಸೇವೆ ಸಲ್ಲಿಸಿದ್ದೇವೆ. ಆದರೆ, ಕಳೆದೆರಡು ತಿಂಗಳುಗಳಿಂದ ಸಂಬಳ ಪಾವತಿಸಿಲ್ಲ, ಭತ್ಯೆ ನೀಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೋವಿಡ್ ವೇಳೆ ಕರ್ತವ್ಯ ನಿರ್ವಹಿಸಿದ ಕಿರಿಯ ವೈದ್ಯರಿಗೆ ಕೋವಿಡ್ ಕರ್ತವ್ಯ ನಿರ್ವಹಣೆ ಭತ್ಯೆಯನ್ನು ಸರ್ಕಾರ ಘೋಷಿಸಿದಂತೆ ಭತ್ಯೆ ನೀಡಬೇಕು. ಬಾಕಿ ಉಳಿಸಿಕೊಂಡಿರುವ ಶಿಷ್ಯವೇತನವನ್ನೂ ಕೂಡಲೇ ಪಾವತಿಸಬೇಕು ಎಂದು ಒತ್ತಾಯಿಸಿದರು.</p>.<p>ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ ಅಧ್ಯಕ್ಷ ಡಾ.ವಿಜಯಕುಮಾರ್, ಉಪಾಧ್ಯಕ್ಷರಾದ ಡಾ.ಕೆ.ಕೆ.ಅಬ್ದುಲ್ಲಾ, ಡಾ.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಡಾ.ವಿಶಾಲ್ ಹುಬ್ಬಳ್ಳಿ, ಡಾ.ಸಂದೀಪ್ ಗಂಗಾ, ಡಾ.ಎ.ಪೂರ್ಣಿಮಾ, ಡಾ.ಶಿವಾನಂದ, ಡಾ.ಕಿಶೋರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>