<p><strong>ಮೈಸೂರು: </strong>ಕಟ್ಟಡ ಕಾರ್ಮಿಕರು ಹಾಗೂ ಬಿಸಿಯೂಟ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಗುರುವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನೇತೃತ್ವದಲ್ಲಿ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಕಾರ್ಮಿಕ ಇಲಾಖೆ ಮುಂದೆ ಗುರುವಾರ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗಿದರು.</p>.<p>ಅರ್ಜಿ ಸಲ್ಲಿಸಿದ ಎಲ್ಲರಿಗೂ ₹3 ಸಾವಿರ ಕೋವಿಡ್ ಪರಿಹಾರ ನೀಡಬೇಕು, ವೈದ್ಯಕೀಯ ಸಹಾಯಧನ, ಸಹಜ ಮರಣ ಪರಿಹಾರ ಭತ್ಯೆಯನ್ನು ಹೆಚ್ಚಿಸಬೇಕು, ಅಪಘಾತ ಮರಣ ಪರಿಹಾರ ಭತ್ಯೆಯನ್ನು ₹ 10 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆ ಅಧ್ಯಕ್ಷ ವಿ.ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಎಚ್.ಎಂ.ಬಸವಯ್ಯ, ಪದಾಧಿಕಾರಿಗಳಾದ ನಾಗೇಶ್, ಮಂಜುನಾಥ್, ಕುಮಾರ್ ಇದ್ದರು.</p>.<p><strong>ಬಿಸಿಯೂಟ ತಯಾರಿಕರ ಪ್ರತಿಭಟನೆ</strong></p>.<p>ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಮುಖ್ಯ ಬಿಸಿಯೂಟ ತಯಾರಕರಿಗೆ ₹ 2,700 ಹಾಗೂ ಅಡುಗೆ ಸಹಾಯಕರಿಗೆ ₹ 2,600 ಮಾತ್ರವೇ ಲಭ್ಯವಾಗುತ್ತಿದೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಇಷ್ಟು ಹಣದಲ್ಲಿ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹಾಗಾಗಿ, ವೇತನ ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಕೇಂದ್ರ ಸರ್ಕಾರ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಬಿಸಿಯೂಟ ಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಕನಿಷ್ಠ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿದರು.</p>.<p>ಎಐಟಿಯುಸಿಯ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಮುಖಂಡರಾದ ಪದ್ಮಮ್ಮ, ಸಾವಿತ್ರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕಟ್ಟಡ ಕಾರ್ಮಿಕರು ಹಾಗೂ ಬಿಸಿಯೂಟ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಗುರುವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನೇತೃತ್ವದಲ್ಲಿ ಕಾರ್ಯಕರ್ತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಕಾರ್ಮಿಕ ಇಲಾಖೆ ಮುಂದೆ ಗುರುವಾರ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗಿದರು.</p>.<p>ಅರ್ಜಿ ಸಲ್ಲಿಸಿದ ಎಲ್ಲರಿಗೂ ₹3 ಸಾವಿರ ಕೋವಿಡ್ ಪರಿಹಾರ ನೀಡಬೇಕು, ವೈದ್ಯಕೀಯ ಸಹಾಯಧನ, ಸಹಜ ಮರಣ ಪರಿಹಾರ ಭತ್ಯೆಯನ್ನು ಹೆಚ್ಚಿಸಬೇಕು, ಅಪಘಾತ ಮರಣ ಪರಿಹಾರ ಭತ್ಯೆಯನ್ನು ₹ 10 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘಟನೆ ಅಧ್ಯಕ್ಷ ವಿ.ಸೋಮಶೇಖರ್, ಪ್ರಧಾನ ಕಾರ್ಯದರ್ಶಿ ಎಚ್.ಎಂ.ಬಸವಯ್ಯ, ಪದಾಧಿಕಾರಿಗಳಾದ ನಾಗೇಶ್, ಮಂಜುನಾಥ್, ಕುಮಾರ್ ಇದ್ದರು.</p>.<p><strong>ಬಿಸಿಯೂಟ ತಯಾರಿಕರ ಪ್ರತಿಭಟನೆ</strong></p>.<p>ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ನೇತೃತ್ವದಲ್ಲಿ ಕಾರ್ಮಿಕರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಮುಖ್ಯ ಬಿಸಿಯೂಟ ತಯಾರಕರಿಗೆ ₹ 2,700 ಹಾಗೂ ಅಡುಗೆ ಸಹಾಯಕರಿಗೆ ₹ 2,600 ಮಾತ್ರವೇ ಲಭ್ಯವಾಗುತ್ತಿದೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಇಷ್ಟು ಹಣದಲ್ಲಿ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹಾಗಾಗಿ, ವೇತನ ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.</p>.<p>ಕೇಂದ್ರ ಸರ್ಕಾರ ಮಂಡಿಸಿರುವ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಬಿಸಿಯೂಟ ಕಾರ್ಮಿಕರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಕೂಡಲೇ ಕನಿಷ್ಠ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿದರು.</p>.<p>ಎಐಟಿಯುಸಿಯ ಕಾರ್ಯದರ್ಶಿ ಕೆ.ಜಿ.ಸೋಮರಾಜೇ ಅರಸ್, ಮುಖಂಡರಾದ ಪದ್ಮಮ್ಮ, ಸಾವಿತ್ರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>