ಮೈಸೂರು: ಕಬ್ಬು ದರ ನಿಗದಿಗೆ ಒತ್ತಾಯಿಸಿ ಹಾಗೂ ವಿದ್ಯುತ್ ಖಾಸಗಿಕರಣ ವಿರೋಧಿಸಿ ಮಂಗಳವಾರ ಇಲ್ಲಿನ ಮೈಸೂರು ನಂಜನಗೂಡು ರಸ್ತೆಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಬ್ಬಿನ ಎಫ್ಆರ್ಪಿ ದರವನ್ನು ಮೂರು ವರ್ಷಗಳಿಂದಲೂ ಏರಿಕೆ ಮಾಡಿಲ್ಲ. ಕಬ್ಬು ಉತ್ಪಾದನೆ ವೆಚ್ಚ ಏರಿಕೆಯಾಗಿದೆ ಎಂದು ಕಾರ್ಯಕರ್ತರು ಕಿಡಿಕಾರಿದರು. ತಕ್ಷಣವೇ ಪ್ರಸಕ್ತ ಸಾಲಿನ ಕಬ್ಬಿನ ದರ ಕನಿಷ್ಠ ₹ 3200 ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.