ಮೈಸೂರು: ಇಲ್ಲಿನ ಕೃಷ್ಣಮೂರ್ತಿಪುರಂನ ಶ್ರೀರಾಮಮಂದಿರದ ಸಮೀಪ ಭಾನುವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಅಪಘಾತದಿಂದ ಗಂಗೋತ್ರಿ ಬಡಾವಣೆ ನಿವಾಸಿ ದರ್ಶನ್ ಕುಮಾರ್(30) ಮೃತಪಟ್ಟರು.
ಅಪಘಾತಕ್ಕೆ ರಸ್ತೆಗುಂಡಿಗಳೇ ಕಾರಣ ಎಂದು ಆರೋಪಿಸಿದ ಮೈಸೂರು ಪ್ರಜ್ಞಾವಂತರ ವೇದಿಕೆಯ ಕಾರ್ಯಕರ್ತರು ಸೋಮವಾರ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.