<p><strong>ಮೈಸೂರು</strong>: ಬೌನ್ಸರ್ ಹೊಡೆದ ಏಟಿನಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಹೇಳಿದ್ದಾರೆ. ಈ ಕೂಡಲೇ ಅವರು ಕ್ಷಮೆ ಯಾಚಿಸಬೇಕು ಇಲ್ಲವೇ ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಒತ್ತಾಯಿಸಿದರು. ಇಲ್ಲದಿದ್ದರೆ ರಂಗಾಯಣದ ಆವರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಅಣಕು ಶವಯಾತ್ರೆ ನಡೆಸಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸತ್ತವರನ್ನು ಕುರಿತು ಹೀನಾಯವಾಗಿ ಮಾತನಾಡಿ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವುದು ನಾಚಿಕೆಗೇಡು. ರಾಕೇಶ್ ಅಭಿಮಾನಿಗಳು ಕಾರ್ಯಪ್ಪ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತಾರೆ ಎಂದು ಎಚ್ಚರಿಸಿದರು.</p>.<p>ಸಂಸ್ಕೃತಿ, ಶಿಸ್ತಿಗೆ ಹೆಸರಾಗಿರುವ ಆರ್ ಎಸ್ ಎಸ್ ಕೂಡಲೇ ಕಾರ್ಯಪ್ಪ ಅವರನ್ನು ನಿಯಂತ್ರಿಸಬೇಕು. ಅಸಂಸ್ಕೃತಿಯ ಹೇಳಿಕೆ ನೀಡುವ ಮೂಲಕ ಆರ್ ಎಸ್ ಎಸ್ ಗೆ ಕಾರ್ಯಪ್ಪ ಕಳಂಕ ತಂದಿದ್ದಾರೆ ಎಂದು ಹೇಳಿದರು.</p>.<p>ಕಾರ್ಯಪ್ಪ ಅವರು ಹಿಂದೆ ಜೈಲಿಗೆ ಹೋಗಿದ್ದು ಏಕೆ ಎಂಬುದನ್ನು ಅವರು ಬಹಿರಂಗಪಡಿಸಬೇಕು. ಗಾಜಿನ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಪ್ರವೃತ್ತಿಯನ್ನು ಇನ್ನಾದರೂ ಬಿಡಬೇಕು ಎಂದರು.</p>.<p>ತಾಯಿ ಕುರಿತ ಬಹುರೂಪಿ ರಂಗೋತ್ಸವದಲ್ಲಿಹಿರೇಮಗಳೂರು ಕಣ್ಣನ್ ಮಹಿಳೆಯರನ್ನು ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ. ಅವರು ಅಸಹ್ಯ ತರುವ ಹಾಗೂ ಸಮಾಜವನ್ನು ಕುಲಗೆಡಿಸುವ ಹೇಳಿಕೆ ನೀಡಿದ್ದಾರೆ. ನಿಜಕ್ಕೂ ಇವರು ಸಂಸ್ಕೃತಿ ಚಿಂತಕರೆ? ಎಂದು ಪ್ರಶ್ನಿಸಿದರು.</p>.<p>ಬೌನ್ಸರ್ ಹೊಡೆದ ಏಟಿನಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಹೇಳಿದ್ದಾರೆ. ಈ ಕೂಡಲೇ ಅವರು ಕ್ಷಮೆ ಯಾಚಿಸಬೇಕು ಇಲ್ಲವೇ ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಒತ್ತಾಯಿಸಿದರು.</p>.<p>ಇಲ್ಲದಿದ್ದರೆ ರಂಗಾಯಣದ ಆವರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಅಣಕು ಶವಯಾತ್ರೆ ನಡೆಸಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸತ್ತವರನ್ನು ಕುರಿತು ಹೀನಾಯವಾಗಿ ಮಾತನಾಡಿ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವುದು ನಾಚಿಕೆಗೇಡು. ರಾಕೇಶ್ ಅಭಿಮಾನಿಗಳು ಕಾರ್ಯಪ್ಪ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತಾರೆ ಎಂದು ಎಚ್ಚರಿಸಿದರು.</p>.<p>ಸಂಸ್ಕೃತಿ, ಶಿಸ್ತಿಗೆ ಹೆಸರಾಗಿರುವ ಆರ್ ಎಸ್ ಎಸ್ ಕೂಡಲೇ ಕಾರ್ಯಪ್ಪ ಅವರನ್ನು ನಿಯಂತ್ರಿಸಬೇಕು. ಅಸಂಸ್ಕೃತಿಯ ಹೇಳಿಕೆ ನೀಡುವ ಮೂಲಕ ಆರ್ ಎಸ್ ಎಸ್ ಗೆ ಕಾರ್ಯಪ್ಪ ಕಳಂಕ ತಂದಿದ್ದಾರೆ ಎಂದು ಹೇಳಿದರು.</p>.<p>ಕಾರ್ಯಪ್ಪ ಅವರು ಹಿಂದೆ ಜೈಲಿಗೆ ಹೋಗಿದ್ದು ಏಕೆ ಎಂಬುದನ್ನು ಅವರು ಬಹಿರಂಗಪಡಿಸಬೇಕು. ಗಾಜಿನ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಪ್ರವೃತ್ತಿಯನ್ನು ಇನ್ನಾದರೂ ಬಿಡಬೇಕು ಎಂದರು.</p>.<p>ತಾಯಿ ಕುರಿತ ಬಹುರೂಪಿ ರಂಗೋತ್ಸವದಲ್ಲಿಹಿರೇಮಗಳೂರು ಕಣ್ಣನ್ ಮಹಿಳೆಯರನ್ನು ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ. ಅವರು ಅಸಹ್ಯ ತರುವ ಹಾಗೂ ಸಮಾಜವನ್ನು ಕುಲಗೆಡಿಸುವ ಹೇಳಿಕೆ ನೀಡಿದ್ದಾರೆ. ನಿಜಕ್ಕೂ ಇವರು ಸಂಸ್ಕೃತಿ ಚಿಂತಕರೆ? ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಬೌನ್ಸರ್ ಹೊಡೆದ ಏಟಿನಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಹೇಳಿದ್ದಾರೆ. ಈ ಕೂಡಲೇ ಅವರು ಕ್ಷಮೆ ಯಾಚಿಸಬೇಕು ಇಲ್ಲವೇ ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಒತ್ತಾಯಿಸಿದರು. ಇಲ್ಲದಿದ್ದರೆ ರಂಗಾಯಣದ ಆವರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಅಣಕು ಶವಯಾತ್ರೆ ನಡೆಸಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸತ್ತವರನ್ನು ಕುರಿತು ಹೀನಾಯವಾಗಿ ಮಾತನಾಡಿ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವುದು ನಾಚಿಕೆಗೇಡು. ರಾಕೇಶ್ ಅಭಿಮಾನಿಗಳು ಕಾರ್ಯಪ್ಪ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತಾರೆ ಎಂದು ಎಚ್ಚರಿಸಿದರು.</p>.<p>ಸಂಸ್ಕೃತಿ, ಶಿಸ್ತಿಗೆ ಹೆಸರಾಗಿರುವ ಆರ್ ಎಸ್ ಎಸ್ ಕೂಡಲೇ ಕಾರ್ಯಪ್ಪ ಅವರನ್ನು ನಿಯಂತ್ರಿಸಬೇಕು. ಅಸಂಸ್ಕೃತಿಯ ಹೇಳಿಕೆ ನೀಡುವ ಮೂಲಕ ಆರ್ ಎಸ್ ಎಸ್ ಗೆ ಕಾರ್ಯಪ್ಪ ಕಳಂಕ ತಂದಿದ್ದಾರೆ ಎಂದು ಹೇಳಿದರು.</p>.<p>ಕಾರ್ಯಪ್ಪ ಅವರು ಹಿಂದೆ ಜೈಲಿಗೆ ಹೋಗಿದ್ದು ಏಕೆ ಎಂಬುದನ್ನು ಅವರು ಬಹಿರಂಗಪಡಿಸಬೇಕು. ಗಾಜಿನ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಪ್ರವೃತ್ತಿಯನ್ನು ಇನ್ನಾದರೂ ಬಿಡಬೇಕು ಎಂದರು.</p>.<p>ತಾಯಿ ಕುರಿತ ಬಹುರೂಪಿ ರಂಗೋತ್ಸವದಲ್ಲಿಹಿರೇಮಗಳೂರು ಕಣ್ಣನ್ ಮಹಿಳೆಯರನ್ನು ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ. ಅವರು ಅಸಹ್ಯ ತರುವ ಹಾಗೂ ಸಮಾಜವನ್ನು ಕುಲಗೆಡಿಸುವ ಹೇಳಿಕೆ ನೀಡಿದ್ದಾರೆ. ನಿಜಕ್ಕೂ ಇವರು ಸಂಸ್ಕೃತಿ ಚಿಂತಕರೆ? ಎಂದು ಪ್ರಶ್ನಿಸಿದರು.</p>.<p>ಬೌನ್ಸರ್ ಹೊಡೆದ ಏಟಿನಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಹೇಳಿದ್ದಾರೆ. ಈ ಕೂಡಲೇ ಅವರು ಕ್ಷಮೆ ಯಾಚಿಸಬೇಕು ಇಲ್ಲವೇ ಈ ಕುರಿತ ದಾಖಲೆಗಳನ್ನು ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಎಸ್.ಶಿವರಾಮು ಒತ್ತಾಯಿಸಿದರು.</p>.<p>ಇಲ್ಲದಿದ್ದರೆ ರಂಗಾಯಣದ ಆವರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರ ಅಣಕು ಶವಯಾತ್ರೆ ನಡೆಸಲಾಗುವುದು ಎಂದು ಅವರು ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>ಸತ್ತವರನ್ನು ಕುರಿತು ಹೀನಾಯವಾಗಿ ಮಾತನಾಡಿ ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವುದು ನಾಚಿಕೆಗೇಡು. ರಾಕೇಶ್ ಅಭಿಮಾನಿಗಳು ಕಾರ್ಯಪ್ಪ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತಾರೆ ಎಂದು ಎಚ್ಚರಿಸಿದರು.</p>.<p>ಸಂಸ್ಕೃತಿ, ಶಿಸ್ತಿಗೆ ಹೆಸರಾಗಿರುವ ಆರ್ ಎಸ್ ಎಸ್ ಕೂಡಲೇ ಕಾರ್ಯಪ್ಪ ಅವರನ್ನು ನಿಯಂತ್ರಿಸಬೇಕು. ಅಸಂಸ್ಕೃತಿಯ ಹೇಳಿಕೆ ನೀಡುವ ಮೂಲಕ ಆರ್ ಎಸ್ ಎಸ್ ಗೆ ಕಾರ್ಯಪ್ಪ ಕಳಂಕ ತಂದಿದ್ದಾರೆ ಎಂದು ಹೇಳಿದರು.</p>.<p>ಕಾರ್ಯಪ್ಪ ಅವರು ಹಿಂದೆ ಜೈಲಿಗೆ ಹೋಗಿದ್ದು ಏಕೆ ಎಂಬುದನ್ನು ಅವರು ಬಹಿರಂಗಪಡಿಸಬೇಕು. ಗಾಜಿನ ಮನೆಯಲ್ಲಿ ಕುಳಿತು ಕಲ್ಲೆಸೆಯುವ ಪ್ರವೃತ್ತಿಯನ್ನು ಇನ್ನಾದರೂ ಬಿಡಬೇಕು ಎಂದರು.</p>.<p>ತಾಯಿ ಕುರಿತ ಬಹುರೂಪಿ ರಂಗೋತ್ಸವದಲ್ಲಿಹಿರೇಮಗಳೂರು ಕಣ್ಣನ್ ಮಹಿಳೆಯರನ್ನು ಕುರಿತು ಕೀಳಾಗಿ ಮಾತನಾಡಿರುವುದು ಸರಿಯಲ್ಲ. ಅವರು ಅಸಹ್ಯ ತರುವ ಹಾಗೂ ಸಮಾಜವನ್ನು ಕುಲಗೆಡಿಸುವ ಹೇಳಿಕೆ ನೀಡಿದ್ದಾರೆ. ನಿಜಕ್ಕೂ ಇವರು ಸಂಸ್ಕೃತಿ ಚಿಂತಕರೆ? ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>