<p><strong>ಮೈಸೂರು:</strong> ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಇಲ್ಲಿನ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ರೈತರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯು ಬಳಕೆ ಮಾಡುವ ಮೂಲಕ ಸರ್ಕಾರ ದೌರ್ಜನ್ಯ ಎಸಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ನಡೆ ಎಂದು ಅವರು ಟೀಕಿಸಿದರು.</p>.<p>ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿಕೊಡಲೆಂದೇ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಮೇಲ್ನೋಟಕ್ಕೆ ಮಾತ್ರವೇ ಇದು ರೈತಪರ ಎಂದು ಕಾಣಿಸುತ್ತದೆ. ಆದರೆ, ಭವಿಷ್ಯದ ದೃಷ್ಟಿಯಿಂದ ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲಕರವಾಗಿದೆ ಎಂದು ಅವರು ಹೇಳಿದರು.</p>.<p>ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಸಣ್ಣ ಹಿಡುವಳಿದಾರರು ಭೂಮಿಯನ್ನು ಕಳೆದುಕೊಳ್ಳುವ ಸ್ಥಿತಿ ಎದುರಾಗಲಿದೆ. ಹಾಗಾಗಿ, ಈ ಎರಡೂ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸುವುದು ತಪ್ಪೇ ಎಂದು ಅವರು ಪ್ರಶ್ನಿಸಿದರು.</p>.<p>ಸಂಘಟನೆಯ ಕಾರ್ಯದರ್ಶಿ ಎಚ್.ಆರ್.ಶೇಷಾದ್ರಿ, ಸಹಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ, ಜಿಲ್ಲಾ ಮಂಡಳಿ ಸದಸ್ಯರಾದ ಸೋಮರಾಜೇಅರಸ್, ಡಿ.ಜಗನ್ನಾಥ್, ಎನ್.ಕೆ.ದೇವದಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಇಲ್ಲಿನ ಪುರಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ರೈತರ ಮೇಲೆ ಜಲಫಿರಂಗಿ ಮತ್ತು ಅಶ್ರುವಾಯು ಬಳಕೆ ಮಾಡುವ ಮೂಲಕ ಸರ್ಕಾರ ದೌರ್ಜನ್ಯ ಎಸಗಿದೆ. ಇದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾದ ನಡೆ ಎಂದು ಅವರು ಟೀಕಿಸಿದರು.</p>.<p>ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲ ಮಾಡಿಕೊಡಲೆಂದೇ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಮೇಲ್ನೋಟಕ್ಕೆ ಮಾತ್ರವೇ ಇದು ರೈತಪರ ಎಂದು ಕಾಣಿಸುತ್ತದೆ. ಆದರೆ, ಭವಿಷ್ಯದ ದೃಷ್ಟಿಯಿಂದ ಇದು ಬಹುರಾಷ್ಟ್ರೀಯ ಕಂಪನಿಗಳಿಗೆ ಅನುಕೂಲಕರವಾಗಿದೆ ಎಂದು ಅವರು ಹೇಳಿದರು.</p>.<p>ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಯಾರು ಬೇಕಾದರೂ ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ. ಇದರಿಂದ ಸಣ್ಣ ಹಿಡುವಳಿದಾರರು ಭೂಮಿಯನ್ನು ಕಳೆದುಕೊಳ್ಳುವ ಸ್ಥಿತಿ ಎದುರಾಗಲಿದೆ. ಹಾಗಾಗಿ, ಈ ಎರಡೂ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸುವುದು ತಪ್ಪೇ ಎಂದು ಅವರು ಪ್ರಶ್ನಿಸಿದರು.</p>.<p>ಸಂಘಟನೆಯ ಕಾರ್ಯದರ್ಶಿ ಎಚ್.ಆರ್.ಶೇಷಾದ್ರಿ, ಸಹಕಾರ್ಯದರ್ಶಿ ಎಚ್.ಬಿ.ರಾಮಕೃಷ್ಣ, ಜಿಲ್ಲಾ ಮಂಡಳಿ ಸದಸ್ಯರಾದ ಸೋಮರಾಜೇಅರಸ್, ಡಿ.ಜಗನ್ನಾಥ್, ಎನ್.ಕೆ.ದೇವದಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>