<p><strong>ಸಾಲಿಗ್ರಾಮ: </strong>ಇಲ್ಲಿನ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ದೊಡ್ಡೇಗೌಡ (60) ಹೃದಯಾಘಾತಕ್ಕೀ ಡಾಗಿ ಮಂಗಳ ವಾರ ರಾತ್ರಿ ನಿಧನರಾದರು.</p>.<p>ದೊಡ್ಡೇಗೌಡ ಜೂನ್ 30ರ ಗುರುವಾರ ಕರ್ತವ್ಯದಿಂದ ನಿವೃತ್ತರಾಗಬೇಕಿತ್ತು.</p>.<p>ಪೊಲೀಸ್ ಜೀಪ್ನಲ್ಲಿ ಕರ್ತವ್ಯ ನಿರತರಾಗಿದ್ದಾಗಲೇ ದೊಡ್ಡೇಗೌಡರಿಗೆ ಎದೆನೋವು ಕಾಣಿಸಿ ಕೊಂಡಿದೆ. ತಕ್ಷಣವೇ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಕೊನೆ ಉಸಿರೆಳೆದಿದ್ದಾರೆ. ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.</p>.<p>ಅಂತ್ಯಕ್ರಿಯೆ ಸ್ವಗ್ರಾಮ ಹುಣಸೂರು ತಾಲ್ಲೂಕಿನ ಬಿಳಿಗೆರೆಯ ತೋಟದ ಮನೆಯಲ್ಲಿ ಬುಧವಾರ ಮಧ್ಯಾಹ್ನ ನಡೆಯಿತು.</p>.<p>ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಡಿವೈಎಸ್ಪಿ ಸುಮಿತ್, ಸಿಪಿಐ ಲವ, ಶ್ರೀಕಾಂತ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.</p>.<p>1989ರಲ್ಲಿ ಸಾಲಿಗ್ರಾಮ ಪೊಲೀಸ್ ಠಾಣೆಯಿಂದ ತಮ್ಮ ವೃತ್ತಿ ಜೀವನ ಆರಂಭಿಸಿದ್ದ ದೊಡ್ಡೇಗೌಡರು, ತಿ.ನರಸೀಪುರ, ಪಿರಿಯಾಪಟ್ಟಣ, ಹುಣಸೂರು, ಎಚ್.ಡಿ.ಕೋಟೆ ತಾಲ್ಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 2021ರ ಜೂನ್ ತಿಂಗಳಿನಲ್ಲಿ ಸಾಲಿಗ್ರಾಮ ಠಾಣೆಗೆ ಪಿಎಸ್ಐಯಾಗಿ ನೇಮಕ ಗೊಂಡಿದ್ದರು. ನಿವೃತ್ತಿಗೆ ಎರಡು ದಿನ ಬಾಕಿ ಇರುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಲಿಗ್ರಾಮ: </strong>ಇಲ್ಲಿನ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿಯ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ದೊಡ್ಡೇಗೌಡ (60) ಹೃದಯಾಘಾತಕ್ಕೀ ಡಾಗಿ ಮಂಗಳ ವಾರ ರಾತ್ರಿ ನಿಧನರಾದರು.</p>.<p>ದೊಡ್ಡೇಗೌಡ ಜೂನ್ 30ರ ಗುರುವಾರ ಕರ್ತವ್ಯದಿಂದ ನಿವೃತ್ತರಾಗಬೇಕಿತ್ತು.</p>.<p>ಪೊಲೀಸ್ ಜೀಪ್ನಲ್ಲಿ ಕರ್ತವ್ಯ ನಿರತರಾಗಿದ್ದಾಗಲೇ ದೊಡ್ಡೇಗೌಡರಿಗೆ ಎದೆನೋವು ಕಾಣಿಸಿ ಕೊಂಡಿದೆ. ತಕ್ಷಣವೇ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ಕೊನೆ ಉಸಿರೆಳೆದಿದ್ದಾರೆ. ಇವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.</p>.<p>ಅಂತ್ಯಕ್ರಿಯೆ ಸ್ವಗ್ರಾಮ ಹುಣಸೂರು ತಾಲ್ಲೂಕಿನ ಬಿಳಿಗೆರೆಯ ತೋಟದ ಮನೆಯಲ್ಲಿ ಬುಧವಾರ ಮಧ್ಯಾಹ್ನ ನಡೆಯಿತು.</p>.<p>ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ಡಿವೈಎಸ್ಪಿ ಸುಮಿತ್, ಸಿಪಿಐ ಲವ, ಶ್ರೀಕಾಂತ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.</p>.<p>1989ರಲ್ಲಿ ಸಾಲಿಗ್ರಾಮ ಪೊಲೀಸ್ ಠಾಣೆಯಿಂದ ತಮ್ಮ ವೃತ್ತಿ ಜೀವನ ಆರಂಭಿಸಿದ್ದ ದೊಡ್ಡೇಗೌಡರು, ತಿ.ನರಸೀಪುರ, ಪಿರಿಯಾಪಟ್ಟಣ, ಹುಣಸೂರು, ಎಚ್.ಡಿ.ಕೋಟೆ ತಾಲ್ಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 2021ರ ಜೂನ್ ತಿಂಗಳಿನಲ್ಲಿ ಸಾಲಿಗ್ರಾಮ ಠಾಣೆಗೆ ಪಿಎಸ್ಐಯಾಗಿ ನೇಮಕ ಗೊಂಡಿದ್ದರು. ನಿವೃತ್ತಿಗೆ ಎರಡು ದಿನ ಬಾಕಿ ಇರುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>