<p><strong>ಮೈಸೂರು</strong>: ‘ಸರ್ಕಾರ ಯೋಜನೆಗಳನ್ನು ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಅತಿ ಮುಖ್ಯ’ ಎಂದು ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರಿಗಳು ಕಾನೂನು ಬದ್ಧವಾಗಿ ಕೆಲಸ ನಿರ್ವಹಿಸಿದರೆ ಅಭಿವೃದ್ಧಿ ಬಹಳ ಸುಲಭವಾಗಿ ನಡೆಯುತ್ತದೆ ಎಂದರು.</p>.<p>‘ಜನರ ಬೇಡಿಕೆ ಬಹಳಷ್ಟು ಇರುತ್ತದೆ. ಜನರಿಂದ ಮಾಹಿತಿ ಪಡೆದು ಯೋಜನೆ ರೂಪಿಸುವುದು ಕಷ್ಟಕರ. ಆದ್ದರಿಂದ ಯೋಜನೆ ರೂಪಿಸುವಾಗ ಯಾವ ವಿಷಯಕ್ಕೆ ಆದ್ಯತೆ ನೀಡಬೇಕು, ಯಾವ ಫಲಾನುಭವಿಗೆ ಆದ್ಯತೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು’ ಎಂದರು.</p>.<p>‘ಜನರ ಪಾಲ್ಗೊಳ್ಳುವಿಕೆಯಿಂದ ಜನೋಪಯೋಗಿ ಕೆಲಸ ಮಾಡಬಹುದು ಎಂಬ ಆಶಯದೊಂದಿಗೆ ಸಭೆಗಳನ್ನು ನಡೆಸುತ್ತಿದ್ದು, ಜಿಲ್ಲಾ ಯೋಜನಾ ವಿವರಗಳನ್ನು ಆಯವ್ಯಯಕ್ಕೂ ಮುನ್ನ ಮುಖ್ಯಮಂತ್ರಿಗಳಿಗೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>‘ಗ್ರಾಮ ಮಟ್ಟದಲ್ಲಿ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುತ್ತಿದ್ದಾರಾದರೂ ನಗರ ಪ್ರದೇಶದಲ್ಲಿ ಜನರ ಪಾಲ್ಗೊಳ್ಳುವಿಕೆ ಕಾಣುತ್ತಿಲ್ಲ. ಆದರಿಂದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಡಿಸೆಂಬರ್ 6 ರೊಳಗೆ 100 ಮತಗಳಿಗೆ ಇಬ್ಬರನ್ನು ಆಯ್ಕೆ ಮಾಡಿ ನೆರೆಹೊರೆಯವರ ಗುಂಪು ರಚಿಸಿ, ವಾರ್ಡ್ ಸಭೆಗಳನ್ನು ನಡೆಸಬೇಕು’ ಎಂದು ಸೂಚಿಸಿದರು.</p>.<p>ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಮಾತನಾಡಿ ‘ಜಿಲ್ಲೆಯ ಪ್ರಗತಿಪರ ಯೋಜನೆಗಳನ್ನು ರೂಪಿಸುವ ಸಲುವಾಗಿ ಈಗಾಗಲೇ ತರಬೇತಿಗಳನ್ನು ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಹಂತದಲ್ಲಿ ಯೋಜನೆ ರೂಪಿಸುವುದು ಬಾಕಿ ಇದ್ದು, ಶೀಘ್ರವಾಗಿ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.</p>.<p>ಮಂಡ್ಯ ಜಿಲ್ಲಾಧಿಕಾರಿ ಕುಮಾರ, ಮೈಸೂರು ಜಿ.ಪಂ. ಸಿಇಒ ಯುಕೇಶ್ ಕುಮಾರ್, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಜಿಲ್ಲೆಗಳ ಯೋಜನೆಯ ವಿವರಗಳನ್ನು ವಿವರಿಸಿದರು.</p>.<p>ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ವಿಭಾಗದ ವಿವಿಧ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸರ್ಕಾರ ಯೋಜನೆಗಳನ್ನು ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಅತಿ ಮುಖ್ಯ’ ಎಂದು ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರಿಗಳು ಕಾನೂನು ಬದ್ಧವಾಗಿ ಕೆಲಸ ನಿರ್ವಹಿಸಿದರೆ ಅಭಿವೃದ್ಧಿ ಬಹಳ ಸುಲಭವಾಗಿ ನಡೆಯುತ್ತದೆ ಎಂದರು.</p>.<p>‘ಜನರ ಬೇಡಿಕೆ ಬಹಳಷ್ಟು ಇರುತ್ತದೆ. ಜನರಿಂದ ಮಾಹಿತಿ ಪಡೆದು ಯೋಜನೆ ರೂಪಿಸುವುದು ಕಷ್ಟಕರ. ಆದ್ದರಿಂದ ಯೋಜನೆ ರೂಪಿಸುವಾಗ ಯಾವ ವಿಷಯಕ್ಕೆ ಆದ್ಯತೆ ನೀಡಬೇಕು, ಯಾವ ಫಲಾನುಭವಿಗೆ ಆದ್ಯತೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು’ ಎಂದರು.</p>.<p>‘ಜನರ ಪಾಲ್ಗೊಳ್ಳುವಿಕೆಯಿಂದ ಜನೋಪಯೋಗಿ ಕೆಲಸ ಮಾಡಬಹುದು ಎಂಬ ಆಶಯದೊಂದಿಗೆ ಸಭೆಗಳನ್ನು ನಡೆಸುತ್ತಿದ್ದು, ಜಿಲ್ಲಾ ಯೋಜನಾ ವಿವರಗಳನ್ನು ಆಯವ್ಯಯಕ್ಕೂ ಮುನ್ನ ಮುಖ್ಯಮಂತ್ರಿಗಳಿಗೆ ನೀಡಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದರು.</p>.<p>‘ಗ್ರಾಮ ಮಟ್ಟದಲ್ಲಿ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳುತ್ತಿದ್ದಾರಾದರೂ ನಗರ ಪ್ರದೇಶದಲ್ಲಿ ಜನರ ಪಾಲ್ಗೊಳ್ಳುವಿಕೆ ಕಾಣುತ್ತಿಲ್ಲ. ಆದರಿಂದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಡಿಸೆಂಬರ್ 6 ರೊಳಗೆ 100 ಮತಗಳಿಗೆ ಇಬ್ಬರನ್ನು ಆಯ್ಕೆ ಮಾಡಿ ನೆರೆಹೊರೆಯವರ ಗುಂಪು ರಚಿಸಿ, ವಾರ್ಡ್ ಸಭೆಗಳನ್ನು ನಡೆಸಬೇಕು’ ಎಂದು ಸೂಚಿಸಿದರು.</p>.<p>ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಮಾತನಾಡಿ ‘ಜಿಲ್ಲೆಯ ಪ್ರಗತಿಪರ ಯೋಜನೆಗಳನ್ನು ರೂಪಿಸುವ ಸಲುವಾಗಿ ಈಗಾಗಲೇ ತರಬೇತಿಗಳನ್ನು ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಹಂತದಲ್ಲಿ ಯೋಜನೆ ರೂಪಿಸುವುದು ಬಾಕಿ ಇದ್ದು, ಶೀಘ್ರವಾಗಿ ಪ್ರಕ್ರಿಯೆ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.</p>.<p>ಮಂಡ್ಯ ಜಿಲ್ಲಾಧಿಕಾರಿ ಕುಮಾರ, ಮೈಸೂರು ಜಿ.ಪಂ. ಸಿಇಒ ಯುಕೇಶ್ ಕುಮಾರ್, ಚಾಮರಾಜನಗರ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಜಿಲ್ಲೆಗಳ ಯೋಜನೆಯ ವಿವರಗಳನ್ನು ವಿವರಿಸಿದರು.</p>.<p>ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ವಿಭಾಗದ ವಿವಿಧ ಜಿಲ್ಲೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>