<p><strong>ಮೈಸೂರು</strong>: ‘ಹಲವು ಹಗರಣಗಳ ರೂವಾರಿಗಳಾದ ಬಿಜೆಪಿ–ಜೆಡಿಎಸ್ನವರು ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ನಡೆಸಲು ಯಾವ ನೈತಿಕತೆ ಇದೆ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಕೇಳಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಆ ಪಕ್ಷಗಳ ನಾಯಕರಿಗೆ ರಾಜ್ಯದ ಪರವಾಗಿ ನಿಜವಾಗಿಯೂ ಕಾಳಜಿ ಇದ್ದಿದ್ದರೆ ಅವರು ಮೈಸೂರಿನ ಬದಲಿಗೆ ನವದೆಹಲಿಗೆ ಪಾದಯಾತ್ರೆ ನಡೆಸಬೇಕಿತ್ತು. ಅಲ್ಲಿಗೆ ಹೋಗಿ, ರಾಜ್ಯಕ್ಕೆ ತೆರಿಗೆ ಸೇರಿದಂತೆ ಹಲವು ವಿಚಾರಗಳಲ್ಲಿ ಆಗಿರುವ ಅನ್ಯಾಯವನ್ನು ಪ್ರಶ್ನಿಸಬೇಕಿತ್ತು’ ಎಂದರು.</p>.<p>‘ನಮ್ಮ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರದ ಬಿಜೆಪಿ ನಾಯಕರು ದೊಡ್ಡ ಷಡ್ಯಂತ್ರ ನಡೆಸುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಹೇಳಿದರು.</p>.<p>‘ಯಾವ ಕಾರಣಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎನ್ನುವುದು ಮೈಸೂರು ಚಲೋ ಪಾದಯಾತ್ರೆ ಕೈಗೊಂಡಿರುವ ವಿರೋಧ ಪಕ್ಷದವರಿಗೆ ಗೊತ್ತೇ ಇಲ್ಲ. ದ್ವೇಷ ರಾಜಕಾರಣವನ್ನು ಅವರು ಮಾಡುತ್ತಿದ್ದಾರೆ. ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದನ್ನು ನೋಡಿಕೊಳ್ಳದೇ, ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಬಿಜೆಪಿ ಸರ್ಕಾರವಿದ್ದಾಗ ಬಹಳಷ್ಟು ಹಗರಣಗಳು ನಡೆದಿವೆ. ಆದರೆ, ಈಗ ಸತ್ಯಹರಿಶ್ಚಂದ್ರರ ರೀತಿ ಅವರು ಮಾತನಾಡುತ್ತಿದ್ದಾರೆ. ಕೋವಿಡ್ ಸಂಕಷ್ಟದ ಅವಧಿಯಲ್ಲಿ ಹೆಣದ ಮೇಲೆ ರಾಜಕಾರಣ ಮಾಡಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ. ಶೇ 40ರಷ್ಟು ಕಮಿಷನ್ ಸರ್ಕಾರ ಅವರದಾಗಿತ್ತು. ಆ ಕಾರಣಕ್ಕಾಗಿಯೇ ಜನರು ಬಿಜೆಪಿಯವರನ್ನು ಸೋಲಿಸಿ ನಮಗೆ ಅಧಿಕಾರ ನೀಡಿದ್ದಾರೆ. ಅವರ ಅಕ್ರಮಗಳ ಕುರಿತು ನಾವು ತನಿಖೆಯನ್ನೂ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಕಾವೇರಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಚ್.ಡಿ. ಕುಮಾರಸ್ವಾಮಿ ಮಾತು ತಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ಕರ್ನಾಟಕದ ಪರವಾಗಿ ದನಿ ಎತ್ತುವ ತಾಕತ್ತು ಅವರಿಗಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿ–ಜೆಡಿಎಸ್ನಲ್ಲಿರುವ ನಾಯಕಿಯರು, ಮಹಿಳೆಯರಿಗೆ ಅನ್ಯಾಯವಾದಾಗ ದನಿ ಎತ್ತುವುದಿಲ್ಲವೇಕೆ. ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ಮಹಿಳೆಯರ ಪರವಾಗಿ ಮಾತನಾಡಲಿಲ್ಲವೇಕೆ?’ ಎಂದು ಕೇಳಿದರು.</p>.<p>ಪಕ್ಷದ ನಾಯಕಿರಾದ ಲತಾ ಸಿದ್ದಶೆಟ್ಟಿ, ಪುಷ್ಪವಲ್ಲಿ, ಸುಶೀಲಾ ನಂಜಪ್ಪ, ಪುಷ್ಪಲತಾ ಚಿಕ್ಕಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಹಲವು ಹಗರಣಗಳ ರೂವಾರಿಗಳಾದ ಬಿಜೆಪಿ–ಜೆಡಿಎಸ್ನವರು ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ನಡೆಸಲು ಯಾವ ನೈತಿಕತೆ ಇದೆ’ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಕೇಳಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಆ ಪಕ್ಷಗಳ ನಾಯಕರಿಗೆ ರಾಜ್ಯದ ಪರವಾಗಿ ನಿಜವಾಗಿಯೂ ಕಾಳಜಿ ಇದ್ದಿದ್ದರೆ ಅವರು ಮೈಸೂರಿನ ಬದಲಿಗೆ ನವದೆಹಲಿಗೆ ಪಾದಯಾತ್ರೆ ನಡೆಸಬೇಕಿತ್ತು. ಅಲ್ಲಿಗೆ ಹೋಗಿ, ರಾಜ್ಯಕ್ಕೆ ತೆರಿಗೆ ಸೇರಿದಂತೆ ಹಲವು ವಿಚಾರಗಳಲ್ಲಿ ಆಗಿರುವ ಅನ್ಯಾಯವನ್ನು ಪ್ರಶ್ನಿಸಬೇಕಿತ್ತು’ ಎಂದರು.</p>.<p>‘ನಮ್ಮ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರದ ಬಿಜೆಪಿ ನಾಯಕರು ದೊಡ್ಡ ಷಡ್ಯಂತ್ರ ನಡೆಸುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ’ ಎಂದು ಹೇಳಿದರು.</p>.<p>‘ಯಾವ ಕಾರಣಕ್ಕಾಗಿ ಹೋರಾಟ ನಡೆಸುತ್ತಿದ್ದೇವೆ ಎನ್ನುವುದು ಮೈಸೂರು ಚಲೋ ಪಾದಯಾತ್ರೆ ಕೈಗೊಂಡಿರುವ ವಿರೋಧ ಪಕ್ಷದವರಿಗೆ ಗೊತ್ತೇ ಇಲ್ಲ. ದ್ವೇಷ ರಾಜಕಾರಣವನ್ನು ಅವರು ಮಾಡುತ್ತಿದ್ದಾರೆ. ತಟ್ಟೆಯಲ್ಲಿ ಹೆಗ್ಗಣ ಬಿದ್ದಿರುವುದನ್ನು ನೋಡಿಕೊಳ್ಳದೇ, ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಬಿಜೆಪಿ ಸರ್ಕಾರವಿದ್ದಾಗ ಬಹಳಷ್ಟು ಹಗರಣಗಳು ನಡೆದಿವೆ. ಆದರೆ, ಈಗ ಸತ್ಯಹರಿಶ್ಚಂದ್ರರ ರೀತಿ ಅವರು ಮಾತನಾಡುತ್ತಿದ್ದಾರೆ. ಕೋವಿಡ್ ಸಂಕಷ್ಟದ ಅವಧಿಯಲ್ಲಿ ಹೆಣದ ಮೇಲೆ ರಾಜಕಾರಣ ಮಾಡಿದ ಕೀರ್ತಿ ಬಿಜೆಪಿ ಸರ್ಕಾರಕ್ಕೆ ಸಲ್ಲುತ್ತದೆ. ಶೇ 40ರಷ್ಟು ಕಮಿಷನ್ ಸರ್ಕಾರ ಅವರದಾಗಿತ್ತು. ಆ ಕಾರಣಕ್ಕಾಗಿಯೇ ಜನರು ಬಿಜೆಪಿಯವರನ್ನು ಸೋಲಿಸಿ ನಮಗೆ ಅಧಿಕಾರ ನೀಡಿದ್ದಾರೆ. ಅವರ ಅಕ್ರಮಗಳ ಕುರಿತು ನಾವು ತನಿಖೆಯನ್ನೂ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.</p>.<p>‘ಕಾವೇರಿ ಹಾಗೂ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಚ್.ಡಿ. ಕುಮಾರಸ್ವಾಮಿ ಮಾತು ತಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಎದುರು ನಿಂತು ಕರ್ನಾಟಕದ ಪರವಾಗಿ ದನಿ ಎತ್ತುವ ತಾಕತ್ತು ಅವರಿಗಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿ–ಜೆಡಿಎಸ್ನಲ್ಲಿರುವ ನಾಯಕಿಯರು, ಮಹಿಳೆಯರಿಗೆ ಅನ್ಯಾಯವಾದಾಗ ದನಿ ಎತ್ತುವುದಿಲ್ಲವೇಕೆ. ಹಾಸನದ ಪೆನ್ಡ್ರೈವ್ ಪ್ರಕರಣದಲ್ಲಿ ಮಹಿಳೆಯರ ಪರವಾಗಿ ಮಾತನಾಡಲಿಲ್ಲವೇಕೆ?’ ಎಂದು ಕೇಳಿದರು.</p>.<p>ಪಕ್ಷದ ನಾಯಕಿರಾದ ಲತಾ ಸಿದ್ದಶೆಟ್ಟಿ, ಪುಷ್ಪವಲ್ಲಿ, ಸುಶೀಲಾ ನಂಜಪ್ಪ, ಪುಷ್ಪಲತಾ ಚಿಕ್ಕಣ್ಣ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>