<p><strong>ಪಿರಿಯಾಪಟ್ಟಣ: </strong>ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳಿಗೆ ರಾಗಿ ಮಾರಿದ ರೈತರೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ರಾಗಿ ಮಾರಾಟ ಮಾಡಿ ಹಲವು ತಿಂಗಳು ಗತಿಸಿದರೂ; ತಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಯಾಗದಿರುವುದರಿಂದ ದಿಕ್ಕು ತೋಚ ದಂತಾಗಿದ್ದಾರೆ. ಸಕಾಲಕ್ಕೆ ಹಣ ಸಿಗ ದಿರುವುದರಿಂದ ಹೈರಾಣಾಗಿದ್ದಾರೆ.</p>.<p>ಮುಕ್ತ ಮಾರುಕಟ್ಟೆ ಬೆಲೆಗಿಂತ ಖರೀದಿ ಕೇಂದ್ರದಲ್ಲಿ ಹೆಚ್ಚಿನ ದರಕ್ಕೆ ರಾಗಿ ಖರೀದಿಸಿದ್ದರಿಂದ ಬಹುತೇಕರು ಇಲ್ಲಿಗೆ ತಮ್ಮ ಉತ್ಪನ್ನ ಮಾರಾಟ ಮಾಡಿದ್ದಾರೆ. ಇವರಲ್ಲಿ ಬಹುತೇಕರ ಖಾತೆಗೆ ಹಣ ಜಮೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ.</p>.<p>ತಾಲ್ಲೂಕಿನ 4000ಕ್ಕೂ ಹೆಚ್ಚು ರೈತರು 1,95,806 ಕ್ವಿಂಟಲ್ ರಾಗಿ ಯನ್ನು ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿದ್ದಾರೆ. ಇದಕ್ಕೆ ಅಂದಾಜು ₹ 64 ಕೋಟಿ ಪಾವತಿಯಾಗಬೇಕಿದೆ. ರಾಗಿ ಖರೀದಿಸಿ ಮೂರು ತಿಂಗಳು ಕಳೆದರೂ, ಇದುವರೆಗೂ ರೈತರ ಖಾತೆಗೆ ಹಣ ಜಮೆಯಾಗಿಲ್ಲ.</p>.<p>‘ಇದೀಗ ಮುಂಗಾರು ಚುರುಕುಗೊಂಡಿದೆ. ಕೃಷಿ ಚಟುವಟಿಕೆ ಶುರುವಾಗಿವೆ. ಈ ವರ್ಷದ ಕೃಷಿ ಕೈಗೊಳ್ಳಲು ಕೈಯಲ್ಲಿ ಹಣವಿಲ್ಲದೆ ರೈತರು ಪರದಾಡುತ್ತಿದ್ದಾರೆ. ಶಾಸಕ ಕೆ.ಮಹದೇವ್, ಉಸ್ತುವಾರಿ ಸಚಿವ ಸೋಮಶೇಖರ್ ಗಮನಕ್ಕೆ ತಂದರೂ ಪ್ರಯೋಜನವಾಗದಾಗಿದೆ’ ಎನ್ನುತ್ತಾರೆ ಮಂಜು.</p>.<p>‘ಸಕಾಲದಲ್ಲಿ ಸರ್ಕಾರಕ್ಕೆ ಮಾಹಿತಿ ತಲುಪದ ಕಾರಣ ಈ ಬಾರಿ ತಾಲ್ಲೂಕಿನ ರೈತರಿಗೆ ಹಣ ಜಮೆಯಾಗಿಲ್ಲ’ ಎಂದು ಆಹಾರ ಶಿರಸ್ತೇದಾರ್ ಸಣ್ಣಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ: </strong>ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳಿಗೆ ರಾಗಿ ಮಾರಿದ ರೈತರೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ರಾಗಿ ಮಾರಾಟ ಮಾಡಿ ಹಲವು ತಿಂಗಳು ಗತಿಸಿದರೂ; ತಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಯಾಗದಿರುವುದರಿಂದ ದಿಕ್ಕು ತೋಚ ದಂತಾಗಿದ್ದಾರೆ. ಸಕಾಲಕ್ಕೆ ಹಣ ಸಿಗ ದಿರುವುದರಿಂದ ಹೈರಾಣಾಗಿದ್ದಾರೆ.</p>.<p>ಮುಕ್ತ ಮಾರುಕಟ್ಟೆ ಬೆಲೆಗಿಂತ ಖರೀದಿ ಕೇಂದ್ರದಲ್ಲಿ ಹೆಚ್ಚಿನ ದರಕ್ಕೆ ರಾಗಿ ಖರೀದಿಸಿದ್ದರಿಂದ ಬಹುತೇಕರು ಇಲ್ಲಿಗೆ ತಮ್ಮ ಉತ್ಪನ್ನ ಮಾರಾಟ ಮಾಡಿದ್ದಾರೆ. ಇವರಲ್ಲಿ ಬಹುತೇಕರ ಖಾತೆಗೆ ಹಣ ಜಮೆಯಾಗದಿರುವುದು ಸಮಸ್ಯೆಗೆ ಕಾರಣವಾಗಿದೆ.</p>.<p>ತಾಲ್ಲೂಕಿನ 4000ಕ್ಕೂ ಹೆಚ್ಚು ರೈತರು 1,95,806 ಕ್ವಿಂಟಲ್ ರಾಗಿ ಯನ್ನು ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿದ್ದಾರೆ. ಇದಕ್ಕೆ ಅಂದಾಜು ₹ 64 ಕೋಟಿ ಪಾವತಿಯಾಗಬೇಕಿದೆ. ರಾಗಿ ಖರೀದಿಸಿ ಮೂರು ತಿಂಗಳು ಕಳೆದರೂ, ಇದುವರೆಗೂ ರೈತರ ಖಾತೆಗೆ ಹಣ ಜಮೆಯಾಗಿಲ್ಲ.</p>.<p>‘ಇದೀಗ ಮುಂಗಾರು ಚುರುಕುಗೊಂಡಿದೆ. ಕೃಷಿ ಚಟುವಟಿಕೆ ಶುರುವಾಗಿವೆ. ಈ ವರ್ಷದ ಕೃಷಿ ಕೈಗೊಳ್ಳಲು ಕೈಯಲ್ಲಿ ಹಣವಿಲ್ಲದೆ ರೈತರು ಪರದಾಡುತ್ತಿದ್ದಾರೆ. ಶಾಸಕ ಕೆ.ಮಹದೇವ್, ಉಸ್ತುವಾರಿ ಸಚಿವ ಸೋಮಶೇಖರ್ ಗಮನಕ್ಕೆ ತಂದರೂ ಪ್ರಯೋಜನವಾಗದಾಗಿದೆ’ ಎನ್ನುತ್ತಾರೆ ಮಂಜು.</p>.<p>‘ಸಕಾಲದಲ್ಲಿ ಸರ್ಕಾರಕ್ಕೆ ಮಾಹಿತಿ ತಲುಪದ ಕಾರಣ ಈ ಬಾರಿ ತಾಲ್ಲೂಕಿನ ರೈತರಿಗೆ ಹಣ ಜಮೆಯಾಗಿಲ್ಲ’ ಎಂದು ಆಹಾರ ಶಿರಸ್ತೇದಾರ್ ಸಣ್ಣಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>