ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ಹೋರಾಟಕ್ಕೆ ಸಿದ್ಧ: ರಾಘವೇಂದ್ರ ರಾಜಕುಮಾರ್

Published 20 ಸೆಪ್ಟೆಂಬರ್ 2023, 15:36 IST
Last Updated 20 ಸೆಪ್ಟೆಂಬರ್ 2023, 15:36 IST
ಅಕ್ಷರ ಗಾತ್ರ

ಮೈಸೂರು: ‘ಕಾವೇರಿ ನದಿ ನೀರು ವಿಷಯದಲ್ಲಿ ನಾಡಿನ ಪರವಾಗಿ ಹೋರಾಟಕ್ಕೆ ಸಿದ್ಧವಿದ್ದೇವೆ’ ಎಂದು ಚಲನಚಿತ್ರ ನಟ ರಾಘವೇಂದ್ರ ರಾಜಕುಮಾರ್‌ ಹೇಳಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯವರು ರೂಪರೇಷೆ ಸಿದ್ಧಪಡಿಸುತ್ತಾರೆ. ಅವರ ಕರೆಗಾಗಿ ಕಾಯುತ್ತಿದ್ದೇವೆ. ಕಲಾವಿದರಾದ ನಾವು ಇರುವುದು ಕೇವಲ ಚಲನಚಿತ್ರ ಮಾಡಲು ಹಾಗೂ ಪ್ರದರ್ಶಿಸುವುದಕ್ಕಷ್ಟೇ ಅಲ್ಲ. ನಾಡಿನ ನೆಲ, ಜಲ, ಭಾಷೆಗೆ ಕಷ್ಟ ಬಂದಾಗ ಹೋರಾಟಕ್ಕೆ ಬರಲೇಬೇಕು’ ಎಂದು ತಿಳಿಸಿದರು.

‘ನಾಡು, ನೆಲ, ಜಲಕ್ಕಾಗಿ ಪ್ರಾಣ ಕೊಡಲು ಸಿದ್ಧ ಎಂದು ತಂದೆ ರಾಜಕುಮಾರ್‌ ಹೇಳಿದ್ದರು. ಮುಂದಿನ ದಿನಗಳಲ್ಲಿ ನಮ್ಮ ಇಡೀ ಕುಟುಂಬ ಹಾಗೂ ಚಿತ್ರರಂಗ ರೈತರ ಪರವಾಗಿ ನಿಲ್ಲಲಿದೆ. ಕಾವೇರಿ ಹೋರಾಟದಲ್ಲಿ ಪಾಲ್ಗೊಳ್ಳುವುದು ನಮ್ಮ ಧರ್ಮ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT