<p><strong>ನಂಜನಗೂಡು</strong>: ನಗರದ ಶ್ರೀರಾಘವೇಂದ್ರ ಸ್ವಾಮಿಗಳ ಪ್ರತೀಕ ಸನ್ನಿಧಾನದಲ್ಲಿ ಭಾನುವಾರ ರಾಘವೇಂದ್ರ ಸ್ವಾಮಿಯ 354ನೇ ವರ್ಷದ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಾರಾಧನೆ ಸೇರಿದಂತೆ ಸಕಲ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.</p>.<p>ಮಠದಲ್ಲಿ ಬೆಳಿಗ್ಗೆ ರಾಯರ ಪಾದಪೂಜೆ, ಪಂಚಾಮೃತ ಸೇವೆ, ಮಹಾಮಂಗಳಾರತಿ ನೆರವೇರಿಸಿದ ನಂತರ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ವಿದ್ವಾನ್ ಭಾನುಸಿಂಹ ಅವರು ದಾಸವಾಣಿ ನಡೆಸಿಕೊಟ್ಟರು.</p>.<p>ಶ್ರೀರಾಘವೇಂದ್ರಸ್ವಾಮಿಗಳು ಬೃಂದಾವನ ಪ್ರವೇಶ ಮಾಡಿದ 354ನೇ ವರ್ಷದ ಸುದಿನವಾದ ಸೋಮವಾರ ಹಲವು ಧಾರ್ಮಿಕ ಪೂಜಾ ಕಾರ್ಯ ನಡೆಸಿ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಸಲಾಗುವುದು.</p>.<p>ಆ.12ರಂದು ಮಂಗಳವಾರ ಮಠದ ಪ್ರಕಾರದಲ್ಲಿ ಮಹಾರಥೋತ್ಸವ ಜರುಗಲಿದೆ. 13ರಂದು ಸುಜ್ಞಾನೇಂದ್ರ ತೀರ್ಥರ ಆರಾಧನೆ ನಡೆಯಲಿದೆ.</p>.<p>ಆರಾಧಾನಾ ಮಹೋತ್ಸವ ಅಂಗವಾಗಿ ಮಠದ ಆವರಣ ಸುತ್ತ ಹೂವಿನ ಅಲಂಕಾರವ ಮಾಡಲಾಗಿತ್ತು. ಸಂಜೆ ವೇಳೆ ಸಿ.ಎಸ್.ಕೇಶವಚಂದ್ರ ಅವರಿಂದ ಕರ್ನಾಟಕ ಶಾಸ್ತ್ರೀಯ ವೇಣುವಾದನ ಹಾಗೂ ವಿದ್ವಾನ್ ಚಂದನ್ ಕುಮಾರ್ ಅವರಿಂದ ಕೊಳಲು ವಾದನ ಹಮ್ಮಿಕೊಳ್ಳಲಾಗಿದೆ ಎಂದು ಮಠದ ವ್ಯವಸ್ಥಾಪಕ ಕೆ.ಸುಧಾಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ನಗರದ ಶ್ರೀರಾಘವೇಂದ್ರ ಸ್ವಾಮಿಗಳ ಪ್ರತೀಕ ಸನ್ನಿಧಾನದಲ್ಲಿ ಭಾನುವಾರ ರಾಘವೇಂದ್ರ ಸ್ವಾಮಿಯ 354ನೇ ವರ್ಷದ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಾರಾಧನೆ ಸೇರಿದಂತೆ ಸಕಲ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.</p>.<p>ಮಠದಲ್ಲಿ ಬೆಳಿಗ್ಗೆ ರಾಯರ ಪಾದಪೂಜೆ, ಪಂಚಾಮೃತ ಸೇವೆ, ಮಹಾಮಂಗಳಾರತಿ ನೆರವೇರಿಸಿದ ನಂತರ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು. ವಿದ್ವಾನ್ ಭಾನುಸಿಂಹ ಅವರು ದಾಸವಾಣಿ ನಡೆಸಿಕೊಟ್ಟರು.</p>.<p>ಶ್ರೀರಾಘವೇಂದ್ರಸ್ವಾಮಿಗಳು ಬೃಂದಾವನ ಪ್ರವೇಶ ಮಾಡಿದ 354ನೇ ವರ್ಷದ ಸುದಿನವಾದ ಸೋಮವಾರ ಹಲವು ಧಾರ್ಮಿಕ ಪೂಜಾ ಕಾರ್ಯ ನಡೆಸಿ ಭಕ್ತರಿಗೆ ಪ್ರಸಾದ ವಿನಿಯೋಗ ನಡೆಸಲಾಗುವುದು.</p>.<p>ಆ.12ರಂದು ಮಂಗಳವಾರ ಮಠದ ಪ್ರಕಾರದಲ್ಲಿ ಮಹಾರಥೋತ್ಸವ ಜರುಗಲಿದೆ. 13ರಂದು ಸುಜ್ಞಾನೇಂದ್ರ ತೀರ್ಥರ ಆರಾಧನೆ ನಡೆಯಲಿದೆ.</p>.<p>ಆರಾಧಾನಾ ಮಹೋತ್ಸವ ಅಂಗವಾಗಿ ಮಠದ ಆವರಣ ಸುತ್ತ ಹೂವಿನ ಅಲಂಕಾರವ ಮಾಡಲಾಗಿತ್ತು. ಸಂಜೆ ವೇಳೆ ಸಿ.ಎಸ್.ಕೇಶವಚಂದ್ರ ಅವರಿಂದ ಕರ್ನಾಟಕ ಶಾಸ್ತ್ರೀಯ ವೇಣುವಾದನ ಹಾಗೂ ವಿದ್ವಾನ್ ಚಂದನ್ ಕುಮಾರ್ ಅವರಿಂದ ಕೊಳಲು ವಾದನ ಹಮ್ಮಿಕೊಳ್ಳಲಾಗಿದೆ ಎಂದು ಮಠದ ವ್ಯವಸ್ಥಾಪಕ ಕೆ.ಸುಧಾಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>