<p><strong>ನಂಜನಗೂಡು</strong>: ನಗರದ ರಾಘವೇಂದ್ರ ಸ್ವಾಮಿ ಪ್ರತೀಕ ಸನ್ನಿಧಾನದಲ್ಲಿ ರಾಘವೇಂದ್ರ ತೀರ್ಥರ 353ನೇ ವರ್ಷದ ಆರಾಧನಾ ಮಹೋತ್ಸವ ಪ್ರಯುಕ್ತ ಗುರುವಾರ ಮಧ್ಯಾರಾಧನೆ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.</p>.<p>ರಾಯರ ಪಾದಪೂಜೆ ನಡೆಸಿದ ಬಳಿಕ ಮಠದ ಒಳಾವರಣದಲ್ಲಿ ರಥೋತ್ಸವ ಜರುಗಿತು. ರಾಯರಿಗೆ ಮುಂಜಾನೆ ಪಂಚಾಮೃತ ಅಭಿಷೇಕ ನಡೆಯಿತು. ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.</p>.<p>ಮಠದ ಗರ್ಭಗುಡಿ ಸೇರಿದಂತೆ ಒಳಾವರಣ, ಮುಖ್ಯ ಪ್ರಾಂಗಣದಲ್ಲಿ ಮಾಡಿದ್ದ ಬಗೆಬಗೆಯ ಹೂವಿನ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು. ಬೆಳಗ್ಗೆಯಿಂದ ರಾತ್ರಿವರೆಗೂ ಭಕ್ತರು ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಮಧ್ಯಾಹ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<p>ವಿದ್ವಾನ್ ಸುಮುಖಸೂರ್ಯ ಅವರು ನಡೆಸಿಕೊಟ್ಟ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಭಕ್ತರನ್ನು ಮಂತ್ರಮುಗ್ಧಗೊಳಿಸಿತು. ವಿದ್ವಾನ್ ಕೇಶವ್ ಮೋಹನ್ಕುಮಾರ್ ಅವರು ನಡೆಸಿಕೊಟ್ಟ ಕರ್ನಾಟಕ ಶಾಸ್ತ್ರೀಯ ಪಿಟೀಲು ವಾದನ ಭಕ್ತರನ್ನು ಮನಸೂರೆಗೊಳಿಸಿತು. ವಿದ್ವಾನ್ ಭಾನುಸಿಂಹ ಅವರು ಬುಧವಾರ ದಾಸವಾಣಿ ನಡೆಸಿಕೊಟ್ಟರು.</p>.<p>ಆರಾಧನಾ ಮಹೋತ್ಸವ ಆರಂಭಕ್ಕೂ ಮುನ್ನ ಧಾನ್ಯಪೂಜೆ, ಗೋಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಗಿತ್ತು. ಗುರುವಾರ ಉತ್ತರಾಧನೆ ಅಂಗವಾಗಿ ರಥೋತ್ಸವ ನೆರವೇರಲಿದೆ. ಕಳೆದ ಮೂರು ದಿನಗಳಿಂದ ಭಕ್ತರು ಮಠಕ್ಕೆ ಸಾವಿರಾರು ಆಗಮಿಸಿ ರಾಯರ ಕೃಪೆಗೆ ಪಾತ್ರರಾದರು.</p>.<p>ಆ.23ರಂದು ಸುಜ್ಞಾನೇಂದ್ರತೀರ್ಥರ ಆರಾಧನೆಯೊಂದಿಗೆ ಮಹೋತ್ಸವ ಸಂಪನ್ನಗೊಳ್ಳಲಿದೆ ಎಂದು ಮಠದ ವ್ಯವಸ್ಥಾಪಕ ಕೆ.ಸುಧಾಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ನಗರದ ರಾಘವೇಂದ್ರ ಸ್ವಾಮಿ ಪ್ರತೀಕ ಸನ್ನಿಧಾನದಲ್ಲಿ ರಾಘವೇಂದ್ರ ತೀರ್ಥರ 353ನೇ ವರ್ಷದ ಆರಾಧನಾ ಮಹೋತ್ಸವ ಪ್ರಯುಕ್ತ ಗುರುವಾರ ಮಧ್ಯಾರಾಧನೆ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.</p>.<p>ರಾಯರ ಪಾದಪೂಜೆ ನಡೆಸಿದ ಬಳಿಕ ಮಠದ ಒಳಾವರಣದಲ್ಲಿ ರಥೋತ್ಸವ ಜರುಗಿತು. ರಾಯರಿಗೆ ಮುಂಜಾನೆ ಪಂಚಾಮೃತ ಅಭಿಷೇಕ ನಡೆಯಿತು. ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.</p>.<p>ಮಠದ ಗರ್ಭಗುಡಿ ಸೇರಿದಂತೆ ಒಳಾವರಣ, ಮುಖ್ಯ ಪ್ರಾಂಗಣದಲ್ಲಿ ಮಾಡಿದ್ದ ಬಗೆಬಗೆಯ ಹೂವಿನ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು. ಬೆಳಗ್ಗೆಯಿಂದ ರಾತ್ರಿವರೆಗೂ ಭಕ್ತರು ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದರು. ಮಧ್ಯಾಹ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<p>ವಿದ್ವಾನ್ ಸುಮುಖಸೂರ್ಯ ಅವರು ನಡೆಸಿಕೊಟ್ಟ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಭಕ್ತರನ್ನು ಮಂತ್ರಮುಗ್ಧಗೊಳಿಸಿತು. ವಿದ್ವಾನ್ ಕೇಶವ್ ಮೋಹನ್ಕುಮಾರ್ ಅವರು ನಡೆಸಿಕೊಟ್ಟ ಕರ್ನಾಟಕ ಶಾಸ್ತ್ರೀಯ ಪಿಟೀಲು ವಾದನ ಭಕ್ತರನ್ನು ಮನಸೂರೆಗೊಳಿಸಿತು. ವಿದ್ವಾನ್ ಭಾನುಸಿಂಹ ಅವರು ಬುಧವಾರ ದಾಸವಾಣಿ ನಡೆಸಿಕೊಟ್ಟರು.</p>.<p>ಆರಾಧನಾ ಮಹೋತ್ಸವ ಆರಂಭಕ್ಕೂ ಮುನ್ನ ಧಾನ್ಯಪೂಜೆ, ಗೋಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಗಿತ್ತು. ಗುರುವಾರ ಉತ್ತರಾಧನೆ ಅಂಗವಾಗಿ ರಥೋತ್ಸವ ನೆರವೇರಲಿದೆ. ಕಳೆದ ಮೂರು ದಿನಗಳಿಂದ ಭಕ್ತರು ಮಠಕ್ಕೆ ಸಾವಿರಾರು ಆಗಮಿಸಿ ರಾಯರ ಕೃಪೆಗೆ ಪಾತ್ರರಾದರು.</p>.<p>ಆ.23ರಂದು ಸುಜ್ಞಾನೇಂದ್ರತೀರ್ಥರ ಆರಾಧನೆಯೊಂದಿಗೆ ಮಹೋತ್ಸವ ಸಂಪನ್ನಗೊಳ್ಳಲಿದೆ ಎಂದು ಮಠದ ವ್ಯವಸ್ಥಾಪಕ ಕೆ.ಸುಧಾಕರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>