ಗುರುವಾರ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶಿಸಿದ್ದು ಒಂದೆರಡು ದಿನದಲ್ಲಿ ಕರ್ನಾಟಕಕ್ಕೆ ಕಾಲಿಡಲಿವೆ. ಈ ಬಾರಿ ಅವಧಿಗೂ ಮುನ್ನವೇ ಮುಂಗಾರು ಆರಂಭ ಆಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಮುಂಗಾರಿನಲ್ಲಿ ಮೈಸೂರು ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ ಎನ್ನುತ್ತಾರೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕೃಷಿ ಹವಾಮಾನ ಕ್ಷೇತ್ರ ವಿಭಾಗದ ಸಹ ಸಂಶೋಧಕ ಜಿ.ವಿ. ಸುಮಂತ್ಕುಮಾರ್.